<p><strong>ಚಂಡೀಗಡ/ನವದೆಹಲಿ: </strong>ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ ಪಂಜಾಬ್ನಲ್ಲಿ ಗುರುವಾರದಿಂದ ಮೂರು ದಿನಗಳ ‘ರೈಲ್ ರೋಕೊ’ ಆರಂಭವಾಗಿದೆ. ಇದರ ಜೊತೆಗೆ ಸೆ.25ರಂದು ಪಂಜಾಬ್ ಸಂಪೂರ್ಣ ಬಂದ್ಗೆ 31 ರೈತ ಸಂಘಟನೆಗಳು ಕರೆ ನೀಡಿವೆ.</p>.<p>ರೈಲ್ ರೋಕೊಗೆ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಕರೆ ಕೊಟ್ಟಿದೆ. ಇದಕ್ಕೆ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ಬರ್ನಾಲಾ ಮತ್ತು ಸಂಗ್ರೂರ್ನಲ್ಲಿ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.</p>.<p>ಅಮೃತಸರ ಸಮೀಪದ ದೇವಿದಾಸಪುರ ಗ್ರಾಮ ಹಾಗೂ ಫೆರೋಜ್ಪುರದ ಬಸ್ತಿ ಟಂಕವಾಲಾದಲ್ಲಿ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ರೈಲು ತಡೆ ನಡೆಸಿತು. ಸರ್ಕಾರಿ ನೌಕರರು ಹಾಗೂ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳಿಂದ ತಮಗೆ ಬೆಂಬಲ ಸಿಕ್ಕಿದೆ ಎಂದು ಸಮಿತಿಯ ಪದಾಧಿಕಾರಿಗಳು ಹೇಳಿಕೊಂಡಿದ್ದಾರೆ.</p>.<p>ರೈತರ ಪ್ರತಿಭಟನೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಸಚಿವರು, ಸಂಸದರು ಹಾಗೂ ಶಾಸಕರು ಭಾಗಿಯಾಗಬಾರದು ಎಂದು ಸಮಿತಿಯ ಅಧ್ಯಕ್ಷ ಸತ್ನಾಮ್ ಸಿಂಗ್ ಪನ್ನು ಹೇಳಿದ್ದಾರೆ.</p>.<p>ಬಿಜೆಪಿ ನಾಯಕರಿಗೆ ಘೆರಾವ್ ಹಾಕಲು, ಮಸೂದೆ ಪರವಾಗಿ ಮತ ಚಲಾಯಿಸಿದವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲು ಸಮಿತಿ ನಿರ್ಧರಿಸಿದೆ.</p>.<p>‘ಮಸೂದೆಯು ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತುಹಾಕಲಿದ್ದು, ರೈತರು ಬೃಹತ್ ಕಾರ್ಪೊರೇಟ್ ಕಂಪನಿಗಳ ಮುಲಾಜಿನಲ್ಲಿ ಬದುಕಬೇಕಾಗುತ್ತದೆ’ ಎಂದು ರೈತರು ಆರೋಪಿಸಿದ್ದಾರೆ.</p>.<p><strong>ರೈತರ ಹಿತ ಬಲಿಕೊಡಲು ಬಿಡೆವು:</strong> ರೈತರ ಹಿತ ಬಲಿಕೊಡಲು ಬಿಜೆಪಿ ಸರ್ಕಾರಕ್ಕೆ ಬಿಡುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಘಟಕ ಗುರುವಾರ ಹೇಳಿದೆ.</p>.<p>ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿರುವ ಪಕ್ಷ, ಮೊದಲಿಗೆ ಸೆ.26ರಂದು ‘ರೈತರ ಪರವಾಗಿ ಮಾತನಾಡಿ’ ಎಂಬಆನ್ಲೈನ್ ಕಾರ್ಯಕ್ರಮ ಹಮ್ಮಿಕೊಂಡಿದೆ. ನಂತರ ಸೆ.28ರಂದು ರಾಜಭವನದವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಅ. 2ರಂದು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ, ಧರಣಿ ನಡೆಸಲು ತೀರ್ಮಾನಿಸಲಾಗಿದೆ.</p>.