<p><strong>ನವದೆಹಲಿ:</strong> ರಾಜ್ಯಸಭೆಯ ಎಂಟು ಸದಸ್ಯರ ಅಮಾನತುಗೊಳಿಸಿದ ನಿರ್ಧಾರವು ಪ್ರತಿಪಕ್ಷಗಳ ಧ್ವನಿ ಅಡಗಿಸುವ ಷಡ್ಯಂತ್ರ ಎಂದು ವಿರೋಧ ಪಕ್ಷಗಳು, ಸರ್ಕಾರ ಮತ್ತು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.</p>.<p>‘ಸಂಸದರ ಅಮಾನತು ನಿರ್ಧಾರವು ಪ್ರಜಾಪ್ರಭುತ್ವ ವ್ಯವಸ್ಥೆಯ ಹತ್ಯೆ ಮತ್ತು ಸರ್ವಾಧಿಕಾರದ ಪ್ರತೀಕ’ ಎಂದು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹರಿಹಾಯ್ದಿವೆ.</p>.<p>‘ಬಿಜೆಪಿ ಈ ದೇಶದ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿದೆ. ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಕ್ಕೆ ಒಳಪಡುವ ಮೊದಲು ಜನರು ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾಗಿದೆ’ ಎಂದುಪಶ್ಚಿಮ ಬಂಗಾಳದ ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.</p>.<p>‘ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರು ಪ್ರಧಾನಿ ಕಚೇರಿಯ ನಿರ್ದೇಶನದಂತೆ ಎಂಟು ಸಂಸದರನ್ನು ಅಮಾನತು ಮಾಡಿದ್ದಾರೆ’ ಎಂದು ಲೋಕಸಭೆಯಲ್ಲಿಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಆರೋಪಿಸಿದ್ದಾರೆ.</p>.<p>‘ರಾಜ್ಯಸಭೆಯಲ್ಲಿ ಗೂಂಡಾವರ್ತನೆ ತೋರಿದ ವಿರೋಧ ಪಕ್ಷಗಳ ಸಂಸದರು, ಪ್ರಜಾಪ್ರಭುತ್ವದಲ್ಲಿ ತಮಗೆ ನಂಬಿಕೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.</p>.<p>ಮಸೂದೆಗೆ ಅಂಕಿತ ಹಾಕದೆ ಅದನ್ನು ವಾಪಸ್ ಕಳುಹಿಸುವಂತೆ ವಿರೋಧಪಕ್ಷಗಳು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿವೆ.</p>.<p><strong>ದಾರಿ ತಪ್ಪಿಸುವ ಕೆಲಸ: ಮೋದಿ</strong><br />ಸಂಸತ್ ಅನುಮೋದನೆ ಪಡೆದ ಕೃಷಿ ಮಸೂದೆಗಳು 21ನೇ ಶತಮಾನದ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.</p>.<p>ತರು ತಮ್ಮ ಇಷ್ಟದಂತೆ, ಇಷ್ಟ ಬಂದ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೃಷಿ ಮಸೂದೆಗಳು ಸ್ವಾತಂತ್ರ್ಯ ನೀಡಲಿವೆ ಎಂದು ಪ್ರಧಾನಿ ರೈತ ಸಮೂಹಕ್ಕೆ ಅಭಯ ನೀಡಿದರು.</p>.<p>‘ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಕ್ರಾಂತಿಕಾರಿ ಬದಲಾವಣೆಗಳಿಂದ ಈ ಕ್ಷೇತ್ರದ ಮೇಲೆ ಕೆಲವರ ಹಿಡಿತ ತಪ್ಪುತ್ತಿದೆ. ಅಂಥವರು ರೈತರ ದಾರಿ ತಪ್ಪಿಸುವ ಹುನ್ನಾರ ನಡೆಸಿದ್ದಾರೆ’ ಎಂದು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.</p>.<p><strong>ಪ್ರತಿಭಟನೆಗೆ ನಿರ್ಧಾರ</strong><br />ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಚಳವಳಿ ಹಾಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. 