<p><strong>ರಾಮ್ಪುರ:</strong> ತನ್ನ 17 ವರ್ಷದ ಪುತ್ರನೊಂದಿಗೆ ನಿಶ್ಚಿತಾರ್ಥವಾಗಿದ್ದ ಮಹಿಳೆಯನ್ನು 55 ವರ್ಷದ ವ್ಯಕ್ತಿಯೊಬ್ಬ ಮದುವೆಯಾದ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ವಿಮಾನ ಪತನ: ಮದುವೆ ಬಳಿಕ ಮೊದಲ ಬಾರಿಗೆ ಗಂಡನನ್ನು ಸೇರಲು ತೆರಳುತ್ತಿದ್ದ ನವ ವಧು!.<p>ಬನ್ಸಂಗ್ನಾಲಿ ಗ್ರಾಮದಲ್ಲಿ ಇತ್ತೀಚೆಗೆ ಘಟನೆ ನಡೆದಿದ್ದು, ಕುಟುಂಬಸ್ಥರು ಹೇಳಿಕೊಂಡ ಬಳಿಕ ಗುರುವಾರ ವಿಷಯ ಜಾಹೀರಾಗಿದೆ.</p><p>ಆರು ಮಕ್ಕಳ ತಂದೆ ಮತ್ತು ಮೂರು ಮಕ್ಕಳ ಅಜ್ಜನಾಗಿರುವ ಶಕೀಲ್ ಎಂಬವರೇ ಮಗನಿಗೆ ನಿಶ್ಚಿಯವಾಗಿದ್ದ ಮಹಿಳೆಯನ್ನು ವರಿಸಿದವರು.</p><p>ಕಳೆದ ತಿಂಗಳು ತಮ್ಮ ಮಗಳ ಮದುವೆಯ ನಂತರ ಸಮೀಪದ ಹಳ್ಳಿಯ 22 ವರ್ಷದ ಆಯೇಷಾ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಯನ್ನು ಪದೇ ಪದೇ ಭೇಟಿಯಾಗುತ್ತಿದ್ದರು ಎಂದು ಅವರ ಪತ್ನಿ ಶಬಾನಾ ಹೇಳಿದ್ದಾರೆ.</p>.ಕಾಲ್ತುಳಿತ ಪ್ರಕರಣ |ಮದುವೆ ಸಿದ್ಧತೆಯಲ್ಲಿದ್ದ ಪೂರ್ಣಚಂದ್ರ: ನನಸಾಗದ ಪೋಷಕರ ಕನಸು .<p>ಮಗ ಅಮಾನ್ (ಹೆಸರು ಬದಲಾಯಿಸಲಾಗಿದೆ) ಜೊತೆ ಆಯೇಷಾಳ ಮದುವೆ ಏರ್ಪಾಡು ಮಾಡುತ್ತಿರುವುದಾಗಿಯೂ, ಅದಕ್ಕಾಗಿ ಆಕೆಯನ್ನು ಆಗಾಗ್ಗೆ ಭೇಟಿಯಾಗುತ್ತಿರುವುದಾಗಿಯೂ ಹೇಳಿದ್ದಾರೆ.</p><p>ಆರ್ಥಿಕ ಸಮಸ್ಯೆ ಹಾಗೂ ಅಮಾನ್ನ ವಯಸ್ಸನ್ನು ಉಲ್ಲೇಖಿಸಿ ಆರಂಭದಲ್ಲಿ ಕುಟುಂಬ ಮದುವೆಯನ್ನು ವಿರೋಧಿಸಿದೆ. ಆದರೆ ಶಕೀಲ್ ಆಯೇಷಾಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು ಎಂದು ಶಬಾನಾ ಆರೋಪಿಸಿದ್ದಾರೆ.</p><p>ಈ ನಡುವೆ ತಂದೆ ಹಾಗೂ ಆಯೇಷಾ ನಡುವೆ ಆಗಾಗ್ಗೆ ಕರೆಗಳು ಬರುತ್ತಿರುವುದನ್ನು ಗಮನಿಸಿ ಅಮನ್ಗೆ ಶಂಕೆ ಮೂಡಿದೆ.</p>.ಮದುವೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ಗುಂಪು; ದಲಿತ ಕುಟುಂಬದ ಮೇಲೆ ಹಲ್ಲೆ.<p>‘ಒಮ್ಮೆ ನಾನು ಅವನ ಫೋನ್ ಅನ್ನು ಪರಿಶೀಲಿಸಿದಾಗ ಕೆಲವು ಆಕ್ಷೇಪಾರ್ಹ ವಿಷಯಗಳು ಕಂಡುಬಂದವು. ಹೀಗಾಗಿ ಆಯೇಷಾಳ ಜೊತೆ ಸಂಬಂಧ ಮುಂದುವರಿಸಲು ನಿರಾಕರಿಸಿದೆ’ ಎಂದು ಅಮನ್ ತಿಳಿಸಿದ್ದಾರೆ.