ಹಿಂಸಾಚಾರದಲ್ಲಿ 300ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದು, ಈವರೆಗೆ 22 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಮಂಗಳವಾರ ನಡೆಸಿದ ಟ್ರ್ಯಾಕ್ಟರ್ ರ್ಯಾಲಿ ವೇಳೆ ರೈತರ ಒಂದು ಗುಂಪು ನಗರದ ಬೀದಿಗಳಲ್ಲಿ ದಾಂದಲೆ ನಡೆಸಿತ್ತು. ಬ್ಯಾರಿಕೇಡ್ಗಳನ್ನು ಕಿತ್ತು ಒಗೆದು ಪೊಲೀಸರ ಮೇಲೂ ಹಲ್ಲೆ ಮಾಡಿತ್ತು. ಕೆಂಪುಕೋಟೆ ಆವರಣಕ್ಕೆ ನುಗ್ಗಿದ ನೂರಾರು ಪ್ರತಿಭಟನಕಾರರು ಐತಿಹಾಸಿಕ ಕೆಂಪು ಕೋಟೆಯಲ್ಲಿ ಧಾರ್ಮಿಕ ಧ್ವಜವನ್ನೂ ಹಾರಿಸಿದ್ದರು.