<p><strong>ನವದೆಹಲಿ:</strong> ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆಯು ರಾಜ್ಯಸಭೆಯಲ್ಲಿ ಸೋಮವಾರ ಪ್ರತಿಧ್ವನಿಸಿದೆ.</p>.<p>ಪೂರ್ವ ನಿರ್ಧಾರಿತ ವಿಷಯಗಳನ್ನು ಕೈಬಿಟ್ಟು, ಈ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಸಿಪಿಎಂ, ಟಿಎಂಸಿ ಹಾಗೂ ಎಎಪಿ ಸದಸ್ಯರು ಸೋಮವಾರ ಸಭಾಪತಿಗೆ ನೋಟಿಸ್ ನೀಡಿದ್ದರು. ನೋಟಿಸನ್ನು ಸಭಾಪತಿ ಮಾನ್ಯ ಮಾಡಲಿಲ್ಲ. ಆದರೆ, ಘಟನೆಯ ಬಗ್ಗೆ ಮಾತನಾಡಲು ಎಸ್ಪಿ ಮುಖಂಡ ರಾಂಗೋಪಾಲ್ ಯಾದವ್ ಅವರಿಗೆ ಅವಕಾಶ ನೀಡಿದರು.</p>.<p>ಅಪಘಾತ ಒಂದು ಸಂಚು ಎಂದು ವಾದಿಸಿದ ಯಾದವ್, ‘ಅಪಘಾತದಲ್ಲಿ ಬದುಕಿ ಉಳಿದವರ ಹತ್ಯೆ ನಡೆಸುವ ಪ್ರಯತ್ನ ನಡೆದಿದೆ. ಸಂತ್ರಸ್ತೆಯ ಭದ್ರತಾ ಸಿಬ್ಬಂದಿಯು ರಜೆಯ ಮೇಲಿದ್ದರು, ಅಪಘಾತ ನಡೆಸಿದ್ದ ಲಾರಿಯ ನೋಂದಣಿ ಸಂಖ್ಯೆಯನ್ನು ಗ್ರೀಸ್ನಿಂದ ಮುಚ್ಚಲಾಗಿತ್ತು’ ಎಂದರು.</p>.<p>ಈ ಸಂದರ್ಭದಲ್ಲಿ ಇತರ ಪಕ್ಷಗಳ ಸದಸ್ಯರೂ ಬಿಜೆಪಿ ವಿರುದ್ಧ ಹರಿಹಾಯ್ದರು. ‘ಪ್ರಕರಣದತ್ತ ಗಮನ ಹರಿಸುವಂತೆ ಕೇಂದ್ರದ ಗೃಹಸಚಿವರಿಗೆ ಸೂಚನೆ ನೀಡಲಾಗುವುದು’ ಎಂದು ಸಭಾಪತಿ ವೆಂಕಯ್ಯ ನಾಯ್ಡು ಅವರು ಭರವಸೆ ನೀಡಿದರೂ ವಿರೋಧಪಕ್ಷಗಳ ಸಿಟ್ಟು ತಣ್ಣಗಾಗಲಿಲ್ಲ. ಪರಿಣಾಮವಾಗಿ ಕಲಾಪವನ್ನು ಸ್ವಲ್ಪ ಹೊತ್ತಿನಕಾಲ ಮುಂದೂಡಬೇಕಾಯಿತು.</p>.<p><strong>ವಿರೋಧಿಗಳಿಗೆ ಅಸ್ತ್ರ:</strong>ಬಿಜೆಪಿ ವಿರುದ್ಧ ಹೋರಾಡಲು ಈ ಘಟನೆಯು ವಿರೋಧ ಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಒದಗಿಬಂದಿದೆ. ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.</p>.<p>‘ಆಕೆ (ಸಂತ್ರಸ್ತೆ) ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿಯು ಇನ್ನೂ ಬಿಜೆಪಿಯ ಶಾಸಕರಾಗಿ ಮುಂದುವರಿದಿದ್ದಾರೆ. ಇನ್ನೊಂದೆಡೆ ರಾಜ್ಯದ ಬಿಜೆಪಿ ಸರ್ಕಾರವು ‘ಭಯಮುಕ್ತ ರಾಜ್ಯ’ದ ಬಗ್ಗೆ ಪ್ರಚಾರಾಂದೋಲನ ನಡೆಸುತ್ತಿದೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ಈ ಇಡೀ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕು. ಕೋರ್ಟ್ ಮಧ್ಯಪ್ರವೇಶದಿಂದ ಮಾತ್ರ ಸಂತ್ರಸ್ತೆಗೆ ನ್ಯಾಯ ಸಿಗಲು ಸಾಧ್ಯ’ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಒತ್ತಾಯಿಸಿದ್ದಾರೆ.</p>.<p>‘ಉತ್ತರಪ್ರದೇಶದಲ್ಲಿ ದಿನನಿತ್ಯವೂ ಇಂಥ ಘಟನೆಗಳು ವರದಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕೈಮೀರಿ ಹೋಗುತ್ತಿದೆ’ ಎಂದು ತಿವಾರಿ ಟೀಕಿಸಿದ್ದಾರೆ.</p>.