</p><p>ಕಳೆದ ವಾರ ಕೆಲಸದ ನೆಪದಲ್ಲಿ ದೆಹಲಿಗೆ ತೆರಳಿದ ಶಕೀಲ್, ಅಲ್ಲಿಂದ ಪತ್ನಿ ಮತ್ತು ಕುಟುಂಬದ ಇತರ ಸದಸ್ಯರಿಗೆ ಕರೆ ಮಾಡಿ ತಾನು ಆಯೇಷಾಳನ್ನು ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.</p><p>‘ನನ್ನ ಸೊಸೆಯಾಗಬೇಕಿದ್ದ ಮಹಿಳೆ ಈಗ ನನ್ನ ಗಂಡನ ಹೆಂಡತಿಯಾಗಿದ್ದಾಳೆ, ಭಾವಿ ಸೊಸೆ ಎಂದು ಪರಿಗಣಿಸಲ್ಪಟ್ಟವಳೊಂದಿಗೆ ಈಗ ಮನೆ ಹಂಚಿಕೊಳ್ಳಬೇಕಾಗಿ ಬಂದಿದೆ ಎಂದು ಶಬನಾ ದು:ಖ ವ್ಯಕ್ತಪಡಿಸಿದ್ದಾರೆ.</p><p>ಈ ವಿಷಯದಲ್ಲಿ ಇಲ್ಲಿಯವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಘಟನೆಯ ಬಗ್ಗೆ ನಮಗೆ ತಿಳಿದಿದೆ, ಆದರೆ ಇಲ್ಲಿಯವರೆಗೆ ಯಾವುದೇ ಔಪಚಾರಿಕ ದೂರು ಬಂದಿಲ್ಲ’ ಎಂದು ಭೋಟಾ ಠಾಣಾಧಿಕಾರಿ ಅಮರ್ ಸಿಂಗ್ ರಾಥೋಡ್ ಶುಕ್ರವಾರ ಹೇಳಿದ್ದಾರೆ.</p>.ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು! ಕಂಗಾಲಾದ ವರ; ಮುರಿದು ಬಿದ್ದ ವಿವಾಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮ್ಪುರ:</strong> ತನ್ನ 17 ವರ್ಷದ ಪುತ್ರನೊಂದಿಗೆ ನಿಶ್ಚಿತಾರ್ಥವಾಗಿದ್ದ ಮಹಿಳೆಯನ್ನು 55 ವರ್ಷದ ವ್ಯಕ್ತಿಯೊಬ್ಬ ಮದುವೆಯಾದ ಆಶ್ಚರ್ಯಕರ ಘಟನೆ ಉತ್ತರ ಪ್ರದೇಶದ ರಾಮ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.ವಿಮಾನ ಪತನ: ಮದುವೆ ಬಳಿಕ ಮೊದಲ ಬಾರಿಗೆ ಗಂಡನನ್ನು ಸೇರಲು ತೆರಳುತ್ತಿದ್ದ ನವ ವಧು!.<p>ಬನ್ಸಂಗ್ನಾಲಿ ಗ್ರಾಮದಲ್ಲಿ ಇತ್ತೀಚೆಗೆ ಘಟನೆ ನಡೆದಿದ್ದು, ಕುಟುಂಬಸ್ಥರು ಹೇಳಿಕೊಂಡ ಬಳಿಕ ಗುರುವಾರ ವಿಷಯ ಜಾಹೀರಾಗಿದೆ.</p><p>ಆರು ಮಕ್ಕಳ ತಂದೆ ಮತ್ತು ಮೂರು ಮಕ್ಕಳ ಅಜ್ಜನಾಗಿರುವ ಶಕೀಲ್ ಎಂಬವರೇ ಮಗನಿಗೆ ನಿಶ್ಚಿಯವಾಗಿದ್ದ ಮಹಿಳೆಯನ್ನು ವರಿಸಿದವರು.</p><p>ಕಳೆದ ತಿಂಗಳು ತಮ್ಮ ಮಗಳ ಮದುವೆಯ ನಂತರ ಸಮೀಪದ ಹಳ್ಳಿಯ 22 ವರ್ಷದ ಆಯೇಷಾ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆಯನ್ನು ಪದೇ ಪದೇ ಭೇಟಿಯಾಗುತ್ತಿದ್ದರು ಎಂದು ಅವರ ಪತ್ನಿ ಶಬಾನಾ ಹೇಳಿದ್ದಾರೆ.</p>.