<p><strong>ಫಾಲ್ಟಾ:</strong> ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಶೇಷ ಪ್ಯಾಕೇಜ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಣದಿಂದ ಹಿಂದೆ ಸರಿಯುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಜಹಾಂಗೀರ್ ಖಾನ್ ಘೋಷಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಹಾಂಗೀರ್, ಫಾಲ್ಟಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಫಾಲ್ಟಾ ಕ್ಷೇತ್ರದ ಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. </p><p>ನಾನು ಫಾಲ್ಟಾದ ಪುತ್ರನಾಗಿದ್ದು, ಈ ಪ್ರದೇಶವು ಶಾಂತಿಯಿಂದ ಇರಬೇಕು ಮತ್ತು ಅಭಿವೃದ್ಧಿ ಸಾಧಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ. </p><p>ಜಹಾಂಗೀರ್ ಖಾನ್ ಅವರು ಫಾಲ್ಟಾ ಮರು ಮತದಾನದಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅದರ ಹಿಂದಿನ ಸರಿಯಾದ ಕಾರಣ ತಿಳಿದು ಬಂದಿಲ್ಲ ಎಂದು ಟಿಎಂಸಿ ವಕ್ತಾರ ಅರೂಪ್ ಚಕ್ರವರ್ತಿ ತಿಳಿಸಿದ್ದಾರೆ. </p><p>ಮತ್ತೊಂದೆಡೆ ಮತಗಟ್ಟೆ ಏಜೆಂಟ್ ಸಿಗದ ಹಿನ್ನೆಲೆಯಲ್ಲಿ ಟಿಎಂಸಿ ಅಭ್ಯರ್ಥಿ ಪಲಾಯನಗೈದಿದ್ದಾರೆ ಎಂದು ಸುವೇಂದು ಅಧಿಕಾರಿ ಟೀಕಿಸಿದ್ದಾರೆ. </p><p> 'ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಮತದಾನದ ವೇಳೆ ಹಲವಾರು ಚುನಾವಣಾ ಅಪರಾಧಗಳು ನಡೆದಿವೆ' ಎಂಬ ಕಾರಣ ನೀಡಿ ಚುನಾವಣಾ ಆಯೋಗವು ಈ ಕ್ಷೇತ್ರದಲ್ಲಿ ಮೇ 21ರಂದು ಹೊಸದಾಗಿ ಮತದಾನಕ್ಕೆ ಆದೇಶಿಸಿದೆ. ಈ ಕ್ಷೇತ್ರದ ಮತ ಎಣಿಕೆ ಮೇ 24ರಂದು ನಡೆಯಲಿದೆ.</p>.ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಆಪ್ತನ ಹತ್ಯೆ: ಪ್ರಮುಖ ಆರೋಪಿ ಬಂಧನ.ಪಶ್ಚಿಮ ಬಂಗಾಳ | ಚುನಾವಣೋತ್ತರ ಹಿಂಸಾಚಾರ: 181 ಹೊಸ ಎಫ್ಐಆರ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಫಾಲ್ಟಾ:</strong> ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿಶೇಷ ಪ್ಯಾಕೇಜ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಣದಿಂದ ಹಿಂದೆ ಸರಿಯುವುದಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಜಹಾಂಗೀರ್ ಖಾನ್ ಘೋಷಿಸಿದ್ದಾರೆ. </p><p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಹಾಂಗೀರ್, ಫಾಲ್ಟಾ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಫಾಲ್ಟಾ ಕ್ಷೇತ್ರದ ಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. </p><p>ನಾನು ಫಾಲ್ಟಾದ ಪುತ್ರನಾಗಿದ್ದು, ಈ ಪ್ರದೇಶವು ಶಾಂತಿಯಿಂದ ಇರಬೇಕು ಮತ್ತು ಅಭಿವೃದ್ಧಿ ಸಾಧಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ. </p><p>ಜಹಾಂಗೀರ್ ಖಾನ್ ಅವರು ಫಾಲ್ಟಾ ಮರು ಮತದಾನದಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಅದರ ಹಿಂದಿನ ಸರಿಯಾದ ಕಾರಣ ತಿಳಿದು ಬಂದಿಲ್ಲ ಎಂದು ಟಿಎಂಸಿ ವಕ್ತಾರ ಅರೂಪ್ ಚಕ್ರವರ್ತಿ ತಿಳಿಸಿದ್ದಾರೆ. </p><p>ಮತ್ತೊಂದೆಡೆ ಮತಗಟ್ಟೆ ಏಜೆಂಟ್ ಸಿಗದ ಹಿನ್ನೆಲೆಯಲ್ಲಿ ಟಿಎಂಸಿ ಅಭ್ಯರ್ಥಿ ಪಲಾಯನಗೈದಿದ್ದಾರೆ ಎಂದು ಸುವೇಂದು ಅಧಿಕಾರಿ ಟೀಕಿಸಿದ್ದಾರೆ. </p><p> 'ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಮತದಾನದ ವೇಳೆ ಹಲವಾರು ಚುನಾವಣಾ ಅಪರಾಧಗಳು ನಡೆದಿವೆ' ಎಂಬ ಕಾರಣ ನೀಡಿ ಚುನಾವಣಾ ಆಯೋಗವು ಈ ಕ್ಷೇತ್ರದಲ್ಲಿ ಮೇ 21ರಂದು ಹೊಸದಾಗಿ ಮತದಾನಕ್ಕೆ ಆದೇಶಿಸಿದೆ. ಈ ಕ್ಷೇತ್ರದ ಮತ ಎಣಿಕೆ ಮೇ 24ರಂದು ನಡೆಯಲಿದೆ.</p>.ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಆಪ್ತನ ಹತ್ಯೆ: ಪ್ರಮುಖ ಆರೋಪಿ ಬಂಧನ.ಪಶ್ಚಿಮ ಬಂಗಾಳ | ಚುನಾವಣೋತ್ತರ ಹಿಂಸಾಚಾರ: 181 ಹೊಸ ಎಫ್ಐಆರ್ ದಾಖಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>