<p class="title"><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ದೇಶದ ಸ್ಥಿತಿ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಅವರಿಂದ ಕಲಿಯುವುದು ಬಹಳಷ್ಟಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಭಾನುವಾರ 89ನೇ ವಸಂತಕ್ಕೆ ಕಾಲಿಟ್ಟಿಗೆ ಮನಮೋಹನ್ ಸಿಂಗ್ ಅವರಿಗೆ ಶುಭಾಶಯ ಕೋರಿದ್ದು, ಫೇಸ್ಬುಕ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.</p>.<p>‘ಸಿಂಗ್ ಅವರು ದೂರದೃಷ್ಟಿಯುಳ್ಳ, ದೇಶಭಕ್ತ. ಮಾತಿನಂತೆ ನಡೆಯುವವರು. ಭಾರತಕ್ಕೆ ನಾಯಕರಾಗಲು ನಿಜವಾದ ಅರ್ಹತೆಯುಳ್ಳ ವ್ಯಕ್ತಿ’ ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.</p>.<p class="title">‘ನಿಮ್ಮನ್ನು ಮತ್ತು ನಿಮ್ಮ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷ ಮತ್ತು ಇಡೀ ರಾಷ್ಟ್ರ ಗೌರವಿಸುತ್ತದೆ. ನಿಮ್ಮ ಎಲ್ಲ ಕಾರ್ಯಗಳಿಗೂ ಧನ್ಯವಾದಗಳು’ ಎಂದು ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್ನಲ್ಲಿ ಹೇಳಿದೆ.</p>.<p>ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿರಿಯ ನಾಯಕರಾದ ಸಚಿನ್ ಪೈಲಟ್, ಮುಕುಲ್ ವಾಸ್ನಿಕ್, ಸಲ್ಮಾನ್ ಖುರ್ಷಿದ್ ಸೇರಿದಂತೆ ಇತರರೂ ಶುಭಾಶಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ದೇಶದ ಸ್ಥಿತಿ ಬಗ್ಗೆ ಉತ್ತಮ ಅರಿವು ಹೊಂದಿದ್ದಾರೆ. ಅವರಿಂದ ಕಲಿಯುವುದು ಬಹಳಷ್ಟಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಭಾನುವಾರ 89ನೇ ವಸಂತಕ್ಕೆ ಕಾಲಿಟ್ಟಿಗೆ ಮನಮೋಹನ್ ಸಿಂಗ್ ಅವರಿಗೆ ಶುಭಾಶಯ ಕೋರಿದ್ದು, ಫೇಸ್ಬುಕ್ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.</p>.<p>‘ಸಿಂಗ್ ಅವರು ದೂರದೃಷ್ಟಿಯುಳ್ಳ, ದೇಶಭಕ್ತ. ಮಾತಿನಂತೆ ನಡೆಯುವವರು. ಭಾರತಕ್ಕೆ ನಾಯಕರಾಗಲು ನಿಜವಾದ ಅರ್ಹತೆಯುಳ್ಳ ವ್ಯಕ್ತಿ’ ಎಂದು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.</p>.<p class="title">‘ನಿಮ್ಮನ್ನು ಮತ್ತು ನಿಮ್ಮ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷ ಮತ್ತು ಇಡೀ ರಾಷ್ಟ್ರ ಗೌರವಿಸುತ್ತದೆ. ನಿಮ್ಮ ಎಲ್ಲ ಕಾರ್ಯಗಳಿಗೂ ಧನ್ಯವಾದಗಳು’ ಎಂದು ಕಾಂಗ್ರೆಸ್ ಪಕ್ಷ ತನ್ನ ಟ್ವೀಟ್ನಲ್ಲಿ ಹೇಳಿದೆ.</p>.<p>ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಹಿರಿಯ ನಾಯಕರಾದ ಸಚಿನ್ ಪೈಲಟ್, ಮುಕುಲ್ ವಾಸ್ನಿಕ್, ಸಲ್ಮಾನ್ ಖುರ್ಷಿದ್ ಸೇರಿದಂತೆ ಇತರರೂ ಶುಭಾಶಯ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>