<p><strong>ಸರಕು ಪೂರೈಕೆಗೆ ಅಡ್ಡಿ ಸಾಧ್ಯತೆ</strong><br />ಪಂಜಾಬ್ನಲ್ಲಿ ರೈತರ ಪ್ರತಿಭಟನೆಯಿಂದ ಸರಕು ಸಾಗಣೆ ಹಾಗೂ ವಿಶೇಷ ರೈಲುಗಳ ಓಡಾಟದ ಮೇಲೆ ಪರಿಣಾಮ ಬೀರಲಿದ್ದು,ಆಹಾರ ಧಾನ್ಯಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಸೆ.24ರಿಂದ 26ರವರೆಗೆ ಸುಮಾರು 20 ರೈಲುಗಳ ಸಂಚಾರ ಭಾಗಶಃ ರದ್ದುಗೊಂಡಿದ್ದು, ಐದು ರೈಲುಗಳ ಓಡಾಟವನ್ನು ಅಲ್ಪ ಅವಧಿಯವರೆಗೆ ತಡೆಹಿಡಿಯಲಾಗಿದೆ.</p>.<p>ಯಾವುದೇ ಅಹಿತಕರ ಘಟನೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ಹೇಳಿದೆ.</p>.<p>ರಾಜ್ಯಕ್ಕೆ ಪ್ರತಿನಿತ್ಯ 20 ರೇಕ್ ಗಳಷ್ಟು ಕಲ್ಲಿದ್ದಲು, ಆಹಾರ ಧಾನ್ಯ, ಕೃಷಿ ಉಪಕರಣ, ಯಂತ್ರೋಪಕರಣ, ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ಆಮದು ರಸಗೊಬ್ಬರಗಳು ರೈಲುಗಳ ಮೂಲಕ ಪೂರೈಕೆಯಾಗುತ್ತವೆ. ರೈಲು ತಡೆಯಿಂದ ಇವುಗಳ ಸಾಗಣೆಗೆ ತೀವ್ರ ತರದ ತೊಂದರೆಯಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>**<br />ಕಾಯ್ದೆ ಜಾರಿಗೆ ಮುನ್ನ ರಾಜ್ಯ ಸರ್ಕಾರ, ರೈತರು, ರೈತ ಸಂಘಟನೆಗಳು, ಆರ್ಎಸ್ಎಸ್ ಜತೆಗಿನ ಸಂಘಟನೆಗಳನ್ನು ಕೇಂದ್ರ ಸರ್ಕಾರ ಸಂಪರ್ಕಿಸಿಲ್ಲ.<br /><em><strong>-ರಾಜೀವ್ ಸತವ್, ಕಾಂಗ್ರೆಸ್ನ ಗುಜರಾತ್ ಘಟಕದ ಉಸ್ತುವಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ/ನವದೆಹಲಿ: </strong>ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ ಪಂಜಾಬ್ನಲ್ಲಿ ಗುರುವಾರದಿಂದ ಮೂರು ದಿನಗಳ ‘ರೈಲ್ ರೋಕೊ’ ಆರಂಭವಾಗಿದೆ. ಇದರ ಜೊತೆಗೆ ಸೆ.25ರಂದು ಪಂಜಾಬ್ ಸಂಪೂರ್ಣ ಬಂದ್ಗೆ 31 ರೈತ ಸಂಘಟನೆಗಳು ಕರೆ ನೀಡಿವೆ.</p>.<p>ರೈಲ್ ರೋಕೊಗೆ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಕರೆ ಕೊಟ್ಟಿದೆ. ಇದಕ್ಕೆ ವಿವಿಧ ರೈತ ಸಂಘಟನೆಗಳು ಬೆಂಬಲ ನೀಡಿವೆ. ಭಾರತೀಯ ಕಿಸಾನ್ ಯೂನಿಯನ್ ಕಾರ್ಯಕರ್ತರು ಗುರುವಾರ ಬೆಳಿಗ್ಗೆ ಬರ್ನಾಲಾ ಮತ್ತು ಸಂಗ್ರೂರ್ನಲ್ಲಿ ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.</p>.<p>ಅಮೃತಸರ ಸಮೀಪದ ದೇವಿದಾಸಪುರ ಗ್ರಾಮ ಹಾಗೂ ಫೆರೋಜ್ಪುರದ ಬಸ್ತಿ ಟಂಕವಾಲಾದಲ್ಲಿ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ರೈಲು ತಡೆ ನಡೆಸಿತು. ಸರ್ಕಾರಿ ನೌಕರರು ಹಾಗೂ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳಿಂದ ತಮಗೆ ಬೆಂಬಲ ಸಿಕ್ಕಿದೆ ಎಂದು ಸಮಿತಿಯ ಪದಾಧಿಕಾರಿಗಳು ಹೇಳಿಕೊಂಡಿದ್ದಾರೆ.</p>.<p>ರೈತರ ಪ್ರತಿಭಟನೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಸಚಿವರು, ಸಂಸದರು ಹಾಗೂ ಶಾಸಕರು ಭಾಗಿಯಾಗಬಾರದು ಎಂದು ಸಮಿತಿಯ ಅಧ್ಯಕ್ಷ ಸತ್ನಾಮ್ ಸಿಂಗ್ ಪನ್ನು ಹೇಳಿದ್ದಾರೆ.