<p><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ 40 ರೈತ ಸಂಘಟನೆಗಳನ್ನು ಮುಂದಿನ ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ಸೋಮವಾರ ಆಹ್ವಾನ ನೀಡಿದೆ. ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ವಿರೋಧಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಿಸೆಂಬರ್ 30ರಂದು ಸಭೆಗೆ ಕರೆಯಲಾಗಿದೆ.</p>.<p>ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 30ರಂದು ಮಧ್ಯಾಹ್ನ 2 ಗಂಟೆಗೆ ಸಭೆಗೆ ಬರುವಂತೆ ಕೃಷಿ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರು ರೈತ ಸಂಘಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.</p>.<p>ಡಿಸೆಂಬರ್ 29ರಂದು ಮಾತುಕತೆ ನಡೆಸುವಂತೆ ಸರ್ಕಾರಕ್ಕೆ ರೈತ ಸಂಘಟನೆಗಳು ಪ್ರಸ್ತಾವನೆ ಸಲ್ಲಿಸಿದ್ದವು.</p>.<p>ಈವರೆಗೂ ಕೃಷಿ ಕಾಯ್ದೆ ವಿಚಾರವಾಗಿ 40 ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕೃತವಾಗಿ ಐದು ಸುತ್ತಿನ ಮಾತುಕತೆ ನಡೆದಿದ್ದು, ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.</p>.<p>'ಸಂಬಂಧಿತ ಎಲ್ಲ ಸಮಸ್ಯೆಗಳಿಗೂ ತಾರ್ಕಿಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಸಹ ಬದ್ಧವಾಗಿದೆ, ಮುಕ್ತ ಮನಸ್ಸಿನಿಂದ ಮಾತುಕತೆಗೆ ಸಿದ್ಧವಿದೆ ' ಎಂದು ಅಗರ್ವಾಲ್ ಹೇಳಿದ್ದಾರೆ.</p>.<p>ಸುಮಾರು ಒಂದು ತಿಂಗಳಿನಿಂದ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ಸಾವಿರಾರು ರೈತರು ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ಪ್ರತಿಭಟನೆ ಮತ್ತಷ್ಟು ತೀಕ್ಷ್ಣಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ 40 ರೈತ ಸಂಘಟನೆಗಳನ್ನು ಮುಂದಿನ ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ಸೋಮವಾರ ಆಹ್ವಾನ ನೀಡಿದೆ. ಮೂರು ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ವಿರೋಧಗಳಿಗೆ ತಾರ್ಕಿಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಡಿಸೆಂಬರ್ 30ರಂದು ಸಭೆಗೆ ಕರೆಯಲಾಗಿದೆ.</p>.<p>ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 30ರಂದು ಮಧ್ಯಾಹ್ನ 2 ಗಂಟೆಗೆ ಸಭೆಗೆ ಬರುವಂತೆ ಕೃಷಿ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಅಗರ್ವಾಲ್ ಅವರು ರೈತ ಸಂಘಗಳಿಗೆ ಪತ್ರ ಮುಖೇನ ತಿಳಿಸಿದ್ದಾರೆ.</p>.<p>ಡಿಸೆಂಬರ್ 29ರಂದು ಮಾತುಕತೆ ನಡೆಸುವಂತೆ ಸರ್ಕಾರಕ್ಕೆ ರೈತ ಸಂಘಟನೆಗಳು ಪ್ರಸ್ತಾವನೆ ಸಲ್ಲಿಸಿದ್ದವು.</p>.<p>ಈವರೆಗೂ ಕೃಷಿ ಕಾಯ್ದೆ ವಿಚಾರವಾಗಿ 40 ರೈತ ಸಂಘಟನೆಗಳು ಮತ್ತು ಕೇಂದ್ರ ಸರ್ಕಾರದ ನಡುವೆ ಅಧಿಕೃತವಾಗಿ ಐದು ಸುತ್ತಿನ ಮಾತುಕತೆ ನಡೆದಿದ್ದು, ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.</p>.<p>'ಸಂಬಂಧಿತ ಎಲ್ಲ ಸಮಸ್ಯೆಗಳಿಗೂ ತಾರ್ಕಿಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಸಹ ಬದ್ಧವಾಗಿದೆ, ಮುಕ್ತ ಮನಸ್ಸಿನಿಂದ ಮಾತುಕತೆಗೆ ಸಿದ್ಧವಿದೆ ' ಎಂದು ಅಗರ್ವಾಲ್ ಹೇಳಿದ್ದಾರೆ.</p>.<p>ಸುಮಾರು ಒಂದು ತಿಂಗಳಿನಿಂದ ಹರಿಯಾಣ, ಪಂಜಾಬ್ ಹಾಗೂ ಉತ್ತರ ಪ್ರದೇಶದ ಸಾವಿರಾರು ರೈತರು ದೆಹಲಿಯ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ಆಗ್ರಹಿಸಿದ್ದಾರೆ. ಬೇಡಿಕೆಗಳು ಈಡೇರದಿದ್ದರೆ ಪ್ರತಿಭಟನೆ ಮತ್ತಷ್ಟು ತೀಕ್ಷ್ಣಗೊಳಿಸುವುದಾಗಿ ರೈತ ಸಂಘಟನೆಗಳು ಎಚ್ಚರಿಕೆ ನೀಡಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>