ಉದ್ದೇಶಿತ ಟ್ರ್ಯಾಕ್ಟರ್ ರ್ಯಾಲಿಯು ಗಣರಾಜ್ಯೋತ್ಸವ ಸಮಾರಂಭಕ್ಕೆ ಅಡ್ಡಿಯಾಗುವ ಸಾಧ್ಯತೆ ಇದ್ದು, ಅದಕ್ಕೆ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ನೇತೃತ್ವದ ನ್ಯಾಯಪೀಠ, ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಪೊಲೀಸರಿಗೆ ಅಧಿಕಾರವಿದೆ ಎಂದಿದೆ.