</p>.<p>ಬಿಜೆಪಿ ನಾಯಕರಿಗೆ ಘೆರಾವ್ ಹಾಕಲು, ಮಸೂದೆ ಪರವಾಗಿ ಮತ ಚಲಾಯಿಸಿದವರಿಗೆ ಸಾಮಾಜಿಕ ಬಹಿಷ್ಕಾರ ಹಾಕಲು ಸಮಿತಿ ನಿರ್ಧರಿಸಿದೆ.</p>.<p>‘ಮಸೂದೆಯು ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತುಹಾಕಲಿದ್ದು, ರೈತರು ಬೃಹತ್ ಕಾರ್ಪೊರೇಟ್ ಕಂಪನಿಗಳ ಮುಲಾಜಿನಲ್ಲಿ ಬದುಕಬೇಕಾಗುತ್ತದೆ’ ಎಂದು ರೈತರು ಆರೋಪಿಸಿದ್ದಾರೆ.</p>.<p><strong>ರೈತರ ಹಿತ ಬಲಿಕೊಡಲು ಬಿಡೆವು:</strong> ರೈತರ ಹಿತ ಬಲಿಕೊಡಲು ಬಿಜೆಪಿ ಸರ್ಕಾರಕ್ಕೆ ಬಿಡುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಘಟಕ ಗುರುವಾರ ಹೇಳಿದೆ.</p>.<p>ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಿರುವ ಪಕ್ಷ, ಮೊದಲಿಗೆ ಸೆ.26ರಂದು ‘ರೈತರ ಪರವಾಗಿ ಮಾತನಾಡಿ’ ಎಂಬಆನ್ಲೈನ್ ಕಾರ್ಯಕ್ರಮ ಹಮ್ಮಿಕೊಂಡಿದೆ. ನಂತರ ಸೆ.28ರಂದು ರಾಜಭವನದವರೆಗೆ ಮೆರವಣಿಗೆ ನಡೆಸಲು ನಿರ್ಧರಿಸಿದೆ. ಅ. 2ರಂದು ತಾಲ್ಲೂಕು ಮಟ್ಟದಲ್ಲಿ ಪ್ರತಿಭಟನೆ, ಧರಣಿ ನಡೆಸಲು ತೀರ್ಮಾನಿಸಲಾಗಿದೆ.</p>.<p><strong>ಸರಕು ಪೂರೈಕೆಗೆ ಅಡ್ಡಿ ಸಾಧ್ಯತೆ</strong><br />ಪಂಜಾಬ್ನಲ್ಲಿ ರೈತರ ಪ್ರತಿಭಟನೆಯಿಂದ ಸರಕು ಸಾಗಣೆ ಹಾಗೂ ವಿಶೇಷ ರೈಲುಗಳ ಓಡಾಟದ ಮೇಲೆ ಪರಿಣಾಮ ಬೀರಲಿದ್ದು,ಆಹಾರ ಧಾನ್ಯಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.</p>.<p>ಸೆ.24ರಿಂದ 26ರವರೆಗೆ ಸುಮಾರು 20 ರೈಲುಗಳ ಸಂಚಾರ ಭಾಗಶಃ ರದ್ದುಗೊಂಡಿದ್ದು, ಐದು ರೈಲುಗಳ ಓಡಾಟವನ್ನು ಅಲ್ಪ ಅವಧಿಯವರೆಗೆ ತಡೆಹಿಡಿಯಲಾಗಿದೆ.</p>.<p>ಯಾವುದೇ ಅಹಿತಕರ ಘಟನೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಇಲಾಖೆ ಹೇಳಿದೆ.</p>.<p>ರಾಜ್ಯಕ್ಕೆ ಪ್ರತಿನಿತ್ಯ 20 ರೇಕ್ ಗಳಷ್ಟು ಕಲ್ಲಿದ್ದಲು, ಆಹಾರ ಧಾನ್ಯ, ಕೃಷಿ ಉಪಕರಣ, ಯಂತ್ರೋಪಕರಣ, ಪೆಟ್ರೋಲಿಯಂ ಉತ್ಪನ್ನಗಳು ಹಾಗೂ ಆಮದು ರಸಗೊಬ್ಬರಗಳು ರೈಲುಗಳ ಮೂಲಕ ಪೂರೈಕೆಯಾಗುತ್ತವೆ. ರೈಲು ತಡೆಯಿಂದ ಇವುಗಳ ಸಾಗಣೆಗೆ ತೀವ್ರ ತರದ ತೊಂದರೆಯಾಗಲಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>**<br />ಕಾಯ್ದೆ ಜಾರಿಗೆ ಮುನ್ನ ರಾಜ್ಯ ಸರ್ಕಾರ, ರೈತರು, ರೈತ ಸಂಘಟನೆಗಳು, ಆರ್ಎಸ್ಎಸ್ ಜತೆಗಿನ ಸಂಘಟನೆಗಳನ್ನು ಕೇಂದ್ರ ಸರ್ಕಾರ ಸಂಪರ್ಕಿಸಿಲ್ಲ.<br /><em><strong>-ರಾಜೀವ್ ಸತವ್, ಕಾಂಗ್ರೆಸ್ನ ಗುಜರಾತ್ ಘಟಕದ ಉಸ್ತುವಾರಿ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>