<p><strong>ಗ್ವಾಲಿಯರ್: </strong>‘ಹಿಂದೂ ಮಹಾಕಾವ್ಯ ‘ರಾಮಚರಿತ ಮಾನಸ’ವನ್ನು ಟೀಕಿಸಿದ ಆರೋಪಕ್ಕಾಗಿ ಉತ್ತರ ಪ್ರದೇಶದ ಮಾಜಿ ಸಚಿವ ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.</p>.<p>‘ಹಿಂದೂ ಮಹಾಸಭಾ ನೀಡಿದ ದೂರಿನ ಆಧಾರದ ಮೇರೆಗೆ ಗುರುವಾರ ಎಫ್ಐಆರ್ ದಾಖಲಿಸಲಾಗಿದೆ. ಮೌರ್ಯ ಅವರು ಸೇರಿದಂತೆ ಇನ್ನೂ ಎಂಟು ಮಂದಿಯ ಹೆಸರನ್ನೂ ಎಫ್ಐಆರ್ನಲ್ಲಿ ನಮೂದಿಸಲಾಗಿದೆ’ ಎಂದರು.</p>.<p>‘ರಾಮಚರಿತಮಾನಸದ ಕೆಲವು ಸಾಲುಗಳು ಜಾತಿಯನ್ನು ಆಧಾರವಾಗಿಟ್ಟುಕೊಂಡು ಸಮಾಜದ ದೊಡ್ಡ ವರ್ಗವೊಂದನ್ನು ಅವಮಾನಿಸುತ್ತವೆ. ಆದ್ದರಿಂದ ಈ ಸಾಲುಗಳಿಗೆ ನಿಷೇಧ ಹೇರಬೇಕು’ ಎಂದು ಮೌರ್ಯ ಅವರು ಇತ್ತೀಚೆಗೆ ಹೇಳಿದ್ದರು.</p>.<p>ರಾಮಾಯಣದ ಆಧಾರವಾಗಿಟ್ಟುಕೊಂಡು, 16ನೇ ಶತಮಾನದ ಭಕ್ತಿ ಚಳವಳಿಯ ಕವಿ ತುಳಸಿದಾಸ ಅವರು ರಾಮಚರಿತಮಾನಸ ಮಹಾಕಾವ್ಯವನ್ನು ಅವಧಿ ಭಾಷೆಯಲ್ಲಿ ರಚಿಸಿದ್ದಾರೆ.</p>.<p>‘ಹಿಂದೂ ಮಹಾಸಭಾ ದೂರಿನನ್ವಯ ಈ ಪ್ರಕರಣವನ್ನು ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ’ ಎಂದು ಗ್ವಾಲಿಯರ್ನ ಎಸ್ಪಿ ಅಮಿತ್ ಸಂಘಿ ಅವರು ಹೇಳಿದರು.</p>.<p>‘ಆರೋಪಿಗಳನ್ನು ಮಹಾಶಿವರಾತ್ರಿಯ ವೇಳೆಗೆ (ಫೆ. 19) ಬಂಧಿಸದಿದ್ದರೆ ಹೃಷಿಕೇಶದಲ್ಲಿನ ಸಂಘಟನಾ ಸಭೆಯ ನಂತರ ಈ ಕುರಿತು ಆಂದೋಲನವನ್ನು ತೀವ್ರಗೊಳಿಸಲಾಗುವುದು’ ಎಂದು ಹಿಂದೂ ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ತಿಳಿಸಿದರು.</p>.