ಆದರೆ, ರೈತರು ಕೆಂಪುಕೋಟೆಯ ಮೇಲೆ ಹಾರಿಸಿದ್ದು ಖಾಲಿಸ್ತಾನದ ಬಾವುಟ ಅಲ್ಲ. ರೈತರು ಹಾರಿಸಿದ್ದು, ಸಿಖ್ಖರ ನಿಶಾನ್ ಸಾಹಿದ್ ಬಾವುಟ. ಎಲ್ಲಾ ಗುರುದ್ವಾರಗಳ ಎದುರು ಮತ್ತು ಗುಮ್ಮಟಗಳ ಮೇಲೆ ಈ ಧ್ವಜವನ್ನು ಹಾರಿಸಲಾಗುತ್ತದೆ. ಇದು ಸಿಖ್ಖರ ಧಾರ್ಮಿಕ ಬಾವುಟ. ತ್ರಿಕೋನಾಕೃತಿಯಲ್ಲಿ ಇರುವ ಈ ಧ್ವಜದ ಮಧ್ಯಭಾಗದಲ್ಲಿ ನಿಶಾನೆ (ಗುರಿ) ಚಿತ್ರವಿರುತ್ತದೆ. ಧ್ವಜದ ಕೆಳತುದಿಯಲ್ಲಿ ಒಂದು ಕುಚ್ಚು ಇರುತ್ತದೆ. ಧ್ವಜದ ಬಣ್ಣ ಹಳದಿಯಾಗಿದ್ದರೆ, ನಿಶಾನೆಯ ಬಣ್ಣ ನೀಲಿ ಆಗಿರುತ್ತದೆ. ಧ್ವಜದ ಬಣ್ಣ ನೀಲಿ ಆಗಿದ್ದರೆ, ನಿಶಾನೆಯ ಬಣ್ಣ ಹಳದಿ ಆಗಿರುತ್ತದೆ.