<p><strong>ತಿರುವನಂತಪುರ:</strong> ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಶುಕ್ರವಾರ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.</p>.<p>ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ್ದ ಆಯಿಷಾ ಸುಲ್ತಾನಾ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಕೆ.ಪಟೇಲ್ ಅವರನ್ನು ‘ಜೈವಿಕ ಅಸ್ತ್ರ’ ಎಂದು ಕರೆದಿದ್ದರು. ಜತೆಗೆ, ‘ಕೇಂದ್ರ ಸರ್ಕಾರ ಪ್ರಫುಲ್ ಪಟೇಲ್ ಅವರನ್ನು ಲಕ್ಷದ್ವೀಪದ ಜನರ ವಿರುದ್ಧ ಜೈವಿಕ ಅಸ್ತ್ರದಂತೆ ಬಳಸುತ್ತಿದೆ’ ಎಂದು ಅವರು ಆರೋಪಿಸಿದ್ದರು.</p>.<p>‘ಆಯಿಷಾ ಸುಲ್ತಾನ ಅವರು ಸುಳ್ಳುಸುದ್ದಿ ಹರಡುವ ಮೂಲಕ ಕೇಂದ್ರ ಸರ್ಕಾರದ ಗೌರವಕ್ಕೆ ಅವರು ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಲ್ಲಿನ ಬಿಜೆಪಿ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದರು.</p>.<p>ಆಯಿಷಾ ಅವರ ಹೇಳಿಕೆ ವಿವಾದಕ್ಕೆ ಕಾರಣದ ಬೆನ್ನಲ್ಲೇ ಪೊಲೀಸರು ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/lakshadweep-aisha-sultana-moves-kerala-high-court-seeking-anticipatory-bail-in-sedition-case-838782.html" target="_blank">ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಆಯಿಷಾ ಸುಲ್ತಾನಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಶುಕ್ರವಾರ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.</p>.<p>ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ್ದ ಆಯಿಷಾ ಸುಲ್ತಾನಾ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಕೆ.ಪಟೇಲ್ ಅವರನ್ನು ‘ಜೈವಿಕ ಅಸ್ತ್ರ’ ಎಂದು ಕರೆದಿದ್ದರು. ಜತೆಗೆ, ‘ಕೇಂದ್ರ ಸರ್ಕಾರ ಪ್ರಫುಲ್ ಪಟೇಲ್ ಅವರನ್ನು ಲಕ್ಷದ್ವೀಪದ ಜನರ ವಿರುದ್ಧ ಜೈವಿಕ ಅಸ್ತ್ರದಂತೆ ಬಳಸುತ್ತಿದೆ’ ಎಂದು ಅವರು ಆರೋಪಿಸಿದ್ದರು.</p>.<p>‘ಆಯಿಷಾ ಸುಲ್ತಾನ ಅವರು ಸುಳ್ಳುಸುದ್ದಿ ಹರಡುವ ಮೂಲಕ ಕೇಂದ್ರ ಸರ್ಕಾರದ ಗೌರವಕ್ಕೆ ಅವರು ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಲ್ಲಿನ ಬಿಜೆಪಿ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದರು.</p>.<p>ಆಯಿಷಾ ಅವರ ಹೇಳಿಕೆ ವಿವಾದಕ್ಕೆ ಕಾರಣದ ಬೆನ್ನಲ್ಲೇ ಪೊಲೀಸರು ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/lakshadweep-aisha-sultana-moves-kerala-high-court-seeking-anticipatory-bail-in-sedition-case-838782.html" target="_blank">ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಆಯಿಷಾ ಸುಲ್ತಾನಾ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>