<p><strong>ಅದೋನಿ :</strong> ಅಮೆರಿಕದ ಸಿಯಾಟಲ್ನಲ್ಲಿ, ಪೊಲೀಸರ ವಾಹನ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ (23) ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. </p>.<p>ಜಾಹ್ನವಿ ಕುಟುಂಬಕ್ಕೆ ಸಿಯಾಟಲ್ನ ಸ್ಥಳೀಯ ಆಡಳಿತವು 29 ದಶಲಕ್ಷ ಡಾಲರ್ (₹262 ಕೋಟಿ) ಪರಿಹಾರ ಘೋಷಿಸುವ ಎರಡು ದಿನಗಳ ಮುನ್ನ ಈ ಘಟನೆ ನಡೆದಿದೆ. ಜಾಹ್ನವಿ ತಂದೆ, ನಿವೃತ್ತ ಪೊಲೀಸ್ ಕಾನ್ಸ್ಟೆಬಲ್ ಶ್ರೀಕಾಂತ ಅವರು ಆಂಧ್ರ ಪ್ರದೇಶದ ಕರ್ನೂಲಿನಲ್ಲಿ ಫೆ.10ರಂದು ಸಾವಿಗೀಡಾಗಿದ್ದಾರೆ. </p>.<p>ಜಾಹ್ನವಿ ಸಿಯಾಟಲ್ನ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಇನ್ಫಾರ್ಮೇಷನ್ ಸಿಸ್ಟ್ಸ್ಂನಲ್ಲಿ (ಐಎಸ್) ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರು. ರಸ್ತೆ ದಾಟುತ್ತಿದ್ದ ವೇಳೆ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರ ವಾಹನ ಡಿಕ್ಕಿಯಾಗಿ ಅವರು 2023ರಲ್ಲಿ ಸಾವಿಗೀಡಾಗಿದ್ದರು. </p>.<p>ಗಂಟೆಗೆ 40 ಕಿ.ಮೀ. ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 119 ಕಿ.ಮೀ. ವೇಗದಲ್ಲಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿತ್ತು. ಮಾದಕವಸ್ತು ಸಂಬಂಧಿಸಿದ ತುರ್ತು ಕರೆಗೆ ಸ್ಪಂದಿಸಲು ಪೊಲೀಸ್ ಅಧಿಕಾರಿ ಧಾವಿಸುತ್ತಿದ್ದಾಗ ದುರ್ಘಟನೆ ನಡೆದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅದೋನಿ :</strong> ಅಮೆರಿಕದ ಸಿಯಾಟಲ್ನಲ್ಲಿ, ಪೊಲೀಸರ ವಾಹನ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ (23) ಅವರ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. </p>.<p>ಜಾಹ್ನವಿ ಕುಟುಂಬಕ್ಕೆ ಸಿಯಾಟಲ್ನ ಸ್ಥಳೀಯ ಆಡಳಿತವು 29 ದಶಲಕ್ಷ ಡಾಲರ್ (₹262 ಕೋಟಿ) ಪರಿಹಾರ ಘೋಷಿಸುವ ಎರಡು ದಿನಗಳ ಮುನ್ನ ಈ ಘಟನೆ ನಡೆದಿದೆ. ಜಾಹ್ನವಿ ತಂದೆ, ನಿವೃತ್ತ ಪೊಲೀಸ್ ಕಾನ್ಸ್ಟೆಬಲ್ ಶ್ರೀಕಾಂತ ಅವರು ಆಂಧ್ರ ಪ್ರದೇಶದ ಕರ್ನೂಲಿನಲ್ಲಿ ಫೆ.10ರಂದು ಸಾವಿಗೀಡಾಗಿದ್ದಾರೆ. </p>.<p>ಜಾಹ್ನವಿ ಸಿಯಾಟಲ್ನ ನಾರ್ಥ್ ಈಸ್ಟರ್ನ್ ವಿಶ್ವವಿದ್ಯಾಲಯದಲ್ಲಿ ಇನ್ಫಾರ್ಮೇಷನ್ ಸಿಸ್ಟ್ಸ್ಂನಲ್ಲಿ (ಐಎಸ್) ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದರು. ರಸ್ತೆ ದಾಟುತ್ತಿದ್ದ ವೇಳೆ, ಪೊಲೀಸ್ ಅಧಿಕಾರಿ ಕೆವಿನ್ ಡೇವ್ ಅವರ ವಾಹನ ಡಿಕ್ಕಿಯಾಗಿ ಅವರು 2023ರಲ್ಲಿ ಸಾವಿಗೀಡಾಗಿದ್ದರು. </p>.<p>ಗಂಟೆಗೆ 40 ಕಿ.ಮೀ. ವೇಗದಲ್ಲಿ ಚಲಿಸಬೇಕಿದ್ದ ವಲಯದಲ್ಲಿ 119 ಕಿ.ಮೀ. ವೇಗದಲ್ಲಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿತ್ತು. ಮಾದಕವಸ್ತು ಸಂಬಂಧಿಸಿದ ತುರ್ತು ಕರೆಗೆ ಸ್ಪಂದಿಸಲು ಪೊಲೀಸ್ ಅಧಿಕಾರಿ ಧಾವಿಸುತ್ತಿದ್ದಾಗ ದುರ್ಘಟನೆ ನಡೆದಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>