<p>ಎಫ್ಐಆರ್ ದಾಖಲಾದ ಬಳಿಕ, ಒಬಿಸಿ ಮಹಾಸಭಾವು ಸ್ವಾಮಿ ಪ್ರಸಾದ್ ಮೌರ್ಯ ಅವರ ಬೆಂಬಲಕ್ಕೆ ನಿಂತಿದ್ದು, ಮೌರ್ಯ ಅವರನ್ನು ಅಪಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗ್ವಾಲಿಯರ್: </strong>‘ಹಿಂದೂ ಮಹಾಕಾವ್ಯ ‘ರಾಮಚರಿತ ಮಾನಸ’ವನ್ನು ಟೀಕಿಸಿದ ಆರೋಪಕ್ಕಾಗಿ ಉತ್ತರ ಪ್ರದೇಶದ ಮಾಜಿ ಸಚಿವ ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.</p>.<p>‘ಹಿಂದೂ ಮಹಾಸಭಾ ನೀಡಿದ ದೂರಿನ ಆಧಾರದ ಮೇರೆಗೆ ಗುರುವಾರ ಎಫ್ಐಆರ್ ದಾಖಲಿಸಲಾಗಿದೆ. ಮೌರ್ಯ ಅವರು ಸೇರಿದಂತೆ ಇನ್ನೂ ಎಂಟು ಮಂದಿಯ ಹೆಸರನ್ನೂ ಎಫ್ಐಆರ್ನಲ್ಲಿ ನಮೂದಿಸಲಾಗಿದೆ’ ಎಂದರು.</p>.<p>‘ರಾಮಚರಿತಮಾನಸದ ಕೆಲವು ಸಾಲುಗಳು ಜಾತಿಯನ್ನು ಆಧಾರವಾಗಿಟ್ಟುಕೊಂಡು ಸಮಾಜದ ದೊಡ್ಡ ವರ್ಗವೊಂದನ್ನು ಅವಮಾನಿಸುತ್ತವೆ. ಆದ್ದರಿಂದ ಈ ಸಾಲುಗಳಿಗೆ ನಿಷೇಧ ಹೇರಬೇಕು’ ಎಂದು ಮೌರ್ಯ ಅವರು ಇತ್ತೀಚೆಗೆ ಹೇಳಿದ್ದರು.</p>.<p>ರಾಮಾಯಣದ ಆಧಾರವಾಗಿಟ್ಟುಕೊಂಡು, 16ನೇ ಶತಮಾನದ ಭಕ್ತಿ ಚಳವಳಿಯ ಕವಿ ತುಳಸಿದಾಸ ಅವರು ರಾಮಚರಿತಮಾನಸ ಮಹಾಕಾವ್ಯವನ್ನು ಅವಧಿ ಭಾಷೆಯಲ್ಲಿ ರಚಿಸಿದ್ದಾರೆ.</p>.<p>‘ಹಿಂದೂ ಮಹಾಸಭಾ ದೂರಿನನ್ವಯ ಈ ಪ್ರಕರಣವನ್ನು ತನಿಖೆಗಾಗಿ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ’ ಎಂದು ಗ್ವಾಲಿಯರ್ನ ಎಸ್ಪಿ ಅಮಿತ್ ಸಂಘಿ ಅವರು ಹೇಳಿದರು.</p>.<p>‘ಆರೋಪಿಗಳನ್ನು ಮಹಾಶಿವರಾತ್ರಿಯ ವೇಳೆಗೆ (ಫೆ. 19) ಬಂಧಿಸದಿದ್ದರೆ ಹೃಷಿಕೇಶದಲ್ಲಿನ ಸಂಘಟನಾ ಸಭೆಯ ನಂತರ ಈ ಕುರಿತು ಆಂದೋಲನವನ್ನು ತೀವ್ರಗೊಳಿಸಲಾಗುವುದು’ ಎಂದು ಹಿಂದೂ ಮಹಾಸಭಾದ ಉಪಾಧ್ಯಕ್ಷ ಜೈವೀರ್ ಭಾರದ್ವಾಜ್ ತಿಳಿಸಿದರು.</p>.<p>ಎಫ್ಐಆರ್ ದಾಖಲಾದ ಬಳಿಕ, ಒಬಿಸಿ ಮಹಾಸಭಾವು ಸ್ವಾಮಿ ಪ್ರಸಾದ್ ಮೌರ್ಯ ಅವರ ಬೆಂಬಲಕ್ಕೆ ನಿಂತಿದ್ದು, ಮೌರ್ಯ ಅವರನ್ನು ಅಪಮಾನಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>