‘ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ನನ್ನ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಸೋಜಿಗ ಉಂಟುಮಾಡಿದೆ. ಸತ್ಯ ಹೇಳಿದ್ದಕ್ಕೆ ಮತ್ತು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಕ್ಕೆ ಪಿಡಿಪಿ ತೆತ್ತ ಬೆಲೆ ಇದು. ಮತದಾನಕ್ಕೆ ಮುನ್ನ ನಮ್ಮ ಪಕ್ಷದ ನೂರಾರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಕ್ರಮವನ್ನು ಖಂಡಿಸಿ ನಾವು ಪ್ರತಿಭಟನೆ ನಡೆಸಿದ್ದೆವು’ ಎಂದು ಮೆಹಬೂಬಾ ಅವರು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ.