<p><strong>ಮುಂಬೈ:</strong> ದಕ್ಷಿಣ ಮುಂಬೈಯ ಗ್ರ್ಯಾಂಟ್ ರಸ್ತೆಯ ನಾನಾ ಚೌಕದ 20 ಮಹಡಿ ಕಟ್ಟಡವೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 17 ಜನ ಗಾಯಗೊಂಡಿದ್ದಾರೆ.</p>.<p>18ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 7:28ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಗಾಯಾಳುಗಳನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ಮಂದಿಯ ಆರೋಗ್ಯ ಸ್ಥಿರವಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ನಾಲ್ವರು ಗಾಯಾಳುಗಳನ್ನು ನಾಯರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಸಾವಿಗೀಡಾಗಿದ್ದರು.</p>.<p>ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದಕ್ಷಿಣ ಮುಂಬೈಯ ಗ್ರ್ಯಾಂಟ್ ರಸ್ತೆಯ ನಾನಾ ಚೌಕದ 20 ಮಹಡಿ ಕಟ್ಟಡವೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 17 ಜನ ಗಾಯಗೊಂಡಿದ್ದಾರೆ.</p>.<p>18ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿದ್ದಾರೆ.</p>.<p>ಬೆಳಿಗ್ಗೆ 7:28ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.</p>.<p>ಗಾಯಾಳುಗಳನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ಮಂದಿಯ ಆರೋಗ್ಯ ಸ್ಥಿರವಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ನಾಲ್ವರು ಗಾಯಾಳುಗಳನ್ನು ನಾಯರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಸಾವಿಗೀಡಾಗಿದ್ದರು.</p>.<p>ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>