<p><strong>ನವದೆಹಲಿ</strong>: ಕರ್ತವ್ಯನಿರತರಾಗಿದ್ದಾಗ ಹುತಾತ್ಮರಾದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬದವರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂಬ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳ ಮಾಹಿತಿ ಸುಳ್ಳು ಎಂದು ಭಾರತೀಯ ಸೇನೆ ಬುಧವಾರ ಸ್ಪಷ್ಟನೆ ನೀಡಿದೆ.</p>.<p>‘ಅಜಯ್ ಕುಮಾರ್ ಅವರ ಕುಟುಂಬದವರಿಗೆ ಈಗಾಗಲೇ ಪರಿಹಾರದ ಮೊತ್ತದಲ್ಲಿ ₹98.39 ಲಕ್ಷವನ್ನು ನೀಡಲಾಗಿದೆ. ಅವರಿಗೆ ಸಂದಾಯವಾಗಲಿರುವ ಒಟ್ಟು ಪರಿಹಾರದ ಮೊತ್ತ ಸುಮಾರು ₹1.65 ಕೋಟಿ’ ಎಂದು ಸೇನಾ ಪಡೆಯ ಸಾರ್ವಜನಿಕ ಮಾಹಿತಿ ವಿಭಾಗದ ಅಡಿಷನಲ್ ಡೈರೆಕ್ಟೊರೇಟ್ ಜನರಲ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಅಜಯ್ ಕುಮಾರ್ ತಂದೆಯವರದ್ದು ಎನ್ನಲಾದ ವಿಡಿಯೊ ಒಂದು ಹರಿದಾಡಿದ್ದು, ತಮಗೆ ಪರಿಹಾರ ಬಂದಿಲ್ಲ ಎಂಬ ಹೇಳಿಕೆ ಅದರಲ್ಲಿ ಇತ್ತು. ಆ ವಿಡಿಯೊವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದರು.</p><p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹುತಾತ್ಮ ಅಗ್ನಿವೀರರ ವಿಷಯದಲ್ಲಿ ಸಂಸತ್ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಕ್ಷಮೆ ಕೇಳಬೇಕು ಎಂದೂ ಪೋಸ್ಟ್ ಮೂಲಕ ಆಗ್ರಹಿಸಿದ್ದರು. ಇದಕ್ಕೆ ಭಾರತೀಯ ಸೇನೆಯು ಪೋಸ್ಟ್ ಮೂಲಕವೇ ಪ್ರತಿಕ್ರಿಯೆ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕರ್ತವ್ಯನಿರತರಾಗಿದ್ದಾಗ ಹುತಾತ್ಮರಾದ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬದವರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂಬ ಸಾಮಾಜಿಕ ಮಾಧ್ಯಮದ ಪೋಸ್ಟ್ಗಳ ಮಾಹಿತಿ ಸುಳ್ಳು ಎಂದು ಭಾರತೀಯ ಸೇನೆ ಬುಧವಾರ ಸ್ಪಷ್ಟನೆ ನೀಡಿದೆ.</p>.<p>‘ಅಜಯ್ ಕುಮಾರ್ ಅವರ ಕುಟುಂಬದವರಿಗೆ ಈಗಾಗಲೇ ಪರಿಹಾರದ ಮೊತ್ತದಲ್ಲಿ ₹98.39 ಲಕ್ಷವನ್ನು ನೀಡಲಾಗಿದೆ. ಅವರಿಗೆ ಸಂದಾಯವಾಗಲಿರುವ ಒಟ್ಟು ಪರಿಹಾರದ ಮೊತ್ತ ಸುಮಾರು ₹1.65 ಕೋಟಿ’ ಎಂದು ಸೇನಾ ಪಡೆಯ ಸಾರ್ವಜನಿಕ ಮಾಹಿತಿ ವಿಭಾಗದ ಅಡಿಷನಲ್ ಡೈರೆಕ್ಟೊರೇಟ್ ಜನರಲ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಅಜಯ್ ಕುಮಾರ್ ತಂದೆಯವರದ್ದು ಎನ್ನಲಾದ ವಿಡಿಯೊ ಒಂದು ಹರಿದಾಡಿದ್ದು, ತಮಗೆ ಪರಿಹಾರ ಬಂದಿಲ್ಲ ಎಂಬ ಹೇಳಿಕೆ ಅದರಲ್ಲಿ ಇತ್ತು. ಆ ವಿಡಿಯೊವನ್ನು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದರು.</p><p>ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹುತಾತ್ಮ ಅಗ್ನಿವೀರರ ವಿಷಯದಲ್ಲಿ ಸಂಸತ್ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ, ಅದಕ್ಕೆ ಕ್ಷಮೆ ಕೇಳಬೇಕು ಎಂದೂ ಪೋಸ್ಟ್ ಮೂಲಕ ಆಗ್ರಹಿಸಿದ್ದರು. ಇದಕ್ಕೆ ಭಾರತೀಯ ಸೇನೆಯು ಪೋಸ್ಟ್ ಮೂಲಕವೇ ಪ್ರತಿಕ್ರಿಯೆ ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>