<p><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹಿಂಸಾಚಾರವನ್ನು ಕೊನೆಗೊಳಿಸಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನಕ್ಕೆ ತಿಳಿಸಿದ್ದಾರೆ.</p>.<p>‘ಕಣಿವೆ ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹೀಗಿದ್ದರೂ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿರುವ ಪಾಕಿಸ್ತಾನ, ಸರಣಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p class="bodytext">‘ನನ್ನ ವಿನಮ್ರ ಸಲಹೆಯೆಂದರೆ, ಭಾರತ ಹಾಗೂ ಪಾಕಿಸ್ತಾನ ಹಿಂಸಾಚಾರವನ್ನು ಬದಿಗಿಟ್ಟು, ಶಾಂತಿಯಿಂದ ಬದುಕುವ ಮಾರ್ಗವನ್ನು ಕಂಡುಕೊಳ್ಳಬೇಕು. ನಾವು ಪರಸ್ಪರ ಗೌರವ ಹಾಗೂ ಘನತೆಯಿಂದ ಬದುಕಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p class="bodytext">‘ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಉಲ್ಲೇಖಿಸಿದ ಅವರು, ‘ಈ ನೆಲದಲ್ಲಿ ಸಹೋದರತ್ವವನ್ನು ಪುನರುಜ್ಜೀವನಗೊಳಿಸುವ ಸಂದರ್ಭದಲ್ಲಿ ಉಗ್ರರ ದಾಳಿಯು ಬಹುದೊಡ್ಡ ಹೊಡೆತವಾಗಿದೆ. ಆದಾಗ್ಯೂ, ರಾಜ್ಯದ ಜನರು ಬೀದಿಗಿಳಿದು ಪ್ರತಿಭಟಿಸಿದರು. ಆ ಮೂಲಕ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ತಿರಸ್ಕರಿಸಿರುವುದು ಸ್ಪಷ್ಟವಾದ ಸೂಚನೆಯಾಗಿದೆ. ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಸ್ಥರು ಮಾತ್ರ ನೋವು ಅನುಭವಿಸಿಲ್ಲ. ರಾಜ್ಯದ ಜನರೂ ದುಃಖಿತರಾಗಿದ್ದಾರೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.<p class="bodytext">‘ದಾಳಿಯ ಬಳಿಕ ಕಣಿವೆ ಭಾಗದ ಜನರು ಬೀದಿಗಿಳಿದು ಪ್ರತಿಭಟಿಸಿದರು. ಆ ಮೂಲಕ ಪಾಕಿಸ್ತಾನ ಪ್ರೇರಿತ ಹಿಂಸೆಯೂ ಕೊನೆಯಾಗಬೇಕು ಎಂದು ಜಗತ್ತಿಗೆ ಕಠಿಣ ಸಂದೇಶ ರವಾನಿಸಿದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ‘ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹಿಂಸಾಚಾರವನ್ನು ಕೊನೆಗೊಳಿಸಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನಕ್ಕೆ ತಿಳಿಸಿದ್ದಾರೆ.</p>.<p>‘ಕಣಿವೆ ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹೀಗಿದ್ದರೂ, ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿರುವ ಪಾಕಿಸ್ತಾನ, ಸರಣಿ ಹಿಂಸಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p class="bodytext">‘ನನ್ನ ವಿನಮ್ರ ಸಲಹೆಯೆಂದರೆ, ಭಾರತ ಹಾಗೂ ಪಾಕಿಸ್ತಾನ ಹಿಂಸಾಚಾರವನ್ನು ಬದಿಗಿಟ್ಟು, ಶಾಂತಿಯಿಂದ ಬದುಕುವ ಮಾರ್ಗವನ್ನು ಕಂಡುಕೊಳ್ಳಬೇಕು. ನಾವು ಪರಸ್ಪರ ಗೌರವ ಹಾಗೂ ಘನತೆಯಿಂದ ಬದುಕಬೇಕು’ ಎಂದು ಸಲಹೆ ನೀಡಿದ್ದಾರೆ.</p>.<p class="bodytext">‘ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿ ಉಲ್ಲೇಖಿಸಿದ ಅವರು, ‘ಈ ನೆಲದಲ್ಲಿ ಸಹೋದರತ್ವವನ್ನು ಪುನರುಜ್ಜೀವನಗೊಳಿಸುವ ಸಂದರ್ಭದಲ್ಲಿ ಉಗ್ರರ ದಾಳಿಯು ಬಹುದೊಡ್ಡ ಹೊಡೆತವಾಗಿದೆ. ಆದಾಗ್ಯೂ, ರಾಜ್ಯದ ಜನರು ಬೀದಿಗಿಳಿದು ಪ್ರತಿಭಟಿಸಿದರು. ಆ ಮೂಲಕ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ತಿರಸ್ಕರಿಸಿರುವುದು ಸ್ಪಷ್ಟವಾದ ಸೂಚನೆಯಾಗಿದೆ. ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಸ್ಥರು ಮಾತ್ರ ನೋವು ಅನುಭವಿಸಿಲ್ಲ. ರಾಜ್ಯದ ಜನರೂ ದುಃಖಿತರಾಗಿದ್ದಾರೆ’ ಎಂದು ಅಬ್ದುಲ್ಲಾ ಹೇಳಿದ್ದಾರೆ.</p>.<p class="bodytext">‘ದಾಳಿಯ ಬಳಿಕ ಕಣಿವೆ ಭಾಗದ ಜನರು ಬೀದಿಗಿಳಿದು ಪ್ರತಿಭಟಿಸಿದರು. ಆ ಮೂಲಕ ಪಾಕಿಸ್ತಾನ ಪ್ರೇರಿತ ಹಿಂಸೆಯೂ ಕೊನೆಯಾಗಬೇಕು ಎಂದು ಜಗತ್ತಿಗೆ ಕಠಿಣ ಸಂದೇಶ ರವಾನಿಸಿದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>