<p><strong>ನವದೆಹಲಿ</strong>: 2021ರಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಹೊರಡಿಸಲಾದ ಲುಕ್ಔಟ್ ಸುತ್ತೋಲೆಯನ್ನು (ಎಲ್ಒಸಿ) ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ಇಬ್ಬರೂ ತನಿಖೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ‘ತಿಲಕಶ್ರೀ ಕೃಪಾನಂದ್ ಹಾಗೂ ಶಂತನು ಮುಲುಕ್ ವಿರುದ್ಧ ಲುಕ್ಔಟ್ ಮುಂದುವರಿಸುವುದಕ್ಕೆ ಯಾವುದೇ ಕಾರಣವಿಲ್ಲ’ ಎಂದು ಸ್ಪಷ್ಟಪಡಿಸಿಸದರು.</p>.<p>‘2021ರಲ್ಲಿ ಅವರ ಮೇಲೆ ದಾಖಲಾದ ಎಫ್ಐಆರ್ನಲ್ಲಿ ನಿರ್ದಿಷ್ಟವಾಗಿ ಯಾವುದೇ ಆರೋಪ ಹೊರಿಸಿಲ್ಲ, ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ, ಇಬ್ಬರ ವಿದೇಶ ಪ್ರವಾಸಕ್ಕೆ ಅಡ್ಡಿಯುಂಟುಮಾಡುವ ಲುಕ್ಔಟ್ ಆದೇಶವನ್ನೇ ವಜಾಗೊಳಿಸಲಾಗಿದೆ’ ಎಂದು ತಿಳಿಸಿದರು.</p>.<p>2021ರ ಜ.26ರಂದು ನವದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 124ಎ (ದೇಶದ್ರೋಹ), 153A ಕಲಂನಡಿ (ವಿವಿಧ ಸಮುದಾಯ/ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) 153 (ಪ್ರಚೋದನೆ) ಹಾಗೂ 120 ಬಿ (ಕ್ರಿಮಿನಲ್ ಸಂಚು) ರೂಪಿಸಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2021ರಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಹೊರಡಿಸಲಾದ ಲುಕ್ಔಟ್ ಸುತ್ತೋಲೆಯನ್ನು (ಎಲ್ಒಸಿ) ವಜಾಗೊಳಿಸಿರುವ ದೆಹಲಿ ಹೈಕೋರ್ಟ್, ಇಬ್ಬರೂ ತನಿಖೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದೆ.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು, ‘ತಿಲಕಶ್ರೀ ಕೃಪಾನಂದ್ ಹಾಗೂ ಶಂತನು ಮುಲುಕ್ ವಿರುದ್ಧ ಲುಕ್ಔಟ್ ಮುಂದುವರಿಸುವುದಕ್ಕೆ ಯಾವುದೇ ಕಾರಣವಿಲ್ಲ’ ಎಂದು ಸ್ಪಷ್ಟಪಡಿಸಿಸದರು.</p>.<p>‘2021ರಲ್ಲಿ ಅವರ ಮೇಲೆ ದಾಖಲಾದ ಎಫ್ಐಆರ್ನಲ್ಲಿ ನಿರ್ದಿಷ್ಟವಾಗಿ ಯಾವುದೇ ಆರೋಪ ಹೊರಿಸಿಲ್ಲ, ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ, ಇಬ್ಬರ ವಿದೇಶ ಪ್ರವಾಸಕ್ಕೆ ಅಡ್ಡಿಯುಂಟುಮಾಡುವ ಲುಕ್ಔಟ್ ಆದೇಶವನ್ನೇ ವಜಾಗೊಳಿಸಲಾಗಿದೆ’ ಎಂದು ತಿಳಿಸಿದರು.</p>.<p>2021ರ ಜ.26ರಂದು ನವದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 124ಎ (ದೇಶದ್ರೋಹ), 153A ಕಲಂನಡಿ (ವಿವಿಧ ಸಮುದಾಯ/ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) 153 (ಪ್ರಚೋದನೆ) ಹಾಗೂ 120 ಬಿ (ಕ್ರಿಮಿನಲ್ ಸಂಚು) ರೂಪಿಸಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>