<p>ಲಖನೌ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಸುಳ್ಳು ಪ್ರಕರಣಗಳಲ್ಲಿ ಜನರನ್ನು ಸಿಲುಕಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.ಕೇಜ್ರಿವಾಲ್ ಶೀಘ್ರ ಜೈಲಿನಿಂದ ಬಿಡುಗಡೆ; ದೇಶದಲ್ಲಿ ಕ್ರಾಂತಿ ಸೃಷ್ಟಿ: ಭಗವಂತ ಮಾನ್.<p>ಬಿಜೆಪಿ ಸರ್ಕಾರ ಹಾಗೂ ನಾಯಕರು ಜನರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಸಾರ್ವತ್ರಿಕ ದಾಖಲೆ ನಿರ್ಮಿಸಲು ಹೊರಟಿದ್ದಾರೆಯೇ?, ಇಂತಹ ಅನೇಕ ಪ್ರಕರಣಗಳು ಉತ್ತರ ಪ್ರದೇಶದಲ್ಲೂ ನಡೆದಿವೆ. ಇಂತಹ ಬೆಳವಣಿಗೆಗಳನ್ನು ಗಮನಿಸುತ್ತಿರುವ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಖಿಲೇಶ್ ಖಾಸಗಿ ಸುದ್ದಿ ಸಂಸ್ಥೆಗೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. </p><p>ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿಲ್ಲ, ಮುಖ್ಯಮಂತ್ರಿಗಳನ್ನೇ ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸಿದೆ. ಸೋಲಿನ ಭೀತಿಯಿಂದ ಬಿಜೆಪಿ ಹೀಗೆ ಮಾಡುತ್ತಿಲ್ಲ, ಬಿಜೆಪಿ ಈಗಾಗಲೇ ಸೋತಿದೆ ಎಂದು ಅಖಿಲೇಶ್ ಕಿಡಿಕಾರಿದ್ದಾರೆ.</p><p>ದೇಶದ ಯುವಕರು, ಕಾರ್ಮಿಕರು ಹಾಗೂ ರೈತರು ಮತದಾನದ ಮೂಲಕವೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಉತ್ತರ ನೀಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಖನೌ: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಸುಳ್ಳು ಪ್ರಕರಣಗಳಲ್ಲಿ ಜನರನ್ನು ಸಿಲುಕಿಸುವ ಮೂಲಕ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.</p>.ಕೇಜ್ರಿವಾಲ್ ಶೀಘ್ರ ಜೈಲಿನಿಂದ ಬಿಡುಗಡೆ; ದೇಶದಲ್ಲಿ ಕ್ರಾಂತಿ ಸೃಷ್ಟಿ: ಭಗವಂತ ಮಾನ್.<p>ಬಿಜೆಪಿ ಸರ್ಕಾರ ಹಾಗೂ ನಾಯಕರು ಜನರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಸಾರ್ವತ್ರಿಕ ದಾಖಲೆ ನಿರ್ಮಿಸಲು ಹೊರಟಿದ್ದಾರೆಯೇ?, ಇಂತಹ ಅನೇಕ ಪ್ರಕರಣಗಳು ಉತ್ತರ ಪ್ರದೇಶದಲ್ಲೂ ನಡೆದಿವೆ. ಇಂತಹ ಬೆಳವಣಿಗೆಗಳನ್ನು ಗಮನಿಸುತ್ತಿರುವ ಜನರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಖಿಲೇಶ್ ಖಾಸಗಿ ಸುದ್ದಿ ಸಂಸ್ಥೆಗೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. </p><p>ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಇ.ಡಿ ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕೇವಲ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಿಲ್ಲ, ಮುಖ್ಯಮಂತ್ರಿಗಳನ್ನೇ ಮುಟ್ಟುಗೋಲು ಹಾಕಿಕೊಳ್ಳಲು ಪ್ರಯತ್ನಿಸಿದೆ. ಸೋಲಿನ ಭೀತಿಯಿಂದ ಬಿಜೆಪಿ ಹೀಗೆ ಮಾಡುತ್ತಿಲ್ಲ, ಬಿಜೆಪಿ ಈಗಾಗಲೇ ಸೋತಿದೆ ಎಂದು ಅಖಿಲೇಶ್ ಕಿಡಿಕಾರಿದ್ದಾರೆ.</p><p>ದೇಶದ ಯುವಕರು, ಕಾರ್ಮಿಕರು ಹಾಗೂ ರೈತರು ಮತದಾನದ ಮೂಲಕವೇ ಮುಂದಿನ ದಿನಗಳಲ್ಲಿ ಬಿಜೆಪಿಗೆ ಉತ್ತರ ನೀಡಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>