<p><strong>ಜಮ್ಶೆಡ್ಪುರ:</strong> ಯಾವುದೇ ಪೂರಕ ದಾಖಲೆಗಳಿಲ್ಲದೆ ಸುಮಾರು ನಾಲ್ಕು ಸಾವಿರ ಜನನ ಪ್ರಮಾಣಪತ್ರಗಳನ್ನು ವಿತರಿಸಿದ ಪಂಚಾಯ್ತಿ ಕಾರ್ಯದರ್ಶಿ ಸಹಿತ ಐವರನ್ನು ಜಾರ್ಖಂಡ್ನ ಪೂರ್ವ ಸಿಂಘ್ಭಮ್ ಜಿಲ್ಲೆಯಲ್ಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p><p>‘2023ರ ಜನವರಿಯಿಂದ ಮತಿಯಬಂಧಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು 4,281 ನಕಲಿ ಜನನ ಪ್ರಮಾಣಪತ್ರಗಳನ್ನು ವಿತರಿಸಿರುವುದು ಪತ್ತೆಯಾಗಿತ್ತು. ಪ್ರಕರಣ ಕುರಿತು ಬಿಡಿಒ ಆರತಿ ಮುಂಡ ಅವರು ದೂರು ದಾಖಲಿಸಿದ್ದರು’ ಎಂದು ಜಿಲ್ಲಾಧಿಕಾರಿ ಅನನ್ಯಾ ಮಿತ್ತಲ್ ತಿಳಿಸಿದ್ದಾರೆ. ಈ ಪ್ರಕರಣ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಕೌಶಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.</p><p>ಪಂಚಾಯ್ತಿ ಕಾರ್ಯದರ್ಶಿ ಸುನಿಲ್ ಮಹತೊ (59), ಸಾರ್ವಜನಿಕ ಸೇವಾ ಕೇಂದ್ರದ ಸಪ್ನಾ ಕುಮಾರ್ ಮಹತೊ ಸೇರಿದಂತೆ ಐವರನ್ನು ಬಂಧಿಸಲಾಗಿದೆ.</p><p>ಸುಮಾರು ಮೂರು ಸಾವಿರ ಬಾಂಗ್ಲಾದೇಶದ ನುಸುಳುಕೋರರಿಗೆ ಅಕ್ರಮವಾಗಿ ಜನನ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ 13 ಬಾಂಗ್ಲಾದೇಶಿಯರನ್ನು ಉಲ್ಲೇಖಿಸಿದ್ದರು. ಜತೆಗೆ, ಬಂಧಿತರೆಲ್ಲರ ಜನನ ದಿನಾಂಕವನ್ನು ಜ. 1 ಎಂದು ನಮೂದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದನ್ನು ಹೇಳಿದ್ದರು.</p><p>ಕೃತ್ಯಕ್ಕೆ ಬಳಸಿದ ಕಂಪ್ಯೂಟರ್ಗಳು, ಪ್ರಿಂಟರ್, ಲ್ಯಾಪ್ಟಾಪ್, ಸ್ಮಾರ್ಟ್ಫೋನ್ ಮತ್ತು ಇದೇ ಪಂಚಾಯ್ತಿಗೆ ಸೇರಿದ 190 ಪ್ರಮಾಣಪತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಶೆಡ್ಪುರ:</strong> ಯಾವುದೇ ಪೂರಕ ದಾಖಲೆಗಳಿಲ್ಲದೆ ಸುಮಾರು ನಾಲ್ಕು ಸಾವಿರ ಜನನ ಪ್ರಮಾಣಪತ್ರಗಳನ್ನು ವಿತರಿಸಿದ ಪಂಚಾಯ್ತಿ ಕಾರ್ಯದರ್ಶಿ ಸಹಿತ ಐವರನ್ನು ಜಾರ್ಖಂಡ್ನ ಪೂರ್ವ ಸಿಂಘ್ಭಮ್ ಜಿಲ್ಲೆಯಲ್ಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p><p>‘2023ರ ಜನವರಿಯಿಂದ ಮತಿಯಬಂಧಿ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಟ್ಟು 4,281 ನಕಲಿ ಜನನ ಪ್ರಮಾಣಪತ್ರಗಳನ್ನು ವಿತರಿಸಿರುವುದು ಪತ್ತೆಯಾಗಿತ್ತು. ಪ್ರಕರಣ ಕುರಿತು ಬಿಡಿಒ ಆರತಿ ಮುಂಡ ಅವರು ದೂರು ದಾಖಲಿಸಿದ್ದರು’ ಎಂದು ಜಿಲ್ಲಾಧಿಕಾರಿ ಅನನ್ಯಾ ಮಿತ್ತಲ್ ತಿಳಿಸಿದ್ದಾರೆ. ಈ ಪ್ರಕರಣ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ ಕೌಶಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.</p><p>ಪಂಚಾಯ್ತಿ ಕಾರ್ಯದರ್ಶಿ ಸುನಿಲ್ ಮಹತೊ (59), ಸಾರ್ವಜನಿಕ ಸೇವಾ ಕೇಂದ್ರದ ಸಪ್ನಾ ಕುಮಾರ್ ಮಹತೊ ಸೇರಿದಂತೆ ಐವರನ್ನು ಬಂಧಿಸಲಾಗಿದೆ.</p><p>ಸುಮಾರು ಮೂರು ಸಾವಿರ ಬಾಂಗ್ಲಾದೇಶದ ನುಸುಳುಕೋರರಿಗೆ ಅಕ್ರಮವಾಗಿ ಜನನ ಪ್ರಮಾಣಪತ್ರ ವಿತರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇತ್ತೀಚೆಗೆ ಬಂಧಿಸಿದ್ದ 13 ಬಾಂಗ್ಲಾದೇಶಿಯರನ್ನು ಉಲ್ಲೇಖಿಸಿದ್ದರು. ಜತೆಗೆ, ಬಂಧಿತರೆಲ್ಲರ ಜನನ ದಿನಾಂಕವನ್ನು ಜ. 1 ಎಂದು ನಮೂದಿಸಿದ್ದನ್ನು ಪೊಲೀಸರು ಪತ್ತೆ ಮಾಡಿದ್ದನ್ನು ಹೇಳಿದ್ದರು.</p><p>ಕೃತ್ಯಕ್ಕೆ ಬಳಸಿದ ಕಂಪ್ಯೂಟರ್ಗಳು, ಪ್ರಿಂಟರ್, ಲ್ಯಾಪ್ಟಾಪ್, ಸ್ಮಾರ್ಟ್ಫೋನ್ ಮತ್ತು ಇದೇ ಪಂಚಾಯ್ತಿಗೆ ಸೇರಿದ 190 ಪ್ರಮಾಣಪತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>