ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಪಡೆಯದೆ ಮೇಲ್ಸೇತುವೆ ಉದ್ಘಾಟನೆ: ಶಾಸಕ ಆದಿತ್ಯ ಠಾಕ್ರೆ ವಿರುದ್ಧ ಪ್ರಕರಣ

ಬಿಎಂಸಿ ಅನುಮತಿ ಪಡೆಯದೆ ಮೇಲ್ಸೇತುವೆ ಉದ್ಘಾಟಿಸಿದ ಆರೋಪ
Published 18 ನವೆಂಬರ್ 2023, 16:27 IST
Last Updated 18 ನವೆಂಬರ್ 2023, 16:27 IST
ಅಕ್ಷರ ಗಾತ್ರ

ಮುಂಬೈ: ಇಲ್ಲಿನ ಲೋಯರ್ ಪರೇಲ್ ಪ್ರದೇಶದಲ್ಲಿ ನಿರ್ಮಾಣವಾದ ಮೇಲ್ಸೇತುವೆಯನ್ನು ಸ್ಥಳೀಯ ಆಡಳಿತದ ಅನುಮತಿ ಪಡೆಯದೆ ಉದ್ಘಾಟಿಸಿದ ಆರೋಪದ ಮೇಲೆ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಆದಿತ್ಯ ಠಾಕ್ರೆ ಹಾಗೂ ಇತರರ ವಿರುದ್ಧ ಮುಂಬೈ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬೃಹನ್ ಮುಂಬೈ ಮಹಾನಗರಪಾಲಿಕೆ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಆದಿತ್ಯ ಠಾಕ್ರೆ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಎಂಸಿ ಆಡಳಿತದ ಅನುಮತಿ ಪಡೆಯದೆ ಆದಿತ್ಯ ಠಾಕ್ರೆ, ಉದ್ಧವ್ ಬಣದ ಶಾಸಕರಾದ ಸಚಿನ್ ಅಹಿರ್ ಮತ್ತು ಸುನಿಲ್ ಶಿಂದೆ, ಮಾಜಿ ಮೇಯರ್‌ಗಳಾದ ಕಿಶೋರಿ ಪೆಡ್ನೆಕರ್ ಮತ್ತು ಸ್ನೇಹಲ್ ಅಂಬೇಕರ್ ಹಾಗೂ ಇತರ 15–20 ಮಂದಿ ಮೇಲ್ಸೇತುವೆಯನ್ನು ಉದ್ಘಾಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂಬುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಕುರಿತು ಮಾತನಾಡಿದ ಶಾಸಕ ಆದಿತ್ಯ ಠಾಕ್ರೆ, ‘ಎರಡು ವಾರಗಳ ಹಿಂದೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಸಮಯ ಇಲ್ಲದೆ ಇರುವುದರಿಂದ ಈ ಮೇಲ್ಸೇತುವೆಯನ್ನು ಜನರ ಬಳಕೆಗೆ ಮುಕ್ತ ಮಾಡಿರಲಿಲ್ಲ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT