<p><strong>ನವದೆಹಲಿ</strong>: ‘ನಿಮ್ಮ ಹೃದಯ ಹಾಗೂ ಮನಸ್ಸಿನಲ್ಲಿಯೂ ರೈತರಿದ್ದಾರೆ. ನಾನು ಕೂಡ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ಪ್ರಯತ್ನ ಪಡುತ್ತೇನೆ’ಎಂದು ದೇವೇಗೌಡರ ಭೇಟಿ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. </p><p>ಮಂಗಳವಾರ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಕೋರಲು ತೆರಳಿದ ಸಂದರ್ಭದಲ್ಲಿ ಅವರ ಜೊತೆ ಮಾತುಕತೆ ನಡೆಸಿದರು. </p><p>ಪರೋಕ್ಷ ಸಬ್ಸಿಡಿಗಳಲ್ಲಿ ಹಲವು ಲೋಪದೋಷಗಳಿವೆ, ಇದರಿಂದ ನಿಗದಿತ ಗುರಿ ತಲುಪಲು ಸಾಧ್ಯವಿಲ್ಲ. ಸಬ್ಸಿಡಿಯ ಮೊತ್ತವು ನೇರವಾಗಿ ತಲುಪುವ ಮೂಲಕ ರೈತರ ಜೀವನ ಬದಲಾಗಲಿದೆ ಎಂದರು. </p> .‘ದೇವೇಗೌಡ ಅಪ್ರತಿಮ ರೈತ ನಾಯಕ’.<p>ರಾಷ್ಟ್ರದ ಹಿತ, ಆರ್ಥಿಕ ಸದೃಢತೆ, ರಾಜಕೀಯ ಸ್ಥಿರತೆ, ಸಾಮಾಜಿಕ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಠಿಯಿಂದ ರೈತರ ಪಾತ್ರವು ಮಹತ್ವದ್ದಾಗಿದೆ. ಹಾಗಾಗಿ ನಾನು ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದರು.</p><p>ಕೃಷಿ ವಲಯಕ್ಕೆ ಸಿಗುವ ಯಾವುದೇ ರೀತಿಯ ಸಬ್ಸಿಡಿಯು, ನೇರವಾಗಿ ರೈತರಿಗೆ ತಲುಪಬೇಕು ಎಂದು ಈ ಹಿಂದೆಯೂ ಹೇಳಿದ್ದರು. </p><p>ಜನರ ಸೇವೆಗಾಗಿ ನಾನು ನಿಮ್ಮ ಆಶೀರ್ವಾದ ಪಡೆಯುತ್ತೇನೆ ಎಂದು ಧನಕರ್ ಅವರು ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನಿಮ್ಮ ಹೃದಯ ಹಾಗೂ ಮನಸ್ಸಿನಲ್ಲಿಯೂ ರೈತರಿದ್ದಾರೆ. ನಾನು ಕೂಡ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ಪ್ರಯತ್ನ ಪಡುತ್ತೇನೆ’ಎಂದು ದೇವೇಗೌಡರ ಭೇಟಿ ವೇಳೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. </p><p>ಮಂಗಳವಾರ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ಶುಭಕೋರಲು ತೆರಳಿದ ಸಂದರ್ಭದಲ್ಲಿ ಅವರ ಜೊತೆ ಮಾತುಕತೆ ನಡೆಸಿದರು. </p><p>ಪರೋಕ್ಷ ಸಬ್ಸಿಡಿಗಳಲ್ಲಿ ಹಲವು ಲೋಪದೋಷಗಳಿವೆ, ಇದರಿಂದ ನಿಗದಿತ ಗುರಿ ತಲುಪಲು ಸಾಧ್ಯವಿಲ್ಲ. ಸಬ್ಸಿಡಿಯ ಮೊತ್ತವು ನೇರವಾಗಿ ತಲುಪುವ ಮೂಲಕ ರೈತರ ಜೀವನ ಬದಲಾಗಲಿದೆ ಎಂದರು. </p> .‘ದೇವೇಗೌಡ ಅಪ್ರತಿಮ ರೈತ ನಾಯಕ’.<p>ರಾಷ್ಟ್ರದ ಹಿತ, ಆರ್ಥಿಕ ಸದೃಢತೆ, ರಾಜಕೀಯ ಸ್ಥಿರತೆ, ಸಾಮಾಜಿಕ ವ್ಯವಸ್ಥೆಯನ್ನು ಬಲಪಡಿಸುವ ದೃಷ್ಠಿಯಿಂದ ರೈತರ ಪಾತ್ರವು ಮಹತ್ವದ್ದಾಗಿದೆ. ಹಾಗಾಗಿ ನಾನು ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದರು.</p><p>ಕೃಷಿ ವಲಯಕ್ಕೆ ಸಿಗುವ ಯಾವುದೇ ರೀತಿಯ ಸಬ್ಸಿಡಿಯು, ನೇರವಾಗಿ ರೈತರಿಗೆ ತಲುಪಬೇಕು ಎಂದು ಈ ಹಿಂದೆಯೂ ಹೇಳಿದ್ದರು. </p><p>ಜನರ ಸೇವೆಗಾಗಿ ನಾನು ನಿಮ್ಮ ಆಶೀರ್ವಾದ ಪಡೆಯುತ್ತೇನೆ ಎಂದು ಧನಕರ್ ಅವರು ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>