ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ನ ಹಿರಿಯ ಸಂಸದ ಅಹ್ಮದ್ ಪಟೇಲ್, 'ಈ ದಿನವು ಇತಿಹಾಸದಲ್ಲಿ ಕಪ್ಪು ದಿನವೆಂದು ಗುರುತಿಸ್ಪಡುತ್ತದೆ. ಈ ಮಸೂದೆಗಳನ್ನು ಅಂಗೀಕರಿಸಿದ ವಿಧಾನವು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ವಿರುದ್ಧವಾಗಿದೆ. ಇದರಿಂದ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. 12 ವಿರೋಧ ಪಕ್ಷಗಳು ರಾಜ್ಯಸಭೆಯ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ' ಎಂದು ಸ್ಪಷ್ಟಪಡಿಸಿದ್ದಾರೆ.