ಕಾಲ್ತುಳಿತ ಪ್ರಕರಣ |ಮದುವೆ ಸಿದ್ಧತೆಯಲ್ಲಿದ್ದ ಪೂರ್ಣಚಂದ್ರ: ನನಸಾಗದ ಪೋಷಕರ ಕನಸು .<p>ಮಗ ಅಮಾನ್ (ಹೆಸರು ಬದಲಾಯಿಸಲಾಗಿದೆ) ಜೊತೆ ಆಯೇಷಾಳ ಮದುವೆ ಏರ್ಪಾಡು ಮಾಡುತ್ತಿರುವುದಾಗಿಯೂ, ಅದಕ್ಕಾಗಿ ಆಕೆಯನ್ನು ಆಗಾಗ್ಗೆ ಭೇಟಿಯಾಗುತ್ತಿರುವುದಾಗಿಯೂ ಹೇಳಿದ್ದಾರೆ.</p><p>ಆರ್ಥಿಕ ಸಮಸ್ಯೆ ಹಾಗೂ ಅಮಾನ್ನ ವಯಸ್ಸನ್ನು ಉಲ್ಲೇಖಿಸಿ ಆರಂಭದಲ್ಲಿ ಕುಟುಂಬ ಮದುವೆಯನ್ನು ವಿರೋಧಿಸಿದೆ. ಆದರೆ ಶಕೀಲ್ ಆಯೇಷಾಳನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರು ಎಂದು ಶಬಾನಾ ಆರೋಪಿಸಿದ್ದಾರೆ.</p><p>ಈ ನಡುವೆ ತಂದೆ ಹಾಗೂ ಆಯೇಷಾ ನಡುವೆ ಆಗಾಗ್ಗೆ ಕರೆಗಳು ಬರುತ್ತಿರುವುದನ್ನು ಗಮನಿಸಿ ಅಮನ್ಗೆ ಶಂಕೆ ಮೂಡಿದೆ.</p>.ಮದುವೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ಗುಂಪು; ದಲಿತ ಕುಟುಂಬದ ಮೇಲೆ ಹಲ್ಲೆ.<p>‘ಒಮ್ಮೆ ನಾನು ಅವನ ಫೋನ್ ಅನ್ನು ಪರಿಶೀಲಿಸಿದಾಗ ಕೆಲವು ಆಕ್ಷೇಪಾರ್ಹ ವಿಷಯಗಳು ಕಂಡುಬಂದವು. ಹೀಗಾಗಿ ಆಯೇಷಾಳ ಜೊತೆ ಸಂಬಂಧ ಮುಂದುವರಿಸಲು ನಿರಾಕರಿಸಿದೆ’ ಎಂದು ಅಮನ್ ತಿಳಿಸಿದ್ದಾರೆ.</p><p>ಕಳೆದ ವಾರ ಕೆಲಸದ ನೆಪದಲ್ಲಿ ದೆಹಲಿಗೆ ತೆರಳಿದ ಶಕೀಲ್, ಅಲ್ಲಿಂದ ಪತ್ನಿ ಮತ್ತು ಕುಟುಂಬದ ಇತರ ಸದಸ್ಯರಿಗೆ ಕರೆ ಮಾಡಿ ತಾನು ಆಯೇಷಾಳನ್ನು ಮದುವೆಯಾಗಿದ್ದೇನೆ ಎಂದು ತಿಳಿಸಿದ್ದಾರೆ.</p><p>‘ನನ್ನ ಸೊಸೆಯಾಗಬೇಕಿದ್ದ ಮಹಿಳೆ ಈಗ ನನ್ನ ಗಂಡನ ಹೆಂಡತಿಯಾಗಿದ್ದಾಳೆ, ಭಾವಿ ಸೊಸೆ ಎಂದು ಪರಿಗಣಿಸಲ್ಪಟ್ಟವಳೊಂದಿಗೆ ಈಗ ಮನೆ ಹಂಚಿಕೊಳ್ಳಬೇಕಾಗಿ ಬಂದಿದೆ ಎಂದು ಶಬನಾ ದು:ಖ ವ್ಯಕ್ತಪಡಿಸಿದ್ದಾರೆ.</p><p>ಈ ವಿಷಯದಲ್ಲಿ ಇಲ್ಲಿಯವರೆಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಘಟನೆಯ ಬಗ್ಗೆ ನಮಗೆ ತಿಳಿದಿದೆ, ಆದರೆ ಇಲ್ಲಿಯವರೆಗೆ ಯಾವುದೇ ಔಪಚಾರಿಕ ದೂರು ಬಂದಿಲ್ಲ’ ಎಂದು ಭೋಟಾ ಠಾಣಾಧಿಕಾರಿ ಅಮರ್ ಸಿಂಗ್ ರಾಥೋಡ್ ಶುಕ್ರವಾರ ಹೇಳಿದ್ದಾರೆ.</p>.ತಾಳಿ ಕಟ್ಟುವ ವೇಳೆ ಮದುವೆ ಬೇಡ ಎಂದ ವಧು! ಕಂಗಾಲಾದ ವರ; ಮುರಿದು ಬಿದ್ದ ವಿವಾಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>