<p><strong>ನವದೆಹಲಿ</strong>: ಸಾರ್ವಜನಿಕ ರ್ಯಾಲಿ ಸಂದರ್ಭ ಪ್ರಧಾನಿ ನರೇಂದ್ರಮೋದಿ ವಿರುದ್ಧ ಬೆದರಿಕೆಯ ಹೇಳಿಕೆ ನೀಡಿದ ಆರೋಪದಡಿ ತಮಿಳುನಾಡು ಸಚಿವ ಟಿ.ಎಂ. ಅಂಬರಸನ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ಸುಪ್ರೀಂ ಕೋರ್ಟ್ ವಕೀಲ ಸತ್ಯ ರಂಜನ್ ಸ್ವೈನ್ ನೀಡಿದ ದೂರಿನ ಆಧಾರದ ಮೇಲೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ತಮಿಳುನಾಡಿನ ಗ್ರಾಮೀಣ ಕೈಗಾರಿಕೆ, ಗುಡಿ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವ ಅಂಬರಸನ್, ಪ್ರಧಾನಿ ಮೋದಿಯವರನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ಅಂಬರಸನ್ ಹೇಳಿಕೆಯು ಪ್ರಧಾನಮಂತ್ರಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಕಳವಳದ ವಿಷಯವಾಗಿದೆ. ಉದ್ದೇಶಪೂರ್ವಕವಾಗಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುವ ಯತ್ನ ನಡೆಸಲಾಗಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p><p>ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 268 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 503 (ಅಪರಾಧ ಬೆದರಿಕೆ), 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಾರ್ವಜನಿಕ ರ್ಯಾಲಿ ಸಂದರ್ಭ ಪ್ರಧಾನಿ ನರೇಂದ್ರಮೋದಿ ವಿರುದ್ಧ ಬೆದರಿಕೆಯ ಹೇಳಿಕೆ ನೀಡಿದ ಆರೋಪದಡಿ ತಮಿಳುನಾಡು ಸಚಿವ ಟಿ.ಎಂ. ಅಂಬರಸನ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p><p>ಸುಪ್ರೀಂ ಕೋರ್ಟ್ ವಕೀಲ ಸತ್ಯ ರಂಜನ್ ಸ್ವೈನ್ ನೀಡಿದ ದೂರಿನ ಆಧಾರದ ಮೇಲೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ತಮಿಳುನಾಡಿನ ಗ್ರಾಮೀಣ ಕೈಗಾರಿಕೆ, ಗುಡಿ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವ ಅಂಬರಸನ್, ಪ್ರಧಾನಿ ಮೋದಿಯವರನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.</p><p>‘ಅಂಬರಸನ್ ಹೇಳಿಕೆಯು ಪ್ರಧಾನಮಂತ್ರಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಕಳವಳದ ವಿಷಯವಾಗಿದೆ. ಉದ್ದೇಶಪೂರ್ವಕವಾಗಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುವ ಯತ್ನ ನಡೆಸಲಾಗಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.</p><p>ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 268 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 503 (ಅಪರಾಧ ಬೆದರಿಕೆ), 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>