ಇ–ಹರಾಜಿನ ಮೂಲಕ ಅದಿರನ್ನು ಮಾರಾಟ ಮಾಡುವುದಕ್ಕೂ ಪರಿಸರಕ್ಕೆ ಹಾನಿ ಉಂಟಾಗುವುದಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಿಇಸಿ 2019ರಲ್ಲಿ ಸಲ್ಲಿಸಲಾದ ವರದಿಯಲ್ಲಿ ಸ್ಪಷ್ಟಪಡಿಸಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ವಿಧಿಸಿದ್ದ ಎರಡು ವರ್ಷಗಳ ಅವಧಿಯೂ ಮುಗಿದಿದ್ದು, ಅಕ್ರಮ ಗಣಿಗಾರಿಕೆ ತಡೆಗೆ ಆರಂಭಿಸಲಾಗಿದ್ದ ಇ–ಹರಾಜು ಪ್ರಕ್ರಿಯೆಯ ಉದ್ದೇಶವೂ ಈಡೇರಿದೆ. ಹಾಗಾಗಿ, ಕರ್ನಾಟಕದಲ್ಲಿ ಜಾರಿಯಲ್ಲಿರುವ ಇ–ಹರಾಜು ಪ್ರಕ್ರಿಯೆ ಸ್ಥಗಿತಗೊಳಿಸಿ ಗಣಿ ಗುತ್ತಿಗೆದಾರರೊಂದಿಗೆ ಒಪ್ಪಂದದ ಮೂಲಕ ಖರೀದಿ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.