<p><strong>ಚಂಡೀಗಡ:</strong> ಹರಿಯಾಣದಲ್ಲಿ ಬಿಜೆಪಿ ಮುಖಂಡರ ಕಾರ್ಯಕ್ರಮಗಳನ್ನು ಗುರಿಯಾಗಿಸಿ ಭಾನುವಾರದಂದು ರೈತರು ಪ್ರತಿಭಟನೆ ನಡೆಸಿದ್ದಾರೆ.</p>.<p>ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.</p>.<p>ಫತೇಹಾಬಾದ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಹರಿಯಾಣದ ಸಚಿವ ಭನ್ವಾರಿ ಲಾಲ್ ಹಾಗೂ ಸಂಸದೆ ಸುನಿತಾ ದುಗ್ಗಲ್ ಭಾಗವಹಿಸಿದ ಕಾರ್ಯಕ್ರಮದ ಭದ್ರತೆ ಸಲುವಾಗಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ರೈತರು ತೆರವುಗೊಳಿಸಲು ಮುಂದಾದರು.</p>.<p>ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸ್ಥಳಕ್ಕೆ ನುಗ್ಗದಂತೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಕಪ್ಪು ಬಾವುಟವನ್ನು ತೋರಿಸುವ ಮೂಲಕ ಸರ್ಕಾರದ ವಿರುದ್ಧ ರೈತರು ಘೋಷಣೆಗಳನ್ನು ಕೂಗಿದರು.</p>.<p>ಜಾಜ್ಜರ್ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಓಂ ಪ್ರಕಾಶ್ ಧನಕರ್ ಭಾಗವಹಿಸುವ ಕುರಿತು ಮಾಹಿತಿ ಪಡೆದ ರೈತರು ಒಗ್ಗೂಡಿದರು. ಅಲ್ಲದೆ ವಿವಾದಿತ ಕಾಯ್ದೆ ರದ್ದುಗೊಳಿಸದೇ ಬಿಜೆಪಿ ಅಥವಾ ಮಿತ್ರ ಪಕ್ಷ ಕಾರ್ಯಕ್ರಮ ಆಯೋಜಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಸಿರ್ಸಾ, ಅಂಬಾಲಾದಲ್ಲೂ ಇದಕ್ಕೂ ಸಮಾನವಾದ ಪ್ರತಿಭಟನೆಯು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ:</strong> ಹರಿಯಾಣದಲ್ಲಿ ಬಿಜೆಪಿ ಮುಖಂಡರ ಕಾರ್ಯಕ್ರಮಗಳನ್ನು ಗುರಿಯಾಗಿಸಿ ಭಾನುವಾರದಂದು ರೈತರು ಪ್ರತಿಭಟನೆ ನಡೆಸಿದ್ದಾರೆ.</p>.<p>ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ರೈತರು, ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದರು.</p>.<p>ಫತೇಹಾಬಾದ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಹರಿಯಾಣದ ಸಚಿವ ಭನ್ವಾರಿ ಲಾಲ್ ಹಾಗೂ ಸಂಸದೆ ಸುನಿತಾ ದುಗ್ಗಲ್ ಭಾಗವಹಿಸಿದ ಕಾರ್ಯಕ್ರಮದ ಭದ್ರತೆ ಸಲುವಾಗಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ರೈತರು ತೆರವುಗೊಳಿಸಲು ಮುಂದಾದರು.</p>.<p>ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುತ್ತಿರುವ ಸ್ಥಳಕ್ಕೆ ನುಗ್ಗದಂತೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಕಪ್ಪು ಬಾವುಟವನ್ನು ತೋರಿಸುವ ಮೂಲಕ ಸರ್ಕಾರದ ವಿರುದ್ಧ ರೈತರು ಘೋಷಣೆಗಳನ್ನು ಕೂಗಿದರು.</p>.<p>ಜಾಜ್ಜರ್ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಓಂ ಪ್ರಕಾಶ್ ಧನಕರ್ ಭಾಗವಹಿಸುವ ಕುರಿತು ಮಾಹಿತಿ ಪಡೆದ ರೈತರು ಒಗ್ಗೂಡಿದರು. ಅಲ್ಲದೆ ವಿವಾದಿತ ಕಾಯ್ದೆ ರದ್ದುಗೊಳಿಸದೇ ಬಿಜೆಪಿ ಅಥವಾ ಮಿತ್ರ ಪಕ್ಷ ಕಾರ್ಯಕ್ರಮ ಆಯೋಜಿಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.</p>.<p>ಸಿರ್ಸಾ, ಅಂಬಾಲಾದಲ್ಲೂ ಇದಕ್ಕೂ ಸಮಾನವಾದ ಪ್ರತಿಭಟನೆಯು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>