<p>ಪ್ರಕರಣದ ತನಿಖೆಗೆ ಉನ್ನತಮಟ್ಟದ ಸಮಿತಿಯನ್ನು ರಚಿಸಬೇಕು ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ಇದೊಂದು ವ್ಯವಸ್ಥಿತ ಸಂಚು. ಅಪಘಾತ ಘಟನೆಯು ಕಾನೂನಿನ ಅಪಹಾಸ್ಯ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ಬಿಎಸ್ಪಿ ನಾಯಕಿ ಮಾಯಾವತಿಯೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p><strong>ದೆಹಲಿಯಲ್ಲಿ ಚಿಕಿತ್ಸೆ</strong><br />ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಮಾಡಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು, ‘ಹೆಚ್ಚಿನ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಕರೆದೊಯ್ಯಲಾಗುವುದು’ ಎಂದಿದ್ದಾರೆ.</p>.<p>ಉತ್ತರಪ್ರದೇಶದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಸಂತ್ರಸ್ತೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಆಕೆಯನ್ನು ದೆಹಲಿಗೆ ಕರೆದೊಯ್ಯಲು ತುರ್ತಾಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘ಮಹಿಳೆಗೆ ದೆಹಲಿಯ ಅತ್ಯುತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ಆಸ್ಪತ್ರೆಯವರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಚಿಕಿತ್ಸೆಯ ಹೊಣೆಯನ್ನು ನಾವು ಹೊರುತ್ತೇವೆ’ ಎಂದು ಮಲಿವಾಲ್ ಟ್ವೀಟ್ ಮಾಡಿದ್ದಾರೆ.</p>.<p><strong>ಸಿಬಿಐ ತನಿಖೆಗೆ ಸಿದ್ಧ:</strong> ‘ಸಂತ್ರಸ್ತರ ಕುಟುಂಬದವರು ಮನವಿ ಮಾಡಿದರೆ ರಸ್ತೆ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸಲು ಸಿದ್ಧ’ ಎಂದು ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆಯು ರಾಜ್ಯಸಭೆಯಲ್ಲಿ ಸೋಮವಾರ ಪ್ರತಿಧ್ವನಿಸಿದೆ.</p>.<p>ಪೂರ್ವ ನಿರ್ಧಾರಿತ ವಿಷಯಗಳನ್ನು ಕೈಬಿಟ್ಟು, ಈ ಪ್ರಕರಣದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಸಿಪಿಎಂ, ಟಿಎಂಸಿ ಹಾಗೂ ಎಎಪಿ ಸದಸ್ಯರು ಸೋಮವಾರ ಸಭಾಪತಿಗೆ ನೋಟಿಸ್ ನೀಡಿದ್ದರು. ನೋಟಿಸನ್ನು ಸಭಾಪತಿ ಮಾನ್ಯ ಮಾಡಲಿಲ್ಲ. ಆದರೆ, ಘಟನೆಯ ಬಗ್ಗೆ ಮಾತನಾಡಲು ಎಸ್ಪಿ ಮುಖಂಡ ರಾಂಗೋಪಾಲ್ ಯಾದವ್ ಅವರಿಗೆ ಅವಕಾಶ ನೀಡಿದರು.</p>.<p>ಅಪಘಾತ ಒಂದು ಸಂಚು ಎಂದು ವಾದಿಸಿದ ಯಾದವ್, ‘ಅಪಘಾತದಲ್ಲಿ ಬದುಕಿ ಉಳಿದವರ ಹತ್ಯೆ ನಡೆಸುವ ಪ್ರಯತ್ನ ನಡೆದಿದೆ. ಸಂತ್ರಸ್ತೆಯ ಭದ್ರತಾ ಸಿಬ್ಬಂದಿಯು ರಜೆಯ ಮೇಲಿದ್ದರು, ಅಪಘಾತ ನಡೆಸಿದ್ದ ಲಾರಿಯ ನೋಂದಣಿ ಸಂಖ್ಯೆಯನ್ನು ಗ್ರೀಸ್ನಿಂದ ಮುಚ್ಚಲಾಗಿತ್ತು’ ಎಂದರು.</p>.<p>ಈ ಸಂದರ್ಭದಲ್ಲಿ ಇತರ ಪಕ್ಷಗಳ ಸದಸ್ಯರೂ ಬಿಜೆಪಿ ವಿರುದ್ಧ ಹರಿಹಾಯ್ದರು. ‘ಪ್ರಕರಣದತ್ತ ಗಮನ ಹರಿಸುವಂತೆ ಕೇಂದ್ರದ ಗೃಹಸಚಿವರಿಗೆ ಸೂಚನೆ ನೀಡಲಾಗುವುದು’ ಎಂದು ಸಭಾಪತಿ ವೆಂಕಯ್ಯ ನಾಯ್ಡು ಅವರು ಭರವಸೆ ನೀಡಿದರೂ ವಿರೋಧಪಕ್ಷಗಳ ಸಿಟ್ಟು ತಣ್ಣಗಾಗಲಿಲ್ಲ. ಪರಿಣಾಮವಾಗಿ ಕಲಾಪವನ್ನು ಸ್ವಲ್ಪ ಹೊತ್ತಿನಕಾಲ ಮುಂದೂಡಬೇಕಾಯಿತು.</p>.<p><strong>ವಿರೋಧಿಗಳಿಗೆ ಅಸ್ತ್ರ:</strong>ಬಿಜೆಪಿ ವಿರುದ್ಧ ಹೋರಾಡಲು ಈ ಘಟನೆಯು ವಿರೋಧ ಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ಒದಗಿಬಂದಿದೆ. ಘಟನೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.