ಕೌಶಲಾಭಿವೃದ್ಧಿ ನಿಗಮ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ನಾಯ್ಡು ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವು ಸದ್ಯದಲ್ಲೇ ಹೊರಬೀಳಲಿದೆ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿರುವುದಾಗಿ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ನ್ಯಾಯಪೀಠವು ತಿಳಿಸಿದೆ.