<p><strong>ರಜೌರಿ:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಇಂದು (ಮಂಗಳವಾರ) ಬೆಂಕಿ ಅವಘಡ ಸಂಭವಿಸಿದ್ದು, 150ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>'ರಜೌರಿ ಪಟ್ಟಣದಲ್ಲಿರುವ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು. ಯಾವುದೇ ಸಾವು-ನೋವು ವರದಿಯಾಗಿಲ್ಲ' ಎಂದು ಅಗ್ನಿಶಾಮಕದಳ ಅಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. </p><p>'ಆಸ್ಪತ್ರೆಯ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿತ್ತು. ಒಂದು ಗಂಟೆಯೊಳಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು' ಎಂದು ಅವರು ತಿಳಿಸಿದ್ದಾರೆ. </p><p>ಮೂರು ಅಗ್ನಿಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸಲಾಯಿತು. ಬೆಂಕಿ ಅವಘಡ ಸಂಬಂಧ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.</p><p>'ಒಪಿಡಿ ಸೇರಿದಂತೆ ಆಸ್ಪತ್ರೆಯ ಸಹಜ ಕಾರ್ಯಾಚರಣೆ ಪುನಃಸ್ಥಾಪಿಸುವುದಕ್ಕೆ ಮೊದಲ ಆದ್ಯತೆ ನೀಡಿದ್ದೇವೆ' ಎಂದು ರಜೌರಿಯ ಡೆಪ್ಯೂಟಿ ಕಮಿಷನರ್ ಅಭಿಷೇಕ್ ಶರ್ಮಾ ತಿಳಿಸಿದ್ದಾರೆ.</p>.ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು–ಉಗ್ರರ ನಡುವೆ ಗುಂಡಿನ ಚಕಮಕಿ.ಜಮ್ಮು ಮತ್ತು ಕಾಶ್ಮೀರ | ಮತ್ತೆ ತಗಾದೆ ಎತ್ತಿದ ಪಾಕ್ಗೆ ಭಾರತ ತಿರುಗೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಜೌರಿ:</strong> ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಇಂದು (ಮಂಗಳವಾರ) ಬೆಂಕಿ ಅವಘಡ ಸಂಭವಿಸಿದ್ದು, 150ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>'ರಜೌರಿ ಪಟ್ಟಣದಲ್ಲಿರುವ ಆಸ್ಪತ್ರೆಯ ನೆಲಮಾಳಿಗೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿತು. ಯಾವುದೇ ಸಾವು-ನೋವು ವರದಿಯಾಗಿಲ್ಲ' ಎಂದು ಅಗ್ನಿಶಾಮಕದಳ ಅಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ. </p><p>'ಆಸ್ಪತ್ರೆಯ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿತ್ತು. ಒಂದು ಗಂಟೆಯೊಳಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು' ಎಂದು ಅವರು ತಿಳಿಸಿದ್ದಾರೆ. </p><p>ಮೂರು ಅಗ್ನಿಶಾಮಕ ವಾಹನಗಳ ನೆರವಿನಿಂದ ಬೆಂಕಿ ನಂದಿಸಲಾಯಿತು. ಬೆಂಕಿ ಅವಘಡ ಸಂಬಂಧ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.</p><p>'ಒಪಿಡಿ ಸೇರಿದಂತೆ ಆಸ್ಪತ್ರೆಯ ಸಹಜ ಕಾರ್ಯಾಚರಣೆ ಪುನಃಸ್ಥಾಪಿಸುವುದಕ್ಕೆ ಮೊದಲ ಆದ್ಯತೆ ನೀಡಿದ್ದೇವೆ' ಎಂದು ರಜೌರಿಯ ಡೆಪ್ಯೂಟಿ ಕಮಿಷನರ್ ಅಭಿಷೇಕ್ ಶರ್ಮಾ ತಿಳಿಸಿದ್ದಾರೆ.</p>.ಜಮ್ಮು & ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು–ಉಗ್ರರ ನಡುವೆ ಗುಂಡಿನ ಚಕಮಕಿ.ಜಮ್ಮು ಮತ್ತು ಕಾಶ್ಮೀರ | ಮತ್ತೆ ತಗಾದೆ ಎತ್ತಿದ ಪಾಕ್ಗೆ ಭಾರತ ತಿರುಗೇಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>