<p><strong>ನವದೆಹಲಿ:</strong> ಉತ್ತರ ಪ್ರದೇಶದ ಲಖಿಂಪುರ-ಖೇರಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಿಂದಾಗಿ ರೈತರು ಮೃತಪಟ್ಟಿರುವ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯಕ್ಕಾಗಿ ಹೋರಾಡುತ್ತಿರುವ ರೈತರು ಈ ಹೋರಾಟವನ್ನು ಗೆದ್ದೆ ಗೆಲ್ಲುತ್ತಾರೆ ಎಂದು ಸೋಮವಾರ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಮೃತಪಟ್ಟ ರೈತ ಕುಟುಂಬಗಳ ಭೇಟಿಗೆ ತೆರಳಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಹುಲ್, ಅಧಿಕಾರದಲ್ಲಿರುವವರು ಆಕೆಯ ಧೈರ್ಯಕ್ಕೆ ಹೆದರುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ಪಕ್ಷದ ನಾಯಕರನ್ನು ಸೋಮವಾರ ವಶಕ್ಕೆ ಪಡೆದಿದ್ದು, ಸೀತಾಪುರದ ಸರ್ಕಾರಿ ವಸತಿ ಗೃಹದಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹಿಂಸಾಚಾರದ ಸಂತ್ರಸ್ತರನ್ನು ಭೇಟಿಯಾಗಲು ಅವರಿಗೆ ಬಿಜೆಪಿ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಕ್ಷ ಆರೋಪಿಸಿದೆ.</p>.<p>'ಪ್ರಿಯಾಂಕಾ, ನೀವು ಹಿಮ್ಮೆಟ್ಟುವುದಿಲ್ಲ ಎಂದು ನನಗೆ ತಿಳಿದಿದೆ. ಅವರು ನಿಮ್ಮ ಧೈರ್ಯವನ್ನು ನೋಡಿ ಹೆದರುತ್ತಿದ್ದಾರೆ. ದೇಶದ 'ಅನ್ನದಾತರು' ನ್ಯಾಯಕ್ಕಾಗಿ ನಡೆಸುತ್ತಿರುವ ಈ ಅಹಿಂಸಾತ್ಮಕ ಹೋರಾಟದಲ್ಲಿ ಗೆದ್ದೆ ಗೆಲ್ಲುತ್ತಾರೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ' ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ, 'NoFear' ಎಂಬ ಹ್ಯಾಶ್ಟ್ಯಾಗ್ ಕೂಡ ಹಾಕಿದ್ದಾರೆ.</p>.<p>ದೇಶದಲ್ಲಿ ರೈತರನ್ನು ತುಳಿಯುವ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.</p>.<p>'ಬಿಜೆಪಿ ಸರ್ಕಾರ ದೇಶದಲ್ಲಿ ರೈತರನ್ನು ತುಳಿಯುವ ಮತ್ತು ಅವರನ್ನು ಮುಗಿಸುವ ರಾಜಕೀಯವನ್ನು ಮಾಡುತ್ತಿದೆ' ಎಂದು ಆರೋಪಿಸಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/lakhimpur-kheri-violence-rakesh-tikait-demands-sacking-of-mos-ajay-mishra-arrest-of-his-son-872489.html" itemprop="url">ಸಚಿವ ಅಜಯ್ ಮಿಶ್ರಾ ಅವರನ್ನು ವಜಾಮಾಡಿ, ಪುತ್ರನನ್ನು ಬಂಧಿಸಿ: ಟಿಕಾಯತ್ ಆಗ್ರಹ </a></p>.<p>'ಈ ದೇಶವು ರೈತರದ್ದೇ ಹೊರತು ಬಿಜೆಪಿಯದ್ದಲ್ಲ' ಎಂದು ಆರೋಪಿಸಿ ಅವರು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದು, 'ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ರೈತರ ನೋವನ್ನು ಹಂಚಿಕೊಳ್ಳಲು ತಾನು ಲಖಿಂಪುರಕ್ಕೆ ಹೋಗುತ್ತಿದ್ದೇನೆ ಮತ್ತು ಅದು ಯಾವುದೇ ಅಪರಾಧ ಅಥವಾ ತಪ್ಪಲ್ಲ' ಎಂದು ಅವರು ಹೇಳಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/india-news/lakhimpur-violence-fir-against-mos-mishras-son-several-other-persons-872484.html" itemprop="url">ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್ </a></p>.<p><a href="https://www.prajavani.net/india-news/lakhimpur-kheri-violence-akhilesh-yadav-taken-into-custody-over-sit-in-protest-872482.html" itemprop="url">ಬ್ರಿಟಿಷರು ಸಹ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗಿರಲಿಲ್ಲ: ಅಖಿಲೇಶ್ ಯಾದವ್ </a></p>.