‘ಜಮ್ಮ ಮತ್ತು ಕಾಶ್ಮೀರ ಸರ್ಕಾರದ ಅಧಿಕಾರಿಗಳು ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಪ್ರಾರ್ಥನೆ ಸಲ್ಲಿಸಲು ಹಝರತ್ಬಲ್ ದರ್ಗಾಕ್ಕೆ ತೆರಳದಂತೆ ತಡೆಯೊಡ್ಡಿದ್ದಾರೆ. ಮಿಲಾದ್–ಉನ್–ನಬಿ ಯಂತಹ ಶುಭ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡದೇ, ವ್ಯಕ್ತಿಯೊಬ್ಬರ ಮೂಲಭೂತ ಹಕ್ಕನ್ನು ಕಿತ್ತುಕೊಂಡಿದ್ದಾರೆ‘ ಎಂದು ಜೆಕೆಎನ್ಸಿ ಪಕ್ಷ ಟ್ವಿಟರ್ನಲ್ಲಿ ಆರೋಪಿಸಿದೆ.