ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಮಚ್ಚಲ್ಪಟ್ಟಿದ್ದ ಘಾಜಿಪುರ–ದೆಹಲಿ ನಡುವಿನ ರಾಷ್ಟ್ರೀಯ ಹೆದ್ದಾರಿಯನ್ನು ಸೋಮವಾರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ದೆಹಲಿ–ಘಾಜಿಪುರ ನಡುವಿನ ರಾಷ್ಟ್ರೀಯ ಹೆದ್ದಾರಿ-24ನ್ನು ಸಂಚಾರಕ್ಕೆಮುಕ್ತಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಪ್ರದೇಶ ಹಾಗೂ ದೆಹಲಿ ಪೊಲೀಸರು ಈ ಬಗ್ಗೆ ಸಮಾಲೋಚನೆ ನಡೆಸಿ ಸಂಚಾರಕ್ಕೆ ಮುಕ್ತಗೊಳಿದ್ದಾರೆ.
The carriageway of NH-24 going towards Ghaziabad from Delhi has been opened. It was temporarily closed in the light of farmers' protest at Ghazipur border (Delhi-UP border) over the three farm laws. Lates visuals from Ghazipur. pic.twitter.com/byu38HKp9Z
ನಾಗರಿಕರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಗ್ಯೂ ಗಡಿಯಲ್ಲಿ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಜನವರಿ 26ರಂದು ದೆಹಲಿಯಲ್ಲಿ ನಡೆದ ಗಲಭೆಯ ಬಳಿಕ ಈ ಹೆದ್ದಾರಿಯನ್ನು ಮುಚ್ಚಲಾಗಿತ್ತು. ಇದೀಗ ಈ ಹೆದ್ದಾರಿಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ ಎಂದು ದೆಹಲಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ಪ್ರಮುಖ ಸಂಚಾರ ಕೊಂಡಿಯಾಗಿರುವ ಈ ಹೆದ್ದಾರಿ ಸರಕು ಸಾಗಣೆಗೆ ಹೆಚ್ಚು ಅನುಕೂಲಕರ ಮಾರ್ಗವಾಗಿದೆ.