<p><strong>ನಾಸಿಕ್:</strong> ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ವ್ಯಕ್ತಿ ಮತ್ತು ಆತನ ಪುತ್ರನ ನೆರೆಮನೆಯ ವ್ಯಕ್ತಿಯನ್ನು ಕೊಂದು, ಆತನ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.</p>.<p>ಡಿಂಡೋರಿ ತಾಲ್ಲೂಕಿನ ನಾನಾಶಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಕೃತ್ಯ ನಡೆದಿದೆ. ಪೊಲೀಸರು ಆರೋಪಿ ಸುರೇಶ್ ಬೋಕೆಯನ್ನು (40) ಬಂಧಿಸಿದ್ದಾರೆ ಮತ್ತು ಆತನ ಮಗನನ್ನು ವಶಕ್ಕೆ ಪಡೆದಿದ್ದಾರೆ. ಪುತ್ರನ ವಯಸ್ಸು ಎಷ್ಟು ಎಂದು ಇನ್ನಷ್ಟೇ ತಿಳಿಯಬೇಕಿದೆ.</p>.<p>‘ಗುಲಾಬ್ ರಾಮಚಂದ್ರ ವಾಘ್ಮರೆ (35) ಅವರನ್ನು ಆರೋಪಿ ಸುರೇಶ್ ಕೊಡಲಿ ಮತ್ತು ಕತ್ತಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ನಂತರ ಸಂತ್ರಸ್ತನ ರುಂಡ ಮತ್ತು ಕೊಲ್ಲಲು ಬಳಸಿದ್ದ ಸಾಧನಗಳ ಜೊತೆಗೆ ನಾನಾಶಿ ಪೊಲೀಸ್ ಹೊರಠಾಣೆಗೆ ಬಂದು ಶರಣಾಗಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಆರೋಪಿಗಳ ಮನೆಯನ್ನು ಕೆಡವಿ, ಕಾರಿಗೆ ಬೆಂಕಿ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು. </p>.<p>ತನ್ನ ಪುತ್ರಿ ಮನೆಯಿಂದ ಓಡಿಹೋಗಲು ವಾಘ್ಮರೆ ಪುಸಲಾಯಿಸಿದ್ದ ಶಂಕೆಯ ಮೇರೆಗೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಮಾಹಿತಿ ನೀಡಿದರು. </p>.<p>‘ಆರೋಪಿಗಳು ಮತ್ತು ಸಂತ್ರಸ್ತ ಅಕ್ಕ–ಪಕ್ಕದ ಮನೆಯವರು. ಅವರ ಮಧ್ಯೆ ಸುದೀರ್ಘ ಕಾಲದಿಂದ ವ್ಯಾಜ್ಯ ಇತ್ತು. ಪರಸ್ಪರರ ವಿರುದ್ಧ ಡಿಸೆಂಬರ್ 31ರಂದು ದೂರು ನೀಡಲಾಗಿತ್ತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಸಿಕ್:</strong> ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ವ್ಯಕ್ತಿ ಮತ್ತು ಆತನ ಪುತ್ರನ ನೆರೆಮನೆಯ ವ್ಯಕ್ತಿಯನ್ನು ಕೊಂದು, ಆತನ ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.</p>.<p>ಡಿಂಡೋರಿ ತಾಲ್ಲೂಕಿನ ನಾನಾಶಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಕೃತ್ಯ ನಡೆದಿದೆ. ಪೊಲೀಸರು ಆರೋಪಿ ಸುರೇಶ್ ಬೋಕೆಯನ್ನು (40) ಬಂಧಿಸಿದ್ದಾರೆ ಮತ್ತು ಆತನ ಮಗನನ್ನು ವಶಕ್ಕೆ ಪಡೆದಿದ್ದಾರೆ. ಪುತ್ರನ ವಯಸ್ಸು ಎಷ್ಟು ಎಂದು ಇನ್ನಷ್ಟೇ ತಿಳಿಯಬೇಕಿದೆ.</p>.<p>‘ಗುಲಾಬ್ ರಾಮಚಂದ್ರ ವಾಘ್ಮರೆ (35) ಅವರನ್ನು ಆರೋಪಿ ಸುರೇಶ್ ಕೊಡಲಿ ಮತ್ತು ಕತ್ತಿಯಿಂದ ಕೊಚ್ಚಿ ಕೊಲೆಗೈದಿದ್ದಾನೆ. ನಂತರ ಸಂತ್ರಸ್ತನ ರುಂಡ ಮತ್ತು ಕೊಲ್ಲಲು ಬಳಸಿದ್ದ ಸಾಧನಗಳ ಜೊತೆಗೆ ನಾನಾಶಿ ಪೊಲೀಸ್ ಹೊರಠಾಣೆಗೆ ಬಂದು ಶರಣಾಗಿದ್ದಾನೆ’ ಎಂದು ಅವರು ಮಾಹಿತಿ ನೀಡಿದರು.</p>.<p>ಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಆರೋಪಿಗಳ ಮನೆಯನ್ನು ಕೆಡವಿ, ಕಾರಿಗೆ ಬೆಂಕಿ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು. </p>.<p>ತನ್ನ ಪುತ್ರಿ ಮನೆಯಿಂದ ಓಡಿಹೋಗಲು ವಾಘ್ಮರೆ ಪುಸಲಾಯಿಸಿದ್ದ ಶಂಕೆಯ ಮೇರೆಗೆ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯರು ಹೇಳಿರುವುದಾಗಿ ಮಾಹಿತಿ ನೀಡಿದರು. </p>.<p>‘ಆರೋಪಿಗಳು ಮತ್ತು ಸಂತ್ರಸ್ತ ಅಕ್ಕ–ಪಕ್ಕದ ಮನೆಯವರು. ಅವರ ಮಧ್ಯೆ ಸುದೀರ್ಘ ಕಾಲದಿಂದ ವ್ಯಾಜ್ಯ ಇತ್ತು. ಪರಸ್ಪರರ ವಿರುದ್ಧ ಡಿಸೆಂಬರ್ 31ರಂದು ದೂರು ನೀಡಲಾಗಿತ್ತು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>