<p><strong>ನವದೆಹಲಿ:</strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರೈತ ಮುಖಂಡರು ಸ್ವಾಗತಿಸಿದ್ದಾರೆ ಮತ್ತು ಕಾನೂನುಗಳನ್ನು ರದ್ದುಗೊಳಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.</p>.<p>ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ಸುಮಾರು 40 ಪ್ರತಿಭಟನಾ ನಿರತ ರೈತ ಸಂಘಗಳನ್ನು ಹೊಂದಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಸಭೆ ಕರೆದಿದೆ.</p>.<p>ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಮುಂದೆ ಯಾವುದೇ ವಿಚಾರಣೆಯಲ್ಲಿ ಭಾಗವಹಿಸಲು ನಾವು ಸಿದ್ಧರಿಲ್ಲ, ಆದರೆ ಈ ಕುರಿತು ಔಪಚಾರಿಕ ನಿರ್ಧಾರವನ್ನು ಮೋರ್ಚಾ ತೆಗೆದುಕೊಳ್ಳುತ್ತದೆ ಎಂದು ರೈತ ಮುಖಂಡರು ಹೇಳಿದರು.</p>.<p>'ಕೃಷಿ ಕಾನೂನುಗಳ ಅನುಷ್ಠಾನಕ್ಕೆ ತಡೆ ನೀಡಿರುವ ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆ' ಎಂದು ಮೋರ್ಚಾದ ಹಿರಿಯ ಮುಖಂಡ ಅಭಿಮನ್ಯು ಕೊಹಾರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಮತ್ತೊಬ್ಬ ರೈತ ಮುಖಂಡ ಹರಿಂದರ್ ಲೋಖ್ವಾಲ್ ಹೇಳಿದ್ದಾರೆ.</p>.<p>ಮುಂದಿನ ಆದೇಶದವರೆಗೆ ಕೃಷಿ ಕಾನೂನುಗಳ ಅನುಷ್ಠಾನವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ ಮತ್ತು ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಸಂಘಗಳು ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಕೃಷಿ ಕಾನೂನು ಜಾರಿಗೆ ತಡೆ ನೀಡಿ ಆದೇಶ ಹೊರಡಿಸಿದೆ.</p>.<p>ಹರಿಯಾಣ ಮತ್ತು ಪಂಜಾಬ್ನ ಸಾವಿರಾರು ರೈತರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಹಲವು ಗಡಿಗಳಲ್ಲಿ ಕಳೆದ ವರ್ಷ ನವೆಂಬರ್ 28ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶವನ್ನು ರೈತ ಮುಖಂಡರು ಸ್ವಾಗತಿಸಿದ್ದಾರೆ ಮತ್ತು ಕಾನೂನುಗಳನ್ನು ರದ್ದುಗೊಳಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.</p>.<p>ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರ್ಧರಿಸಲು ಸುಮಾರು 40 ಪ್ರತಿಭಟನಾ ನಿರತ ರೈತ ಸಂಘಗಳನ್ನು ಹೊಂದಿರುವ ಸಂಯುಕ್ತ್ ಕಿಸಾನ್ ಮೋರ್ಚಾ ಸಭೆ ಕರೆದಿದೆ.</p>.<p>ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯ ಮುಂದೆ ಯಾವುದೇ ವಿಚಾರಣೆಯಲ್ಲಿ ಭಾಗವಹಿಸಲು ನಾವು ಸಿದ್ಧರಿಲ್ಲ, ಆದರೆ ಈ ಕುರಿತು ಔಪಚಾರಿಕ ನಿರ್ಧಾರವನ್ನು ಮೋರ್ಚಾ ತೆಗೆದುಕೊಳ್ಳುತ್ತದೆ ಎಂದು ರೈತ ಮುಖಂಡರು ಹೇಳಿದರು.</p>.<p>'ಕೃಷಿ ಕಾನೂನುಗಳ ಅನುಷ್ಠಾನಕ್ಕೆ ತಡೆ ನೀಡಿರುವ ನ್ಯಾಯಾಲಯದ ಆದೇಶವನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆ' ಎಂದು ಮೋರ್ಚಾದ ಹಿರಿಯ ಮುಖಂಡ ಅಭಿಮನ್ಯು ಕೊಹಾರ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.</p>.<p>ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಮತ್ತೊಬ್ಬ ರೈತ ಮುಖಂಡ ಹರಿಂದರ್ ಲೋಖ್ವಾಲ್ ಹೇಳಿದ್ದಾರೆ.</p>.<p>ಮುಂದಿನ ಆದೇಶದವರೆಗೆ ಕೃಷಿ ಕಾನೂನುಗಳ ಅನುಷ್ಠಾನವನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಡೆಹಿಡಿದಿದೆ ಮತ್ತು ದೆಹಲಿಯ ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತ ಸಂಘಗಳು ಮತ್ತು ಸರ್ಕಾರದ ನಡುವಿನ ಬಿಕ್ಕಟ್ಟನ್ನು ಪರಿಹರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಿದೆ.</p>.<p>ಮುಖ್ಯನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಕೃಷಿ ಕಾನೂನು ಜಾರಿಗೆ ತಡೆ ನೀಡಿ ಆದೇಶ ಹೊರಡಿಸಿದೆ.</p>.<p>ಹರಿಯಾಣ ಮತ್ತು ಪಂಜಾಬ್ನ ಸಾವಿರಾರು ರೈತರು ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಹಲವು ಗಡಿಗಳಲ್ಲಿ ಕಳೆದ ವರ್ಷ ನವೆಂಬರ್ 28ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>