2 ಕೋಟಿ ರೈತರ ಸಹಿ ಸಂಗ್ರಹಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಸಲ್ಲಿಸಲು ಕಾಂಗ್ರೆಸ್ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯ ಎಂಟು ಸದಸ್ಯರ ಅಮಾನತುಗೊಳಿಸಿದ ನಿರ್ಧಾರವು ಪ್ರತಿಪಕ್ಷಗಳ ಧ್ವನಿ ಅಡಗಿಸುವ ಷಡ್ಯಂತ್ರ ಎಂದು ವಿರೋಧ ಪಕ್ಷಗಳು, ಸರ್ಕಾರ ಮತ್ತು ಬಿಜೆಪಿ ವಿರುದ್ಧ ಮುಗಿಬಿದ್ದಿವೆ.</p>.<p>‘ಸಂಸದರ ಅಮಾನತು ನಿರ್ಧಾರವು ಪ್ರಜಾಪ್ರಭುತ್ವ ವ್ಯವಸ್ಥೆಯ ಹತ್ಯೆ ಮತ್ತು ಸರ್ವಾಧಿಕಾರದ ಪ್ರತೀಕ’ ಎಂದು ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹರಿಹಾಯ್ದಿವೆ.</p>.<p>‘ಬಿಜೆಪಿ ಈ ದೇಶದ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿದೆ. ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರಕ್ಕೆ ಒಳಪಡುವ ಮೊದಲು ಜನರು ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕಾಗಿದೆ’ ಎಂದುಪಶ್ಚಿಮ ಬಂಗಾಳದ ಮುಖ್ಯಮಂತ್ರಿಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.</p>.<p>‘ರಾಜ್ಯಸಭಾ ಉಪ ಸಭಾಪತಿ ಹರಿವಂಶ್ ಅವರು ಪ್ರಧಾನಿ ಕಚೇರಿಯ ನಿರ್ದೇಶನದಂತೆ ಎಂಟು ಸಂಸದರನ್ನು ಅಮಾನತು ಮಾಡಿದ್ದಾರೆ’ ಎಂದು ಲೋಕಸಭೆಯಲ್ಲಿಕಾಂಗ್ರೆಸ್ ನಾಯಕ ಅಧಿರ್ ರಂಜನ್ ಚೌಧರಿ ಆರೋಪಿಸಿದ್ದಾರೆ.</p>.<p>‘ರಾಜ್ಯಸಭೆಯಲ್ಲಿ ಗೂಂಡಾವರ್ತನೆ ತೋರಿದ ವಿರೋಧ ಪಕ್ಷಗಳ ಸಂಸದರು, ಪ್ರಜಾಪ್ರಭುತ್ವದಲ್ಲಿ ತಮಗೆ ನಂಬಿಕೆ ಇಲ್ಲ ಎಂದು ಸಾಬೀತುಪಡಿಸಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.</p>.<p>ಮಸೂದೆಗೆ ಅಂಕಿತ ಹಾಕದೆ ಅದನ್ನು ವಾಪಸ್ ಕಳುಹಿಸುವಂತೆ ವಿರೋಧಪಕ್ಷಗಳು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಸಲ್ಲಿಸಿವೆ.</p>.<p><strong>ದಾರಿ ತಪ್ಪಿಸುವ ಕೆಲಸ: ಮೋದಿ</strong><br />ಸಂಸತ್ ಅನುಮೋದನೆ ಪಡೆದ ಕೃಷಿ ಮಸೂದೆಗಳು 21ನೇ ಶತಮಾನದ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.</p>.<p>ತರು ತಮ್ಮ ಇಷ್ಟದಂತೆ, ಇಷ್ಟ ಬಂದ ಬೆಲೆಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೃಷಿ ಮಸೂದೆಗಳು ಸ್ವಾತಂತ್ರ್ಯ ನೀಡಲಿವೆ ಎಂದು ಪ್ರಧಾನಿ ರೈತ ಸಮೂಹಕ್ಕೆ ಅಭಯ ನೀಡಿದರು.</p>.<p>‘ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಕ್ರಾಂತಿಕಾರಿ ಬದಲಾವಣೆಗಳಿಂದ ಈ ಕ್ಷೇತ್ರದ ಮೇಲೆ ಕೆಲವರ ಹಿಡಿತ ತಪ್ಪುತ್ತಿದೆ. ಅಂಥವರು ರೈತರ ದಾರಿ ತಪ್ಪಿಸುವ ಹುನ್ನಾರ ನಡೆಸಿದ್ದಾರೆ’ ಎಂದು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.</p>.<p><strong>ಪ್ರತಿಭಟನೆಗೆ ನಿರ್ಧಾರ</strong><br />ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಸೂದೆಗಳನ್ನು ವಿರೋಧಿಸಿ ರಾಷ್ಟ್ರವ್ಯಾಪಿ ಚಳವಳಿ ಹಾಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. 2 ಕೋಟಿ ರೈತರ ಸಹಿ ಸಂಗ್ರಹಿಸಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಸಲ್ಲಿಸಲು ಕಾಂಗ್ರೆಸ್ ತೀರ್ಮಾನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>