<p><strong>ಜಶ್ಪುರ (ಛತ್ತೀಸಗಡ)</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ವಿರುದ್ಧ ಭಾನುವಾರ ದೂರು ದಾಖಲಿಸಿದ್ದಾರೆ.</p>.<p>‘ರಾಹುಲ್ ಗಾಂಧಿ ಅವರು ಮಾದಕದ್ರವ್ಯ ಕೊಕೇನ್ ಬಳಸುತ್ತಾರೆ’ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು. ಇದು ಸುಳ್ಳು ಆರೋಪ ಎಂಬುದು ಸ್ವಾಮಿ ಅವರಿಗೂ ಗೊತ್ತಿದೆ. ಆದರೆ ರಾಹುಲ್ ಅವರನ್ನು ಅಪಮಾನಿಸುವ ಉದ್ದೇಶದಿಂದಲೇ ಅವರು ಈ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ರಾಜಕೀಯ ಪಕ್ಷಗಳಲ್ಲಿ ವೈರತ್ವವನ್ನು ಬೆಳೆಸಿ ಶಾಂತಿ ಕದಡಲು ಕಾರಣವಾಗುತ್ತದೆ’ ಎಂದು ಕಾಂಗ್ರೆಸ್ನ ಜಶ್ಪುರ್ ಜಿಲ್ಲಾ ಘಟಕದ ಅಧ್ಯಕ್ಷ ಪವನ್ ಅಗರ್ವಾಲ್ ನೀಡಿರುವ ದೂರಿನಲ್ಲಿ ಹೇಳಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಂಕರ್ಲಾಲ್ ಬಘೇಲ ತಿಳಿಸಿದರು.</p>.<p>‘ಸ್ವಾಮಿ ಅವರ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನುಅವರು ಅಪಮಾನಿಸಿದ್ದಾರೆ. ಇಂಥ ಸುಳ್ಳು ಆರೋಪ ಮಾಡುವ ನೈತಿಕ ಅಥವಾ ಕಾನೂನಾತ್ಮಕ ಅಧಿಕಾರ ಅವರಿಗೆ ಇಲ್ಲ’ ಎಂದು ಕಾಂಗ್ರೆಸ್ ರಾಜ್ಯ ಘಟಕದ ವಕ್ತಾರ ಶೈಲೇಶ್ ನಿತಿನ್ ತ್ರಿವೇದಿ ಹೇಳಿದ್ದಾರೆ.</p>.<p>ಕಾಂಗ್ರೆಸ್ನ ಮಹಿಳಾ ಘಟಕ, ರಾಷ್ಟ್ರೀಯ ವಿದ್ಯಾರ್ಥಿ ಘಟಕ ಸೇರಿದಂತೆ ಬೇರೆಬೇರೆ ಘಟಕಗಳು ರಾಜ್ಯದ ಎಲ್ಲಾ ಜಿಲ್ಲೆಗಳ ಬೇರೆಬೇರೆ ಠಾಣೆಗಳಲ್ಲಿ ಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಶ್ಪುರ (ಛತ್ತೀಸಗಡ)</strong>: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿನ ಪೊಲೀಸರು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ವಿರುದ್ಧ ಭಾನುವಾರ ದೂರು ದಾಖಲಿಸಿದ್ದಾರೆ.</p>.<p>‘ರಾಹುಲ್ ಗಾಂಧಿ ಅವರು ಮಾದಕದ್ರವ್ಯ ಕೊಕೇನ್ ಬಳಸುತ್ತಾರೆ’ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದರು. ಇದು ಸುಳ್ಳು ಆರೋಪ ಎಂಬುದು ಸ್ವಾಮಿ ಅವರಿಗೂ ಗೊತ್ತಿದೆ. ಆದರೆ ರಾಹುಲ್ ಅವರನ್ನು ಅಪಮಾನಿಸುವ ಉದ್ದೇಶದಿಂದಲೇ ಅವರು ಈ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆ ರಾಜಕೀಯ ಪಕ್ಷಗಳಲ್ಲಿ ವೈರತ್ವವನ್ನು ಬೆಳೆಸಿ ಶಾಂತಿ ಕದಡಲು ಕಾರಣವಾಗುತ್ತದೆ’ ಎಂದು ಕಾಂಗ್ರೆಸ್ನ ಜಶ್ಪುರ್ ಜಿಲ್ಲಾ ಘಟಕದ ಅಧ್ಯಕ್ಷ ಪವನ್ ಅಗರ್ವಾಲ್ ನೀಡಿರುವ ದೂರಿನಲ್ಲಿ ಹೇಳಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಶಂಕರ್ಲಾಲ್ ಬಘೇಲ ತಿಳಿಸಿದರು.</p>.<p>‘ಸ್ವಾಮಿ ಅವರ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನುಅವರು ಅಪಮಾನಿಸಿದ್ದಾರೆ. ಇಂಥ ಸುಳ್ಳು ಆರೋಪ ಮಾಡುವ ನೈತಿಕ ಅಥವಾ ಕಾನೂನಾತ್ಮಕ ಅಧಿಕಾರ ಅವರಿಗೆ ಇಲ್ಲ’ ಎಂದು ಕಾಂಗ್ರೆಸ್ ರಾಜ್ಯ ಘಟಕದ ವಕ್ತಾರ ಶೈಲೇಶ್ ನಿತಿನ್ ತ್ರಿವೇದಿ ಹೇಳಿದ್ದಾರೆ.</p>.<p>ಕಾಂಗ್ರೆಸ್ನ ಮಹಿಳಾ ಘಟಕ, ರಾಷ್ಟ್ರೀಯ ವಿದ್ಯಾರ್ಥಿ ಘಟಕ ಸೇರಿದಂತೆ ಬೇರೆಬೇರೆ ಘಟಕಗಳು ರಾಜ್ಯದ ಎಲ್ಲಾ ಜಿಲ್ಲೆಗಳ ಬೇರೆಬೇರೆ ಠಾಣೆಗಳಲ್ಲಿ ಸ್ವಾಮಿ ವಿರುದ್ಧ ದೂರುಗಳನ್ನು ದಾಖಲಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>