</p>.<p>‘ಆಕೆ (ಸಂತ್ರಸ್ತೆ) ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿಯು ಇನ್ನೂ ಬಿಜೆಪಿಯ ಶಾಸಕರಾಗಿ ಮುಂದುವರಿದಿದ್ದಾರೆ. ಇನ್ನೊಂದೆಡೆ ರಾಜ್ಯದ ಬಿಜೆಪಿ ಸರ್ಕಾರವು ‘ಭಯಮುಕ್ತ ರಾಜ್ಯ’ದ ಬಗ್ಗೆ ಪ್ರಚಾರಾಂದೋಲನ ನಡೆಸುತ್ತಿದೆ’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.</p>.<p>‘ಈ ಇಡೀ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಬೇಕು. ಕೋರ್ಟ್ ಮಧ್ಯಪ್ರವೇಶದಿಂದ ಮಾತ್ರ ಸಂತ್ರಸ್ತೆಗೆ ನ್ಯಾಯ ಸಿಗಲು ಸಾಧ್ಯ’ ಎಂದು ಕಾಂಗ್ರೆಸ್ ವಕ್ತಾರ ಮನೀಶ್ ತಿವಾರಿ ಒತ್ತಾಯಿಸಿದ್ದಾರೆ.</p>.<p>‘ಉತ್ತರಪ್ರದೇಶದಲ್ಲಿ ದಿನನಿತ್ಯವೂ ಇಂಥ ಘಟನೆಗಳು ವರದಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಕೈಮೀರಿ ಹೋಗುತ್ತಿದೆ’ ಎಂದು ತಿವಾರಿ ಟೀಕಿಸಿದ್ದಾರೆ.</p>.<p>ಪ್ರಕರಣದ ತನಿಖೆಗೆ ಉನ್ನತಮಟ್ಟದ ಸಮಿತಿಯನ್ನು ರಚಿಸಬೇಕು ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.</p>.<p>‘ಇದೊಂದು ವ್ಯವಸ್ಥಿತ ಸಂಚು. ಅಪಘಾತ ಘಟನೆಯು ಕಾನೂನಿನ ಅಪಹಾಸ್ಯ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ಬಿಎಸ್ಪಿ ನಾಯಕಿ ಮಾಯಾವತಿಯೂ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>.<p><strong>ದೆಹಲಿಯಲ್ಲಿ ಚಿಕಿತ್ಸೆ</strong><br />ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯನ್ನು ಭೇಟಿಮಾಡಿರುವ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು, ‘ಹೆಚ್ಚಿನ ಚಿಕಿತ್ಸೆಗಾಗಿ ಸಂತ್ರಸ್ತೆಯನ್ನು ದೆಹಲಿಗೆ ಕರೆದೊಯ್ಯಲಾಗುವುದು’ ಎಂದಿದ್ದಾರೆ.</p>.<p>ಉತ್ತರಪ್ರದೇಶದ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ಸಂತ್ರಸ್ತೆಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದು, ಆಕೆಯನ್ನು ದೆಹಲಿಗೆ ಕರೆದೊಯ್ಯಲು ತುರ್ತಾಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದಾರೆ.</p>.<p>‘ಮಹಿಳೆಗೆ ದೆಹಲಿಯ ಅತ್ಯುತ್ತಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರೆ. ನಾನು ಆಸ್ಪತ್ರೆಯವರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಚಿಕಿತ್ಸೆಯ ಹೊಣೆಯನ್ನು ನಾವು ಹೊರುತ್ತೇವೆ’ ಎಂದು ಮಲಿವಾಲ್ ಟ್ವೀಟ್ ಮಾಡಿದ್ದಾರೆ.</p>.<p><strong>ಸಿಬಿಐ ತನಿಖೆಗೆ ಸಿದ್ಧ:</strong> ‘ಸಂತ್ರಸ್ತರ ಕುಟುಂಬದವರು ಮನವಿ ಮಾಡಿದರೆ ರಸ್ತೆ ಅಪಘಾತದ ಬಗ್ಗೆ ಸಿಬಿಐ ತನಿಖೆ ನಡೆಸಲು ಸಿದ್ಧ’ ಎಂದು ಪೊಲೀಸ್ ಮಹಾನಿರ್ದೇಶಕ ಒ.ಪಿ. ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>