<p><strong>ಕೋಲ್ಕತ್ತ:</strong> ಇಲ್ಲಿನ ಭಾರತೀಯ ರೈಲ್ವೆ ಕಚೇರಿ ಇರುವ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ರೈಲ್ವೆ ಸುರಕ್ಷತಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೇರಿದಂತೆ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಂಕಿಯನ್ನು ನಂದಿಸುವ ಪ್ರಯತ್ನ, ಬಹುಮಹಡಿ ಕಟ್ಟಡದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವ ಸಂದರ್ಭ ಲಿಫ್ಟ್ನ ಒಳ ಸಿಲುಕಿದ ಸಿಬ್ಬಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.</p>.<p><strong>ಓದಿ:</strong><a href="https://www.prajavani.net/business/budget/opinions-of-leaders-opinion-about-state-karnataka-budget-2021-811778.html" itemprop="url">Karnataka Budget 2021: ಬಜೆಟ್ ಕುರಿತು ಜನನಾಯಕರ ಪ್ರತಿಕ್ರಿಯೆ ಹೀಗಿತ್ತು...</a></p>.<p>‘ಇದು ಅತ್ಯಂತ ದುರದೃಷ್ಟಕರ ಘಟನೆ. ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ನಾಲ್ವರು ಅಗ್ನಿಶಾಕ ದಳದ ಸಿಬ್ಬಂದಿ, ಒಬ್ಬ ಆರ್ಪಿಎಫ್ ಸಿಬ್ಬಂದಿ ಹಾಗೂ ಒಬ್ಬರು ಎಎಸ್ಐ ಸೇರಿದ್ದಾರೆ. ಮತ್ತೊಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ’ ಎಂದು ಅಗ್ನಿ ಮತ್ತು ತುರ್ತು ಸೇವೆಗಳ ಇಲಾಖೆ ಸಚಿವ ಸುಜಿತ್ ಬಸು ತಿಳಿಸಿದ್ದಾರೆ.</p>.<p>ಸೋಮವಾರ ರಾತ್ರಿ 8.30ರ ವೇಳೆಗೆ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದೂ ಅವರು ತಿಳಿಸಿದ್ದಾರೆ.</p>.<p>‘ಸಿಬ್ಬಂದಿ 13ನೇ ಮಹಡಿಗೆ ಲಿಫ್ಟ್ನಲ್ಲಿ ತೆರಳಿದ್ದರು. ಅತಿಯಾದ ಬಿಸಿ ಮತ್ತು ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ’ ಎಂದು ಬಸು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/karnataka-budget-2021-chief-minister-bs-yediyurappa-has-presents-the-karnataka-state-budget-811774.html" itemprop="url">Karnataka Budget 2021: ಬರೀ ನೋಟ, ಸಾಲದ ಆಟ</a></p>.<p>ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಮಮತಾ:</strong> ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ತಲಾ ₹10 ಲಕ್ಷ ಪರಿಹಾರ ಹಾಗೂ ಸಂಬಂಧಿಯೊಬ್ಬರಿಗೆ ಸರ್ಕಾರಿ ನೌಕರಿ ಕೊಡುವುದಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಇಲ್ಲಿನ ಭಾರತೀಯ ರೈಲ್ವೆ ಕಚೇರಿ ಇರುವ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಹಾಗೂ ರೈಲ್ವೆ ಸುರಕ್ಷತಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೇರಿದಂತೆ ಕನಿಷ್ಠ 7 ಮಂದಿ ಮೃತಪಟ್ಟಿದ್ದಾರೆ.</p>.<p>ಬೆಂಕಿಯನ್ನು ನಂದಿಸುವ ಪ್ರಯತ್ನ, ಬಹುಮಹಡಿ ಕಟ್ಟಡದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವ ಸಂದರ್ಭ ಲಿಫ್ಟ್ನ ಒಳ ಸಿಲುಕಿದ ಸಿಬ್ಬಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.</p>.<p><strong>ಓದಿ:</strong><a href="https://www.prajavani.net/business/budget/opinions-of-leaders-opinion-about-state-karnataka-budget-2021-811778.html" itemprop="url">Karnataka Budget 2021: ಬಜೆಟ್ ಕುರಿತು ಜನನಾಯಕರ ಪ್ರತಿಕ್ರಿಯೆ ಹೀಗಿತ್ತು...</a></p>.<p>‘ಇದು ಅತ್ಯಂತ ದುರದೃಷ್ಟಕರ ಘಟನೆ. ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ ನಾಲ್ವರು ಅಗ್ನಿಶಾಕ ದಳದ ಸಿಬ್ಬಂದಿ, ಒಬ್ಬ ಆರ್ಪಿಎಫ್ ಸಿಬ್ಬಂದಿ ಹಾಗೂ ಒಬ್ಬರು ಎಎಸ್ಐ ಸೇರಿದ್ದಾರೆ. ಮತ್ತೊಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ’ ಎಂದು ಅಗ್ನಿ ಮತ್ತು ತುರ್ತು ಸೇವೆಗಳ ಇಲಾಖೆ ಸಚಿವ ಸುಜಿತ್ ಬಸು ತಿಳಿಸಿದ್ದಾರೆ.</p>.<p>ಸೋಮವಾರ ರಾತ್ರಿ 8.30ರ ವೇಳೆಗೆ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದೂ ಅವರು ತಿಳಿಸಿದ್ದಾರೆ.</p>.<p>‘ಸಿಬ್ಬಂದಿ 13ನೇ ಮಹಡಿಗೆ ಲಿಫ್ಟ್ನಲ್ಲಿ ತೆರಳಿದ್ದರು. ಅತಿಯಾದ ಬಿಸಿ ಮತ್ತು ಉಸಿರುಗಟ್ಟುವಿಕೆಯಿಂದ ಮೃತಪಟ್ಟಿದ್ದಾರೆ’ ಎಂದು ಬಸು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/karnataka-budget-2021-chief-minister-bs-yediyurappa-has-presents-the-karnataka-state-budget-811774.html" itemprop="url">Karnataka Budget 2021: ಬರೀ ನೋಟ, ಸಾಲದ ಆಟ</a></p>.<p>ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಸ್ಥಳಕ್ಕೆ ಧಾವಿಸಿದ ಮುಖ್ಯಮಂತ್ರಿ ಮಮತಾ:</strong> ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ತಲಾ ₹10 ಲಕ್ಷ ಪರಿಹಾರ ಹಾಗೂ ಸಂಬಂಧಿಯೊಬ್ಬರಿಗೆ ಸರ್ಕಾರಿ ನೌಕರಿ ಕೊಡುವುದಾಗಿ ಘೋಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>