ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ
ನೀಡಲು ಸಮಿತಿಯೊಂದರನ್ನು ರಚಿಸುವುದಾಗಿ ಕೇಂದ್ರವು ಲಿಖಿತ ಭರವಸೆ ನೀಡಿದೆ. ಪ್ರತಿಭಟನೆ ಯಶಸ್ಸು ಕಂಡಿದ್ದು, ದೆಹಲಿಯ ಸಿಂಘು, ಟಿಕ್ರಿ ಹಾಗೂ ಗಾಜಿಪುರ ಗಡಿಯ ಹೆದ್ದಾರಿಗಳಲ್ಲಿ ಹಾಕಿದ್ದ ದಿಗ್ಬಂಧನವನ್ನು ರೈತರು ತೆರವುಗೊಳಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಕಡೆಗೆ ಹೊರಟ ರೈತರು, ಈ ಸಂಭ್ರಮವನ್ನು ‘ವಿಜಯ ಯಾತ್ರೆ’ ಮೂಲಕ ಆಚರಿಸುತ್ತಿದ್ದಾರೆ.