<p><strong>ನವದೆಹಲಿ:</strong> ಗಣರಾಜ್ಯೋತ್ಸವದ ದಿನದಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪು ಕೋಟೆಯಲ್ಲಿ ಧ್ವಜ ಹಾರಿಸಿದ್ದ 29 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಐತಿಹಾಸಿಕ ಸ್ಮಾರಕದಲ್ಲಿ ಖಡ್ಗವನ್ನು ಹಿಡಿದು ಧಾರ್ಮಿಕ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಪ್ರೀತ್ ಸಿಂಗ್ ಎಂಬವರನ್ನು ಬಂಧಿಸಲಾಗಿದೆ. ಇವರು ಕಳೆದ ವಾರ ಬಂಧಿಯಾಗಿರುವ ಮಣಿಂಧರ್ ಸಿಂಗ್ ಅವರ ಸಹಚರರಲ್ಲಿ ಓರ್ವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಾಯುವ್ಯ ದೆಹಲಿಯ ಸ್ವರೂಪ ನಗರ ನಿವಾಸಿಯಾಗಿರುವ ಜಸ್ಪ್ರೀತ್ ಸಿಂಗ್ ಅವರನ್ನು ಭಾನುವಾರದಂದು ಕ್ರೈಮ್ ಬ್ರಾಂಚ್ ವಿಭಾಗ ಬಂಧಿಸಿದೆ.</p>.<p>ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ರೈತ ಸಂಘಟನೆಗಳು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಸಾವಿರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದರು. ಅನೇಕ ಪ್ರತಿಭಟನಾಕಾರರು ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/a-call-for-farmers-to-lay-siege-to-the-police-who-come-to-arrest-them-farmers-protest-arvind-807617.html" itemprop="url">ಬಂಧಿಸಲು ಬರುವ ಪೊಲೀಸರಿಗೆ ಮುತ್ತಿಗೆ ಹಾಕಲು ರೈತರಿಗೆ ಕರೆ </a></p>.<p>ಮಣಿಂದರ್ ಸಿಂಗ್ ಸಮೀಪದಲ್ಲಿರುವ ಜಸ್ಪ್ರೀತ್ ಸಿಂಗ್ ಧ್ವಜ ಹಾರಿಸುತ್ತಿರುವುದನ್ನು ಗುರಿತಿಸಲಾಗಿದೆ. ಪೊಲೀಸರ ಪ್ರಕಾರ ಮಣಿಂದರ್ ಸಿಂಗ್, ಇತರೆ ಆರು ಮಂದಿಯನ್ನು ಕೆಂಪು ಕೋಟೆಯಲ್ಲಿ ಹಿಂಸಾಚಾರ ಹಾಗೂ ಧ್ವಜ ಹಾರಿಸುವಂತೆ ಪ್ರಚೋದಿಸಿದ್ದರು.</p>.<p>ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ದೆಹಲಿ ಪೊಲೀಸರು ಗಾಯಗೊಂಡಿದ್ದರು. ಈ ಸಂಬಂಧಹಲವಾರುಪ್ರಕರಣಗಳನ್ನು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಣರಾಜ್ಯೋತ್ಸವದ ದಿನದಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪು ಕೋಟೆಯಲ್ಲಿ ಧ್ವಜ ಹಾರಿಸಿದ್ದ 29 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.</p>.<p>ಐತಿಹಾಸಿಕ ಸ್ಮಾರಕದಲ್ಲಿ ಖಡ್ಗವನ್ನು ಹಿಡಿದು ಧಾರ್ಮಿಕ ಧ್ವಜ ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಪ್ರೀತ್ ಸಿಂಗ್ ಎಂಬವರನ್ನು ಬಂಧಿಸಲಾಗಿದೆ. ಇವರು ಕಳೆದ ವಾರ ಬಂಧಿಯಾಗಿರುವ ಮಣಿಂಧರ್ ಸಿಂಗ್ ಅವರ ಸಹಚರರಲ್ಲಿ ಓರ್ವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಾಯುವ್ಯ ದೆಹಲಿಯ ಸ್ವರೂಪ ನಗರ ನಿವಾಸಿಯಾಗಿರುವ ಜಸ್ಪ್ರೀತ್ ಸಿಂಗ್ ಅವರನ್ನು ಭಾನುವಾರದಂದು ಕ್ರೈಮ್ ಬ್ರಾಂಚ್ ವಿಭಾಗ ಬಂಧಿಸಿದೆ.</p>.<p>ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ರೈತ ಸಂಘಟನೆಗಳು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಸಾವಿರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಸಂಘರ್ಷಕ್ಕಿಳಿದಿದ್ದರು. ಅನೇಕ ಪ್ರತಿಭಟನಾಕಾರರು ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಧಾರ್ಮಿಕ ಧ್ವಜವನ್ನು ಹಾರಿಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/a-call-for-farmers-to-lay-siege-to-the-police-who-come-to-arrest-them-farmers-protest-arvind-807617.html" itemprop="url">ಬಂಧಿಸಲು ಬರುವ ಪೊಲೀಸರಿಗೆ ಮುತ್ತಿಗೆ ಹಾಕಲು ರೈತರಿಗೆ ಕರೆ </a></p>.<p>ಮಣಿಂದರ್ ಸಿಂಗ್ ಸಮೀಪದಲ್ಲಿರುವ ಜಸ್ಪ್ರೀತ್ ಸಿಂಗ್ ಧ್ವಜ ಹಾರಿಸುತ್ತಿರುವುದನ್ನು ಗುರಿತಿಸಲಾಗಿದೆ. ಪೊಲೀಸರ ಪ್ರಕಾರ ಮಣಿಂದರ್ ಸಿಂಗ್, ಇತರೆ ಆರು ಮಂದಿಯನ್ನು ಕೆಂಪು ಕೋಟೆಯಲ್ಲಿ ಹಿಂಸಾಚಾರ ಹಾಗೂ ಧ್ವಜ ಹಾರಿಸುವಂತೆ ಪ್ರಚೋದಿಸಿದ್ದರು.</p>.<p>ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ದೆಹಲಿ ಪೊಲೀಸರು ಗಾಯಗೊಂಡಿದ್ದರು. ಈ ಸಂಬಂಧಹಲವಾರುಪ್ರಕರಣಗಳನ್ನು ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>