<p><a href="https://www.prajavani.net/india-news/book-those-involved-in-death-of-farmers-in-lakhimpur-kheri-for-murder-varun-gandhi-to-up-cm-872481.html" itemprop="url">ರೈತರ ಸಾವಿಗೆ ಕಾರಣರಾದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ: ವರುಣ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಲಖಿಂಪುರ-ಖೇರಿಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಿಂದಾಗಿ ರೈತರು ಮೃತಪಟ್ಟಿರುವ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನ್ಯಾಯಕ್ಕಾಗಿ ಹೋರಾಡುತ್ತಿರುವ ರೈತರು ಈ ಹೋರಾಟವನ್ನು ಗೆದ್ದೆ ಗೆಲ್ಲುತ್ತಾರೆ ಎಂದು ಸೋಮವಾರ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ಹಿಂಸಾಚಾರಕ್ಕೆ ಮೃತಪಟ್ಟ ರೈತ ಕುಟುಂಬಗಳ ಭೇಟಿಗೆ ತೆರಳಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ತಡೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ರಾಹುಲ್, ಅಧಿಕಾರದಲ್ಲಿರುವವರು ಆಕೆಯ ಧೈರ್ಯಕ್ಕೆ ಹೆದರುತ್ತಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತ್ತು ಇತರ ಪಕ್ಷದ ನಾಯಕರನ್ನು ಸೋಮವಾರ ವಶಕ್ಕೆ ಪಡೆದಿದ್ದು, ಸೀತಾಪುರದ ಸರ್ಕಾರಿ ವಸತಿ ಗೃಹದಲ್ಲಿ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ. ಹಿಂಸಾಚಾರದ ಸಂತ್ರಸ್ತರನ್ನು ಭೇಟಿಯಾಗಲು ಅವರಿಗೆ ಬಿಜೆಪಿ ಸರ್ಕಾರ ಅವಕಾಶ ನೀಡಿಲ್ಲ ಎಂದು ಪಕ್ಷ ಆರೋಪಿಸಿದೆ.</p>.<p>'ಪ್ರಿಯಾಂಕಾ, ನೀವು ಹಿಮ್ಮೆಟ್ಟುವುದಿಲ್ಲ ಎಂದು ನನಗೆ ತಿಳಿದಿದೆ. ಅವರು ನಿಮ್ಮ ಧೈರ್ಯವನ್ನು ನೋಡಿ ಹೆದರುತ್ತಿದ್ದಾರೆ. ದೇಶದ 'ಅನ್ನದಾತರು' ನ್ಯಾಯಕ್ಕಾಗಿ ನಡೆಸುತ್ತಿರುವ ಈ ಅಹಿಂಸಾತ್ಮಕ ಹೋರಾಟದಲ್ಲಿ ಗೆದ್ದೆ ಗೆಲ್ಲುತ್ತಾರೆ ಎಂಬುದನ್ನು ನಾವು ಖಚಿತಪಡಿಸುತ್ತೇವೆ' ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ, 'NoFear' ಎಂಬ ಹ್ಯಾಶ್ಟ್ಯಾಗ್ ಕೂಡ ಹಾಕಿದ್ದಾರೆ.</p>.<p>ದೇಶದಲ್ಲಿ ರೈತರನ್ನು ತುಳಿಯುವ ರಾಜಕಾರಣವನ್ನು ಬಿಜೆಪಿ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.</p>.<p>'ಬಿಜೆಪಿ ಸರ್ಕಾರ ದೇಶದಲ್ಲಿ ರೈತರನ್ನು ತುಳಿಯುವ ಮತ್ತು ಅವರನ್ನು ಮುಗಿಸುವ ರಾಜಕೀಯವನ್ನು ಮಾಡುತ್ತಿದೆ' ಎಂದು ಆರೋಪಿಸಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/india-news/lakhimpur-kheri-violence-rakesh-tikait-demands-sacking-of-mos-ajay-mishra-arrest-of-his-son-872489.html" itemprop="url">ಸಚಿವ ಅಜಯ್ ಮಿಶ್ರಾ ಅವರನ್ನು ವಜಾಮಾಡಿ, ಪುತ್ರನನ್ನು ಬಂಧಿಸಿ: ಟಿಕಾಯತ್ ಆಗ್ರಹ </a></p>.<p>'ಈ ದೇಶವು ರೈತರದ್ದೇ ಹೊರತು ಬಿಜೆಪಿಯದ್ದಲ್ಲ' ಎಂದು ಆರೋಪಿಸಿ ಅವರು ವಿಡಿಯೊ ಸಂದೇಶವನ್ನು ಹಂಚಿಕೊಂಡಿದ್ದು, 'ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ರೈತರ ನೋವನ್ನು ಹಂಚಿಕೊಳ್ಳಲು ತಾನು ಲಖಿಂಪುರಕ್ಕೆ ಹೋಗುತ್ತಿದ್ದೇನೆ ಮತ್ತು ಅದು ಯಾವುದೇ ಅಪರಾಧ ಅಥವಾ ತಪ್ಪಲ್ಲ' ಎಂದು ಅವರು ಹೇಳಿದ್ದಾರೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/india-news/lakhimpur-violence-fir-against-mos-mishras-son-several-other-persons-872484.html" itemprop="url">ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಸೇರಿ ಇತರರ ವಿರುದ್ಧ ಎಫ್ಐಆರ್ </a></p>.<p><a href="https://www.prajavani.net/india-news/lakhimpur-kheri-violence-akhilesh-yadav-taken-into-custody-over-sit-in-protest-872482.html" itemprop="url">ಬ್ರಿಟಿಷರು ಸಹ ರೈತರ ಮೇಲೆ ಈ ರೀತಿ ದೌರ್ಜನ್ಯ ಎಸಗಿರಲಿಲ್ಲ: ಅಖಿಲೇಶ್ ಯಾದವ್ </a></p>.<p><a href="https://www.prajavani.net/india-news/book-those-involved-in-death-of-farmers-in-lakhimpur-kheri-for-murder-varun-gandhi-to-up-cm-872481.html" itemprop="url">ರೈತರ ಸಾವಿಗೆ ಕಾರಣರಾದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ: ವರುಣ್ ಗಾಂಧಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>