ಬಿಜೆಪಿ ಸರ್ಕಾರ ಹಾಗೂ ನಾಯಕರು ಜನರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಸಾರ್ವತ್ರಿಕ ದಾಖಲೆ ನಿರ್ಮಿಸಲು ಹೊರಟಿದ್ದಾರೆಯೇ?, ಇಂತಹ ಅನೇಕ ಪ್ರಕರಣಗಳು ಉತ್ತರ ಪ್ರದೇಶದಲ್ಲೂ ನಡೆದಿವೆ. ಇಂತಹ ಬೆಳವಣಿಗೆಗಳನ್ನು ಗಮನಿಸುತ್ತಿರುವ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಖಿಲೇಶ್ ಖಾಸಗಿ ಸುದ್ದಿ ಸಂಸ್ಥೆಗೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿಲ್ಲ, ಮುಖ್ಯಮಂತ್ರಿಗಳನ್ನೇ ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸಿದೆ. ಸೋಲಿನ ಭೀತಿಯಿಂದ ಬಿಜೆಪಿ ಹೀಗೆ ಮಾಡುತ್ತಿಲ್ಲ, ಬಿಜೆಪಿ ಈಗಾಗಲೇ ಸೋತಿದೆ ಎಂದು ಅಖಿಲೇಶ್ ಕಿಡಿಕಾರಿದ್ದಾರೆ.
ದೇಶದ ಯುವಕರು, ಕಾರ್ಮಿಕರು ಹಾಗೂ ರೈತರು ಮತದಾನದ ಮೂಲಕವೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಉತ್ತರ ನೀಡಲಿದ್ದಾರೆ ಎಂದರು.