<p><strong>ಶಂಭು:</strong> ವಿವಿಧ ಬೇಡಿಕೆಗಳನ್ನು ಮುಂದಿರಿಸಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರು, ತಾತ್ಕಾಲಿಕವಾಗಿ ದಿನದ ಮಟ್ಟಿಗೆ ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. </p><p>ಪಂಜಾಬ್ ಹಾಗೂ ಹರಿಯಾಣಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್ ಸಿಡಿಸಿದ್ದರಿಂದ ಕೆಲವು ರೈತರು ಗಾಯಗೊಂಡಿದ್ದಾರೆ. </p><p>'ಕನಿಷ್ಠ ಎಂಟು ರೈತರು ಗಾಯಗೊಂಡಿದ್ದಾರೆ. ಅವರನ್ನು ಚಂಢೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆಗೆ (ಪಿಜಿಐಎಂಇಆರ್) ದಾಖಲಿಸಲಾಗಿದೆ. ಇದರಿಂದಾಗಿ ಪಾದಯಾತ್ರೆ ಸ್ಥಗಿತಗೊಳಿಸಲಾಗಿದೆ' ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಢೆರ್ ತಿಳಿಸಿದ್ದಾರೆ. </p><p>'ರೈತ ಸಂಘಟನೆಯ ಸಭೆಯ ಬಳಿಕ ಮುಂದಿನ ಹೋರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಅವರು ತಿಳಿಸಿದ್ದಾರೆ. </p><p>ರೈತರ ಪಾದಯಾತ್ರೆ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಸ್ಥಾಪಿಸಿ ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಲಾಗಿತ್ತು. </p><p>ಶಂಭು ಗಡಿಯಲ್ಲಿ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ 101 ರೈತರು ಶುಕ್ರವಾರ ಕಾಲ್ನಡಿಗೆಯಲ್ಲಿ 'ದೆಹಲಿ ಚಲೋ' ಹೊರಟಿದ್ದರು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಲಾಗಿದೆ. </p>.ದೆಹಲಿ ಚಲೋ: ನೊಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ.ದೆಹಲಿಗೆ ಪಾದಯಾತ್ರೆ: ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಂಭು:</strong> ವಿವಿಧ ಬೇಡಿಕೆಗಳನ್ನು ಮುಂದಿರಿಸಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರು, ತಾತ್ಕಾಲಿಕವಾಗಿ ದಿನದ ಮಟ್ಟಿಗೆ ಯಾತ್ರೆಯನ್ನು ಸ್ಥಗಿತಗೊಳಿಸಿದ್ದಾರೆ. </p><p>ಪಂಜಾಬ್ ಹಾಗೂ ಹರಿಯಾಣಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ಭದ್ರತಾ ಸಿಬ್ಬಂದಿ ಅಶ್ರುವಾಯು ಶೆಲ್ ಸಿಡಿಸಿದ್ದರಿಂದ ಕೆಲವು ರೈತರು ಗಾಯಗೊಂಡಿದ್ದಾರೆ. </p><p>'ಕನಿಷ್ಠ ಎಂಟು ರೈತರು ಗಾಯಗೊಂಡಿದ್ದಾರೆ. ಅವರನ್ನು ಚಂಢೀಗಢದ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆಗೆ (ಪಿಜಿಐಎಂಇಆರ್) ದಾಖಲಿಸಲಾಗಿದೆ. ಇದರಿಂದಾಗಿ ಪಾದಯಾತ್ರೆ ಸ್ಥಗಿತಗೊಳಿಸಲಾಗಿದೆ' ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಢೆರ್ ತಿಳಿಸಿದ್ದಾರೆ. </p><p>'ರೈತ ಸಂಘಟನೆಯ ಸಭೆಯ ಬಳಿಕ ಮುಂದಿನ ಹೋರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು' ಎಂದು ಅವರು ತಿಳಿಸಿದ್ದಾರೆ. </p><p>ರೈತರ ಪಾದಯಾತ್ರೆ ಹಿನ್ನೆಲೆಯಲ್ಲಿ ಬ್ಯಾರಿಕೇಡ್ ಸ್ಥಾಪಿಸಿ ಭಾರಿ ಭದ್ರತೆ ಏರ್ಪಡಿಸಲಾಗಿತ್ತು. ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಲಾಗಿತ್ತು. </p><p>ಶಂಭು ಗಡಿಯಲ್ಲಿ 10 ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ 101 ರೈತರು ಶುಕ್ರವಾರ ಕಾಲ್ನಡಿಗೆಯಲ್ಲಿ 'ದೆಹಲಿ ಚಲೋ' ಹೊರಟಿದ್ದರು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿರಿಸಲಾಗಿದೆ. </p>.ದೆಹಲಿ ಚಲೋ: ನೊಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ.ದೆಹಲಿಗೆ ಪಾದಯಾತ್ರೆ: ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>