<p><strong>ನವದೆಹಲಿ: </strong>ಕೇಂದ್ರವು ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳು ಅಮಾನತುಗೊಳಿಸುವ ಸರ್ಕಾರದ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ಗುರುವಾರ ತಿರಸ್ಕರಿಸಿವೆ. ಬಿಕ್ಕಟ್ಟು ಪರಿಹಾರಕ್ಕೆ ಜಂಟಿ ಸಮಿತಿಯನ್ನು ರಚಿಸುವ ಪ್ರಸ್ತಾವಕ್ಕೂ ಒಪ್ಪಿಗೆ ಸಿಕ್ಕಿಲ್ಲ. ಎರಡು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆ ಮುಂದುವರಿಯಲಿದೆ.</p>.<p>ದೆಹಲಿಯ ವಿವಿಧ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ‘ಸಂಯುಕ್ತ ಕಿಸಾನ್ ಮೋರ್ಚಾ’ ಇದನ್ನು ಘೋಷಿಸಿತು.</p>.<p>ರೈತರು ಹಾಗೂ ಸರ್ಕಾರದ ಪ್ರತಿನಿಧಿಗಳ ನಡುವೆ 11ನೇ ಸುತ್ತಿನ ಮಾತುಕತೆ ಶುಕ್ರವಾರಕ್ಕೆ ನಿಗದಿಯಾಗಿದೆ. ಇದಕ್ಕೂ ಮುನ್ನಾದಿನ ನಡೆದ ರೈತ ಮೋರ್ಚಾದ ಸುದೀರ್ಘ ಅವಧಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಗಣರಾಜ್ಯೋತ್ಸವ ದಿನದಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಜಾಥಾದ ಮಾರ್ಗವನ್ನು ಬದಲಾಯಿಸಲು ದೆಹಲಿ ಪೊಲೀಸರು ಮುಂದಿಟ್ಟ ಸಲಹೆಗಳನ್ನು ಒಕ್ಕೂಟ ತಿರಸ್ಕರಿಸಿದಾಗಲೇ ಈ ಸಭೆಯ ಫಲಿತಾಂಶದ ಮುನ್ಸೂಚನೆ ಸಿಕ್ಕಿತ್ತು.</p>.<p>‘ಬುಧವಾರ ಸರ್ಕಾರ ಮಂಡಿಸಿದ ಪ್ರಸ್ತಾವನೆಯನ್ನು ಗುರುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಾಮಾನ್ಯ ಸಭೆಯಲ್ಲಿ ತಿರಸ್ಕರಿಸಲಾಗಿದೆ’ ಎಂದು ಒಕ್ಕೂಟ ತಿಳಿಸಿದೆ.</p>.<p>‘ಚಳವಳಿಯಲ್ಲಿ ಈವರೆಗೆ ಹುತಾತ್ಮರಾದ 143 ರೈತರಿಗೆ ಒಕ್ಕೂಟ ಗೌರವ ಸಲ್ಲಿಸುತ್ತದೆ. ಈ ಸಾಮೂಹಿಕ ಆಂದೋಲನದಲ್ಲಿ ಹೋರಾಡುವಾಗ ಜೊತೆಗಾರರು ನಮ್ಮಿಂದ ಬೇರ್ಪಟ್ಟಿದ್ದಾರೆ. ಅವರ ತ್ಯಾಗ ವ್ಯರ್ಥವಾಗುವುದಿಲ್ಲ ಮತ್ತು ಕಾಯ್ದೆಗಳನ್ನು ರದ್ದುಗೊಳಿಸದೆ ನಾವು ಹಿಂತಿರುಗುವುದಿಲ್ಲ’ ಎಂದು ಒಕ್ಕೂಟ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕೇಂದ್ರವು ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು 18 ತಿಂಗಳು ಅಮಾನತುಗೊಳಿಸುವ ಸರ್ಕಾರದ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ಗುರುವಾರ ತಿರಸ್ಕರಿಸಿವೆ. ಬಿಕ್ಕಟ್ಟು ಪರಿಹಾರಕ್ಕೆ ಜಂಟಿ ಸಮಿತಿಯನ್ನು ರಚಿಸುವ ಪ್ರಸ್ತಾವಕ್ಕೂ ಒಪ್ಪಿಗೆ ಸಿಕ್ಕಿಲ್ಲ. ಎರಡು ತಿಂಗಳಿಂದ ನಡೆಯುತ್ತಿರುವ ಪ್ರತಿಭಟನೆ ಮುಂದುವರಿಯಲಿದೆ.</p>.<p>ದೆಹಲಿಯ ವಿವಿಧ ಗಡಿಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಒಕ್ಕೂಟ ‘ಸಂಯುಕ್ತ ಕಿಸಾನ್ ಮೋರ್ಚಾ’ ಇದನ್ನು ಘೋಷಿಸಿತು.</p>.<p>ರೈತರು ಹಾಗೂ ಸರ್ಕಾರದ ಪ್ರತಿನಿಧಿಗಳ ನಡುವೆ 11ನೇ ಸುತ್ತಿನ ಮಾತುಕತೆ ಶುಕ್ರವಾರಕ್ಕೆ ನಿಗದಿಯಾಗಿದೆ. ಇದಕ್ಕೂ ಮುನ್ನಾದಿನ ನಡೆದ ರೈತ ಮೋರ್ಚಾದ ಸುದೀರ್ಘ ಅವಧಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಗಣರಾಜ್ಯೋತ್ಸವ ದಿನದಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ಜಾಥಾದ ಮಾರ್ಗವನ್ನು ಬದಲಾಯಿಸಲು ದೆಹಲಿ ಪೊಲೀಸರು ಮುಂದಿಟ್ಟ ಸಲಹೆಗಳನ್ನು ಒಕ್ಕೂಟ ತಿರಸ್ಕರಿಸಿದಾಗಲೇ ಈ ಸಭೆಯ ಫಲಿತಾಂಶದ ಮುನ್ಸೂಚನೆ ಸಿಕ್ಕಿತ್ತು.</p>.<p>‘ಬುಧವಾರ ಸರ್ಕಾರ ಮಂಡಿಸಿದ ಪ್ರಸ್ತಾವನೆಯನ್ನು ಗುರುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಾಮಾನ್ಯ ಸಭೆಯಲ್ಲಿ ತಿರಸ್ಕರಿಸಲಾಗಿದೆ’ ಎಂದು ಒಕ್ಕೂಟ ತಿಳಿಸಿದೆ.</p>.<p>‘ಚಳವಳಿಯಲ್ಲಿ ಈವರೆಗೆ ಹುತಾತ್ಮರಾದ 143 ರೈತರಿಗೆ ಒಕ್ಕೂಟ ಗೌರವ ಸಲ್ಲಿಸುತ್ತದೆ. ಈ ಸಾಮೂಹಿಕ ಆಂದೋಲನದಲ್ಲಿ ಹೋರಾಡುವಾಗ ಜೊತೆಗಾರರು ನಮ್ಮಿಂದ ಬೇರ್ಪಟ್ಟಿದ್ದಾರೆ. ಅವರ ತ್ಯಾಗ ವ್ಯರ್ಥವಾಗುವುದಿಲ್ಲ ಮತ್ತು ಕಾಯ್ದೆಗಳನ್ನು ರದ್ದುಗೊಳಿಸದೆ ನಾವು ಹಿಂತಿರುಗುವುದಿಲ್ಲ’ ಎಂದು ಒಕ್ಕೂಟ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>