<p><strong>ನವದೆಹಲಿ</strong>: ಮುಂಬೈನ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟುಹೋಗಿವೆ. ಆದರೆ ಕಡತಗಳ ಡಿಜಿಟಲ್ ಸಂಗ್ರಹವೂ ಇರುವುದರಿಂದ ಪ್ರಕರಣಗಳ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸ್ಪಷ್ಟಪಡಿಸಿದೆ.</p><p>ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದ ಕೈಸರ್ 1– ಹಿಂದ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿದ್ದ ಇ.ಡಿ ಕಚೇರಿಯಲ್ಲಿ ಭಾನುವಾರ ಮುಂಜಾನೆ 2.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಇದಕ್ಕೆ ಶಾರ್ಟ್ ಸರ್ಕೀಟ್ ಕಾರಣ ಎಂದು ತಿಳಿದುಬಂದಿದೆ ಎಂದು ಇ.ಡಿ ಹೇಳಿಕೆಯಲ್ಲಿ ತಿಳಿಸಿದೆ.</p><p><strong>ಅಗ್ನಿ ಅವಘಡ: ರಾಜಕೀಯ ವಾಕ್ಸಮರ</strong></p><p>ಇ.ಡಿ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡವು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಒಂದೇ ಒಂದು ಕಾಗದಪತ್ರವೂ ಸುಟ್ಟುಹೋಗಿಲ್ಲ ಎಂದು ಹೇಳಿದ್ದಾರೆ.</p><p>ಅಗ್ನಿ ಅವಘಡದಿಂದ ಯಾವುದೇ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ.</p><p>ಎನ್ಸಿಪಿ (ಶರದ್ ಬಣ) ಸಂಸದೆ ಸುಪ್ರಿಯಾ ಸುಳೆ ಅವರು, ಬೆಂಕಿ ನಂದಿಸಲು ವಿಳಂಬ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.</p><p>ಅಷ್ಟು ಮುಖ್ಯವಾದ ಕಚೇರಿಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಇರಲಿಲ್ಲವೇ? ಜಗತ್ತೇ ಡಿಜಿಟಲ್ಮಯವಾಗಿದೆ. ಅಂಥದ್ದರಲ್ಲಿ ಕಡತಗಳ ಬ್ಯಾಕ್ಅಪ್ ಸಾಧ್ಯವಾಗದಿದ್ದರೆ ಅದು ಆಘಾತಕಾರಿ ಎಂದು ಹೇಳಿದ್ದಾರೆ.</p><p>ಇ.ಡಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ಗಂಭೀರ ವಿಚಾರ. ಅದು ಹೆಚ್ಚು ಜನಸಂದಣಿ ಇರದ ಪ್ರದೇಶ. ಅವಘಡ ಸಂಭವಿಸಿದ ನಂತರ ಎಷ್ಟು ಸಮಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರು ಎಂದು ಪ್ರಶ್ನಿಸಿದ್ದಾರೆ.</p><p>ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪಕಾಲ್ ಅವರು, ಇ.ಡಿಯು ತನ್ನದೇ ಕಚೇರಿಯಲ್ಲಿ ಕಡತಗಳನ್ನು ಸುಟ್ಟು ಹಾಕಿದೆ. ರಾಜಕೀಯ ಲಾಭಕ್ಕಾಗಿ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಗ್ನಿ ಅವಘಡದ ನಂತರ ಕೆಲವು ವ್ಯಕ್ತಿಗಳ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಲು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮುಂಬೈನ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟುಹೋಗಿವೆ. ಆದರೆ ಕಡತಗಳ ಡಿಜಿಟಲ್ ಸಂಗ್ರಹವೂ ಇರುವುದರಿಂದ ಪ್ರಕರಣಗಳ ತನಿಖೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸ್ಪಷ್ಟಪಡಿಸಿದೆ.</p><p>ಮುಂಬೈನ ಬಲ್ಲಾರ್ಡ್ ಎಸ್ಟೇಟ್ ಪ್ರದೇಶದ ಕೈಸರ್ 1– ಹಿಂದ್ ಕಟ್ಟಡದ ನಾಲ್ಕನೇ ಮಹಡಿಯಲ್ಲಿದ್ದ ಇ.ಡಿ ಕಚೇರಿಯಲ್ಲಿ ಭಾನುವಾರ ಮುಂಜಾನೆ 2.25ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಇದಕ್ಕೆ ಶಾರ್ಟ್ ಸರ್ಕೀಟ್ ಕಾರಣ ಎಂದು ತಿಳಿದುಬಂದಿದೆ ಎಂದು ಇ.ಡಿ ಹೇಳಿಕೆಯಲ್ಲಿ ತಿಳಿಸಿದೆ.</p><p><strong>ಅಗ್ನಿ ಅವಘಡ: ರಾಜಕೀಯ ವಾಕ್ಸಮರ</strong></p><p>ಇ.ಡಿ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡವು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು, ಒಂದೇ ಒಂದು ಕಾಗದಪತ್ರವೂ ಸುಟ್ಟುಹೋಗಿಲ್ಲ ಎಂದು ಹೇಳಿದ್ದಾರೆ.</p><p>ಅಗ್ನಿ ಅವಘಡದಿಂದ ಯಾವುದೇ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದಾರೆ.</p><p>ಎನ್ಸಿಪಿ (ಶರದ್ ಬಣ) ಸಂಸದೆ ಸುಪ್ರಿಯಾ ಸುಳೆ ಅವರು, ಬೆಂಕಿ ನಂದಿಸಲು ವಿಳಂಬ ಮಾಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.</p><p>ಅಷ್ಟು ಮುಖ್ಯವಾದ ಕಚೇರಿಯಲ್ಲಿ ಅಗ್ನಿ ಸುರಕ್ಷತಾ ವ್ಯವಸ್ಥೆ ಇರಲಿಲ್ಲವೇ? ಜಗತ್ತೇ ಡಿಜಿಟಲ್ಮಯವಾಗಿದೆ. ಅಂಥದ್ದರಲ್ಲಿ ಕಡತಗಳ ಬ್ಯಾಕ್ಅಪ್ ಸಾಧ್ಯವಾಗದಿದ್ದರೆ ಅದು ಆಘಾತಕಾರಿ ಎಂದು ಹೇಳಿದ್ದಾರೆ.</p><p>ಇ.ಡಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ಗಂಭೀರ ವಿಚಾರ. ಅದು ಹೆಚ್ಚು ಜನಸಂದಣಿ ಇರದ ಪ್ರದೇಶ. ಅವಘಡ ಸಂಭವಿಸಿದ ನಂತರ ಎಷ್ಟು ಸಮಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಬಂದಿದ್ದರು ಎಂದು ಪ್ರಶ್ನಿಸಿದ್ದಾರೆ.</p><p>ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಹರ್ಷವರ್ಧನ್ ಸಪಕಾಲ್ ಅವರು, ಇ.ಡಿಯು ತನ್ನದೇ ಕಚೇರಿಯಲ್ಲಿ ಕಡತಗಳನ್ನು ಸುಟ್ಟು ಹಾಕಿದೆ. ರಾಜಕೀಯ ಲಾಭಕ್ಕಾಗಿ ಇ.ಡಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಗ್ನಿ ಅವಘಡದ ನಂತರ ಕೆಲವು ವ್ಯಕ್ತಿಗಳ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಲು ಸುಲಭವಾಗುತ್ತದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>