<p><strong>ಗುರುಗ್ರಾಮ</strong>: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ.</p><p>25 ವರ್ಷದ ರಾಧಿಕಾ ಅವರು ಇಲ್ಲಿನ ಸುಶಾಂತ್ ಲೋಕ್ನಲ್ಲಿರುವ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಆಕೆಯ ತಂದೆ 49 ವರ್ಷದ ದೀಪಕ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಪರವಾನಗಿ ಹೊಂದಿರುವ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಕೊಲೆಗೆ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ರಾಧಿಕಾ ಅವರ ಬೆನ್ನಿಗೆ ಐದಕ್ಕೂ ಹೆಚ್ಚು ಗುಂಡುಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಲಾಗಿದೆ. </p><p>‘ಸುಶಾಂತ್ ಲೋಕ್ ಪ್ರದೇಶದಲ್ಲಿರುವ ಎರಡಂತಸ್ತಿನ ಮನೆಯಲ್ಲಿ ಘಟನೆ ನಡೆದಿದೆ. ರಾಧಿಕಾ ಅವರು ಅಡುಗೆ ಮನೆಯಲ್ಲಿದ್ದರೆ, ಅವರ ತಾಯಿ ಈ ವೇಳೆ ನೆಲಮಹಡಿಯಲ್ಲಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>‘ನಾವು ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಮುಂದುವರಿದಿದೆ. ಕೊಲೆಯ ಹಿಂದಿನ ಕಾರಣ ಏನೆಂಬುದು ಶೀಘ್ರದಲ್ಲೇ ತಿಳಿಯಲಿದೆ’ ಎಂದು ಸೆಕ್ಟರ್ 56 ಪೊಲೀಸ್ ಠಾಣಾಧಿಕಾರಿ ವಿನೋದ್ ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ</strong>: ಹರಿಯಾಣದ ರಾಜ್ಯಮಟ್ಟದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ.</p><p>25 ವರ್ಷದ ರಾಧಿಕಾ ಅವರು ಇಲ್ಲಿನ ಸುಶಾಂತ್ ಲೋಕ್ನಲ್ಲಿರುವ ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಘಟನೆಗೆ ಸಂಬಂಧಿಸಿದಂತೆ ಆಕೆಯ ತಂದೆ 49 ವರ್ಷದ ದೀಪಕ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ಪರವಾನಗಿ ಹೊಂದಿರುವ ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಕೊಲೆಗೆ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ರಾಧಿಕಾ ಅವರ ಬೆನ್ನಿಗೆ ಐದಕ್ಕೂ ಹೆಚ್ಚು ಗುಂಡುಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಲಾಗಿದೆ. </p><p>‘ಸುಶಾಂತ್ ಲೋಕ್ ಪ್ರದೇಶದಲ್ಲಿರುವ ಎರಡಂತಸ್ತಿನ ಮನೆಯಲ್ಲಿ ಘಟನೆ ನಡೆದಿದೆ. ರಾಧಿಕಾ ಅವರು ಅಡುಗೆ ಮನೆಯಲ್ಲಿದ್ದರೆ, ಅವರ ತಾಯಿ ಈ ವೇಳೆ ನೆಲಮಹಡಿಯಲ್ಲಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>‘ನಾವು ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದು, ತನಿಖೆ ಮುಂದುವರಿದಿದೆ. ಕೊಲೆಯ ಹಿಂದಿನ ಕಾರಣ ಏನೆಂಬುದು ಶೀಘ್ರದಲ್ಲೇ ತಿಳಿಯಲಿದೆ’ ಎಂದು ಸೆಕ್ಟರ್ 56 ಪೊಲೀಸ್ ಠಾಣಾಧಿಕಾರಿ ವಿನೋದ್ ಕುಮಾರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>