ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಂಚಿ: ಬೆಂಕಿಗೆ ಆಹುತಿಯಾದ ನಾಲ್ಕು ಬಸ್!

Published 29 ಜೂನ್ 2023, 11:54 IST
Last Updated 29 ಜೂನ್ 2023, 11:54 IST
ಅಕ್ಷರ ಗಾತ್ರ

ರಾಂಚಿ: ಇಲ್ಲಿನ ಖಾದಗಡ ಅಂತರರಾಜ್ಯ ಬಸ್‌ ನಿಲ್ದಾಣದಲ್ಲಿ ನಿಲ್ಲಿಸಿದ್ದ ನಾಲ್ಕು ಬಸ್‌ಗಳು ಗುರುವಾರ ಬೆಂಕಿಗೆ ಆಹುತಿಯಾಗಿವೆ ಎಂದು ಲೋರ್ ಬಜಾರ್ ಪೊಲೀಸರು ತಿಳಿಸಿದ್ದಾರೆ.

ಬಸ್‌ನಲ್ಲಿ ಯಾರೊಬ್ಬರೂ ಇರದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ ಎಂದಿದ್ದಾರೆ.

‘ಮೊದಲು ಒಂದು ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. ಗಾಳಿ ಜೋರಾಗಿದ್ದರಿಂದ ಪಕ್ಕದಲ್ಲಿದ್ದ ಮೂರು ಬಸ್‌ಗಳಿಗೂ ಅಗ್ನಿಜ್ವಾಲೆ ತಗುಲಿ ಹೊತ್ತಿ ಉರಿದವು. ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು ನಂದಿಸಿದರು’ ಎಂದು ಖಾದಗಡ ಔಟ್‌ಫೋಸ್ಟ್‌ ಪೊಲೀಸ್ ಠಾಣೆಯ ಅಧಿಕಾರಿ ಆಕಾಶ್ ಭಾರದ್ವಾಜ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT