<p><strong>ಪಟಿಯಾಲ:</strong> ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ರೇಶಮ್ ಸಿಂಗ್ (55) ಇಂದು (ಗುರುವಾರ) ವಿಷ ಸೇವಿಸಿ ಆತ್ಮಹತ್ಮೆ ಮಾಡಿಕೊಂಡಿದ್ದಾನೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. </p><p>ಇದು ಪ್ರತಿಭಟನಾನಿರತ ಪ್ರದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ. </p><p>ರೇಶಮ್ ಸಿಂಗ್ ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೈತನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾನೆ. </p><p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಆಗ್ರಹಿಸಿ ರೈತರು ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. </p><p>ಪ್ರತಿಭಟನಾನಿರತ ರೈತನ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರೈತ ಮುಖಂಡ ತೇಜ್ವೀರ್ ಸಿಂಗ್ ಆರೋಪಿಸಿದ್ದಾರೆ. </p><p>'ರೈತರ ಸಮಸ್ಯೆಗಳನ್ನು ಬಗೆಹರಿಸದ ಕೇಂದ್ರ ಸರ್ಕಾರದ ವಿರುದ್ಧ ರೇಶಮ್ ಸಿಂಗ್ ಅಸಮಾಧಾನಗೊಂಡಿದ್ದನು. ಸುದೀರ್ಘ ಪ್ರತಿಭಟನೆಯ ಹೊರತಾಗಿಯೂ ಯಾವುದೇ ಪ್ರಯೋಜನ ಉಂಟಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ' ಎಂದು ಅವರು ಹೇಳಿದ್ದಾರೆ. </p><p>ರಣ್ಜೋದ್ ಸಿಂಗ್ ಎಂಬ ರೈತ ಡಿಸೆಂಬರ್ 18ರಂದು ಶಂಭು ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. </p><p>ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತರು, ಕಳೆದ ವರ್ಷ ಫೆಬ್ರುವರಿ 13ರಿಂದ ಶಂಭು ಮತ್ತು ಖಾನೌರಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ನಡೆಸುವುದನ್ನು ಭದ್ರತಾ ಪಡೆ ತಡೆಹಿಡಿದಿದೆ. ಇದರಿಂದ ಗಡಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. </p>.ಶಂಭು ಗಡಿ: ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಸ್ತಿಪಟು ವಿನೇಶ್ ಫೋಗಟ್.PHOTOS | ಪಂಜಾಬ್: ಜಲಫಿರಂಗಿ, ಅಶ್ರುವಾಯು ಮಧ್ಯೆ ರೈತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟಿಯಾಲ:</strong> ಶಂಭು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತ ರೇಶಮ್ ಸಿಂಗ್ (55) ಇಂದು (ಗುರುವಾರ) ವಿಷ ಸೇವಿಸಿ ಆತ್ಮಹತ್ಮೆ ಮಾಡಿಕೊಂಡಿದ್ದಾನೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. </p><p>ಇದು ಪ್ರತಿಭಟನಾನಿರತ ಪ್ರದೇಶದಲ್ಲಿ ಕಳೆದ ಮೂರು ವಾರಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ. </p><p>ರೇಶಮ್ ಸಿಂಗ್ ಶಂಭು ಗಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರೈತನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾನೆ. </p><p>ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಖಾತರಿ ಆಗ್ರಹಿಸಿ ರೈತರು ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. </p><p>ಪ್ರತಿಭಟನಾನಿರತ ರೈತನ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ರೈತ ಮುಖಂಡ ತೇಜ್ವೀರ್ ಸಿಂಗ್ ಆರೋಪಿಸಿದ್ದಾರೆ. </p><p>'ರೈತರ ಸಮಸ್ಯೆಗಳನ್ನು ಬಗೆಹರಿಸದ ಕೇಂದ್ರ ಸರ್ಕಾರದ ವಿರುದ್ಧ ರೇಶಮ್ ಸಿಂಗ್ ಅಸಮಾಧಾನಗೊಂಡಿದ್ದನು. ಸುದೀರ್ಘ ಪ್ರತಿಭಟನೆಯ ಹೊರತಾಗಿಯೂ ಯಾವುದೇ ಪ್ರಯೋಜನ ಉಂಟಾಗಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾನೆ' ಎಂದು ಅವರು ಹೇಳಿದ್ದಾರೆ. </p><p>ರಣ್ಜೋದ್ ಸಿಂಗ್ ಎಂಬ ರೈತ ಡಿಸೆಂಬರ್ 18ರಂದು ಶಂಭು ಗಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. </p><p>ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ರೈತರು, ಕಳೆದ ವರ್ಷ ಫೆಬ್ರುವರಿ 13ರಿಂದ ಶಂಭು ಮತ್ತು ಖಾನೌರಿ ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ದೆಹಲಿಗೆ ಪಾದಯಾತ್ರೆ ನಡೆಸುವುದನ್ನು ಭದ್ರತಾ ಪಡೆ ತಡೆಹಿಡಿದಿದೆ. ಇದರಿಂದ ಗಡಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. </p>.ಶಂಭು ಗಡಿ: ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಕುಸ್ತಿಪಟು ವಿನೇಶ್ ಫೋಗಟ್.PHOTOS | ಪಂಜಾಬ್: ಜಲಫಿರಂಗಿ, ಅಶ್ರುವಾಯು ಮಧ್ಯೆ ರೈತರ ಪ್ರತಿಭಟನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>