ಪ್ರಕರಣದ ಗಂಭೀರತೆಯನ್ನು ಆಧರಿಸಿ ಗಣರಾಜ್ಯ ದಿನದ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿ 11 ಮಂದಿ ಮತ್ತು ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಬೇಕು ಎಂದು ಪೊಲೀಸ್ ಇಲಾಖೆಯು ಶಿಫಾರಸು ಮಾಡಿತ್ತು. ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ತೀರ್ಮಾನ ಕೈಗೊಳ್ಳುವುದನ್ನು ಲೆಫ್ಟಿನಂಟ್ ಗವರ್ನರ್ ಅವರು ರಾಷ್ಟ್ರಪತಿಗಳ ವಿವೇಚನೆಗೇ ಬಿಟ್ಟಿರುವ ಮೊದಲ ಪ್ರಕರಣ ಇದು.