ಸಾಕ್ಷಿಗಳ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲು ವಿಳಂಬ ಏಕೆ ಎಂದು ಕೋರ್ಟ್ ಪ್ರಶ್ನಿಸಿತು. ಸರ್ಕಾರವು ಸಲ್ಲಿಸಿದ್ದ ವರದಿಯನ್ನು ಅವಲೋಕಿಸಿದ ಪೀಠವು 44 ಸಾಕ್ಷಿಗಳ ಪೈಕಿ ನಾಲ್ವರ ಹೇಳಿಕೆ ಮಾತ್ರ ದಾಖಲಾಗಿದೆ ಎಂಬುದನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿತು. ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾದ ಸಾಕ್ಷ್ಯಕ್ಕೆ ಹೆಚ್ಚು ಮೌಲ್ಯವಿದೆ ಎಂಬುದನ್ನು ನೆನಪಿಸಿತು. ತನಿಖೆಯ ಆಮೆಗತಿಯ ಬಗ್ಗೆ ಪೀಠವು ಹಿಂದೆಯೂ ಅಸಮಾಧಾನ ವ್ಯಕ್ತಪಡಿಸಿತ್ತು.