<p><strong>ತಿರುವನಂತಪುರ:</strong> ಕಳೆದ ಲೋಕಸಭಾ ಚುನಾವಣೆಗೆ ಮುನ್ನ ಕೇರಳದ ತ್ರಿಶ್ಶೂರ್ ಕ್ಷೇತ್ರದಲ್ಲಿ ಬಿಜೆಪಿಯವರು ಸುಮಾರು 30,000 ‘ನಕಲಿ ಮತದಾರರನ್ನು’ ಮತದಾರರ ಪಟ್ಟಿಗೆ ಸೇರಿಸಿರುವ ಮಾಹಿತಿ ಲಭಿಸಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ ಭಾನುವಾರ ಆರೋಪಿಸಿದ್ದಾರೆ.</p><p>ತ್ರಿಶ್ಶೂರ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸಮೀಪದ ಸ್ಥಳಗಳ ಹಲವು ವ್ಯಕ್ತಿಗಳನ್ನು ಸೇರಿಸಲಾಗಿದೆ ಎಂದು ಹೇಳಲಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಸಂಸ್ಥೆಯ ಸ್ಥಾನಮಾನವನ್ನು ಮರೆತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಸಹಾಯಕನಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ. </p><p>ಕಳೆದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಹೊರಗೆಳೆಯುವ ಕೆಲಸವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಹೇಳಿದ್ದಾರೆ.</p><p>ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ನೀಡಿರುವ ಸಲಹೆಗಳನ್ನು ಪರಿಗಣಿಸದೆ, ತನಗೆ ಬೇಕಾದವರನ್ನು ಚುನಾವಣಾ ಆಯೋಗದ ವಿವಿಧ ಹುದ್ದೆಗಳಿಗೆ ನೇಮಿಸಿದೆ. ಇದೀಗ ಅವರು ‘ಮೋಸದಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>‘ಒಂದೆಡೆ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನೆಪದಲ್ಲಿ ಅರ್ಹ ಮತದಾರರ ಹೆಸರನ್ನು ಅಳಿಸುತ್ತಿದ್ದಾರೆ. ಮತ್ತೊಂದೆಡೆ, ಒಂದು ಸ್ಥಳದಲ್ಲಿ ಎರಡು ದಿನಗಳಿಗಿಂತ ಹೆಚ್ಚು ನೆಲಸದೆ ಇರುವವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ’ ಎಂದು ಟೀಕಿಸಿದರು.</p><p>ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ ಒಬ್ಬ ವ್ಯಕ್ತಿ ಕನಿಷ್ಠ ಆರು ತಿಂಗಳ ಕಾಲ ಒಂದು ಸ್ಥಳದ ನಿವಾಸಿಯಾಗಿರಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ ಎಂದು ದೂರಿದರು. </p>.ಮತ ಕಳವು | ನಾಳೆ ‘ಇಂಡಿಯಾ’ ಬಣದಿಂದ ಚುನಾವಣಾ ಆಯೋಗ ಕಚೇರಿಗೆ ಪಾದಯಾತ್ರೆ.ರಾಹುಲ್ ಗಾಂಧಿ ಆರೋಪದಲ್ಲಿ ಹುರುಳಿಲ್ಲ: ಅನಿಲ್ ಕುಮಾರ್ ಮೋಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕಳೆದ ಲೋಕಸಭಾ ಚುನಾವಣೆಗೆ ಮುನ್ನ ಕೇರಳದ ತ್ರಿಶ್ಶೂರ್ ಕ್ಷೇತ್ರದಲ್ಲಿ ಬಿಜೆಪಿಯವರು ಸುಮಾರು 30,000 ‘ನಕಲಿ ಮತದಾರರನ್ನು’ ಮತದಾರರ ಪಟ್ಟಿಗೆ ಸೇರಿಸಿರುವ ಮಾಹಿತಿ ಲಭಿಸಿದೆ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ ಬೇಬಿ ಭಾನುವಾರ ಆರೋಪಿಸಿದ್ದಾರೆ.</p><p>ತ್ರಿಶ್ಶೂರ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸಮೀಪದ ಸ್ಥಳಗಳ ಹಲವು ವ್ಯಕ್ತಿಗಳನ್ನು ಸೇರಿಸಲಾಗಿದೆ ಎಂದು ಹೇಳಲಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.</p><p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಚುನಾವಣಾ ಆಯೋಗವು ತನ್ನ ಸಾಂವಿಧಾನಿಕ ಸಂಸ್ಥೆಯ ಸ್ಥಾನಮಾನವನ್ನು ಮರೆತು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಸಹಾಯಕನಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ. </p><p>ಕಳೆದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ಹೊರಗೆಳೆಯುವ ಕೆಲಸವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ ಎಂದು ಹೇಳಿದ್ದಾರೆ.</p><p>ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್ ನೀಡಿರುವ ಸಲಹೆಗಳನ್ನು ಪರಿಗಣಿಸದೆ, ತನಗೆ ಬೇಕಾದವರನ್ನು ಚುನಾವಣಾ ಆಯೋಗದ ವಿವಿಧ ಹುದ್ದೆಗಳಿಗೆ ನೇಮಿಸಿದೆ. ಇದೀಗ ಅವರು ‘ಮೋಸದಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದ್ದಾರೆ.</p><p>‘ಒಂದೆಡೆ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ನೆಪದಲ್ಲಿ ಅರ್ಹ ಮತದಾರರ ಹೆಸರನ್ನು ಅಳಿಸುತ್ತಿದ್ದಾರೆ. ಮತ್ತೊಂದೆಡೆ, ಒಂದು ಸ್ಥಳದಲ್ಲಿ ಎರಡು ದಿನಗಳಿಗಿಂತ ಹೆಚ್ಚು ನೆಲಸದೆ ಇರುವವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುತ್ತಿದ್ದಾರೆ’ ಎಂದು ಟೀಕಿಸಿದರು.</p><p>ಒಂದು ನಿರ್ದಿಷ್ಟ ಕ್ಷೇತ್ರದಲ್ಲಿ ಮತದಾನದ ಹಕ್ಕು ಪಡೆಯಬೇಕಾದರೆ ಒಬ್ಬ ವ್ಯಕ್ತಿ ಕನಿಷ್ಠ ಆರು ತಿಂಗಳ ಕಾಲ ಒಂದು ಸ್ಥಳದ ನಿವಾಸಿಯಾಗಿರಬೇಕು ಎಂಬ ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ ಎಂದು ದೂರಿದರು. </p>.ಮತ ಕಳವು | ನಾಳೆ ‘ಇಂಡಿಯಾ’ ಬಣದಿಂದ ಚುನಾವಣಾ ಆಯೋಗ ಕಚೇರಿಗೆ ಪಾದಯಾತ್ರೆ.ರಾಹುಲ್ ಗಾಂಧಿ ಆರೋಪದಲ್ಲಿ ಹುರುಳಿಲ್ಲ: ಅನಿಲ್ ಕುಮಾರ್ ಮೋಕಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>