<p><strong>ನವದೆಹಲಿ</strong>: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್ನಲ್ಲಿರುವ ಬಿಜೆಪಿಯ ಹಿರಿಯ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ದೆಹಲಿಯ ಅಗ್ನಿಶಾಮಕ ಸೇವೆಯ(ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಅವಘಡದ ಸಂದರ್ಭದಲ್ಲಿ ಸಂಸದರು ಮನೆಯಲ್ಲಿ ಇದ್ದರೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.</p> <p>ಬೆಳಿಗ್ಗೆ 8.05ರ ಸುಮಾರಿಗೆ ಪ್ರಸಾದ್ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಡಿಎಫ್ಎಸ್ ಕೇಂದ್ರಕ್ಕೆ ಕರೆ ಬಂದಿತ್ತು. ಮನೆಯ ಕೊಠಡಿಯೊಂದರಲ್ಲಿ ಇರಿಸಲಾಗಿದ್ದ ಪೀಠೋಪಕರಣಗಳಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿ ಹೇಳಿದ್ದಾರೆ.</p><p>ಸ್ಥಳಕ್ಕೆ ತೆರಳಿದ ಮೂರು ಅಗ್ನಿಶಾಮಕ ವಾಹನಗಳು ಬೆಳಿಗ್ಗೆ 8.35ರ ಸುಮಾರಿಗೆ ಬೆಂಕಿ ನಂದಿಸಿದವು. ಯಾರಿಗೂ ಗಾಯಗಳಾಗಿಲ್ಲ. ಅಗ್ನಿ ಅವಘಡದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಅವರು ಹೇಳಿದ್ದಾರೆ.</p><p>ದೆಹಲಿ ಪೊಲೀಸರ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಸ್ಥಳಕ್ಕೆ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್ನಲ್ಲಿರುವ ಬಿಜೆಪಿಯ ಹಿರಿಯ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ದೆಹಲಿಯ ಅಗ್ನಿಶಾಮಕ ಸೇವೆಯ(ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಅವಘಡದ ಸಂದರ್ಭದಲ್ಲಿ ಸಂಸದರು ಮನೆಯಲ್ಲಿ ಇದ್ದರೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.</p> <p>ಬೆಳಿಗ್ಗೆ 8.05ರ ಸುಮಾರಿಗೆ ಪ್ರಸಾದ್ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಡಿಎಫ್ಎಸ್ ಕೇಂದ್ರಕ್ಕೆ ಕರೆ ಬಂದಿತ್ತು. ಮನೆಯ ಕೊಠಡಿಯೊಂದರಲ್ಲಿ ಇರಿಸಲಾಗಿದ್ದ ಪೀಠೋಪಕರಣಗಳಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿ ಹೇಳಿದ್ದಾರೆ.</p><p>ಸ್ಥಳಕ್ಕೆ ತೆರಳಿದ ಮೂರು ಅಗ್ನಿಶಾಮಕ ವಾಹನಗಳು ಬೆಳಿಗ್ಗೆ 8.35ರ ಸುಮಾರಿಗೆ ಬೆಂಕಿ ನಂದಿಸಿದವು. ಯಾರಿಗೂ ಗಾಯಗಳಾಗಿಲ್ಲ. ಅಗ್ನಿ ಅವಘಡದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಅವರು ಹೇಳಿದ್ದಾರೆ.</p><p>ದೆಹಲಿ ಪೊಲೀಸರ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಸ್ಥಳಕ್ಕೆ ತೆರಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>