ನವದೆಹಲಿ: ನರೇಲ ಕೈಗಾರಿಕಾ ಪ್ರದೇಶದಲ್ಲಿರುವ ಆಹಾರ ತಯಾರಿಕಾ ಘಟಕದಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್ಪಾಲ್ (42) ಮೃತರು.
'ಶ್ಯಾಮ್ ಕೃಪಾ ಫುಡ್ಸ್' ಪ್ರೈವೇಟ್ ಲಿಮಿಟೆಡ್ನಲ್ಲಿ ದುರಂತ ಸಂಭವಿಸಿದೆ. ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿರುವ ವಿಷಯ ಬೆಳಗಿನ ಜಾವ 3.35ಕ್ಕೆ ತಿಳಿಯಿತು. ಇಡೀ ಘಟಕವನ್ನು ಬೆಂಕಿ ಆವರಿಸಿದ್ದರಿಂದ, ಕೆಲವು ಕಾರ್ಮಿಕರು ಒಳಗೇ ಸಿಲುಕಿಕೊಂಡಿದ್ದರು ಎಂದು ಅವರು ಪೊಲೀಸರು ಹೇಳಿದ್ದಾರೆ.