<p><strong>ಮುಂಬೈ:</strong> ಅಹಲ್ಯಾನಗರ ಜಿಲ್ಲೆಯಲ್ಲಿ ₹6.94 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ‘ನಕಲಿ ನಿರ್ಣಯ’ದ (ಜಿ.ಆರ್) ಮೂಲಕ ನೀಡಲಾಗಿದ್ದ ಮಂಜೂರಾತಿ ಮತ್ತು ಟೆಂಡರ್ಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ತನಿಖೆ ನಡೆಸುತ್ತಿದೆ. </p>.<p>ಕಳೆದ ನವೆಂಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆದಿತ್ತು. ಅದಕ್ಕೂ ಮೊದಲು ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸುವ ಕೆಲವೇ ದಿನಗಳ ಮುನ್ನ ಈ ‘ನಕಲಿ ನಿರ್ಣಯ’ವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಸರಿನಡಿ ಹೊರಡಿಸಲಾಗಿತ್ತು.</p>.<p class="title">ಒಟ್ಟು 45 ಕಾಮಗಾರಿಗಳಿಗಾಗಿ ಜಿಲ್ಲಾ ಮಟ್ಟದಲ್ಲಿ ಟೆಂಡರ್ಗಳನ್ನು ಕರೆಯಲಾಗಿದ್ದು, ಅದಕ್ಕೆ ಅನುಮೋದನೆ ಕೂಡ ದೊರಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p class="title">ಗುತ್ತಿಗೆದಾರರು ಹಣದ ಪಾವತಿಗಾಗಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆಗ, ಆ ದಿನಾಂಕದಲ್ಲಿ ಯಾವುದೇ ‘ಜಿ.ಆರ್’ ಹೊರಡಿಸಿರಲಿಲ್ಲ ಎನ್ನುವುದು ತಿಳಿದುಬಂದಿದೆ. ಇದು ವಂಚನೆಯ ಪ್ರಕರಣ ಎಂದು ಗೊತ್ತಾಯಿತು. ಕೂಡಲೇ ಗುತ್ತಿಗೆದಾರರಿಗೆ ಕಾಮಗಾರಿಯ ಹಣವನ್ನು ಮಂಜೂರು ಮಾಡದೆ ತಡೆಹಿಡಿಯಲಾಯಿತು. ಪ್ರಕರಣದ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಅಹಲ್ಯಾನಗರ ಜಿಲ್ಲೆಯಲ್ಲಿ ₹6.94 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ‘ನಕಲಿ ನಿರ್ಣಯ’ದ (ಜಿ.ಆರ್) ಮೂಲಕ ನೀಡಲಾಗಿದ್ದ ಮಂಜೂರಾತಿ ಮತ್ತು ಟೆಂಡರ್ಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯು ತನಿಖೆ ನಡೆಸುತ್ತಿದೆ. </p>.<p>ಕಳೆದ ನವೆಂಬರ್ನಲ್ಲಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆದಿತ್ತು. ಅದಕ್ಕೂ ಮೊದಲು ಚುನಾವಣಾ ನೀತಿ ಸಂಹಿತೆ ಜಾರಿಗೊಳಿಸುವ ಕೆಲವೇ ದಿನಗಳ ಮುನ್ನ ಈ ‘ನಕಲಿ ನಿರ್ಣಯ’ವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಸರಿನಡಿ ಹೊರಡಿಸಲಾಗಿತ್ತು.</p>.<p class="title">ಒಟ್ಟು 45 ಕಾಮಗಾರಿಗಳಿಗಾಗಿ ಜಿಲ್ಲಾ ಮಟ್ಟದಲ್ಲಿ ಟೆಂಡರ್ಗಳನ್ನು ಕರೆಯಲಾಗಿದ್ದು, ಅದಕ್ಕೆ ಅನುಮೋದನೆ ಕೂಡ ದೊರಕಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<p class="title">ಗುತ್ತಿಗೆದಾರರು ಹಣದ ಪಾವತಿಗಾಗಿ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ಇಲಾಖೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಆಗ, ಆ ದಿನಾಂಕದಲ್ಲಿ ಯಾವುದೇ ‘ಜಿ.ಆರ್’ ಹೊರಡಿಸಿರಲಿಲ್ಲ ಎನ್ನುವುದು ತಿಳಿದುಬಂದಿದೆ. ಇದು ವಂಚನೆಯ ಪ್ರಕರಣ ಎಂದು ಗೊತ್ತಾಯಿತು. ಕೂಡಲೇ ಗುತ್ತಿಗೆದಾರರಿಗೆ ಕಾಮಗಾರಿಯ ಹಣವನ್ನು ಮಂಜೂರು ಮಾಡದೆ ತಡೆಹಿಡಿಯಲಾಯಿತು. ಪ್ರಕರಣದ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>